ಕೃಷಿ ಸಚಿವರ ಹೇಳಿಕೆ ಕುರಿತು ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಹೆಂಡತಿ, ಮಕ್ಕಳು, ನೆಂಟರು, ಊರಿನವರ ಮುಂದೆ ಮರ್ಯಾದೆ ಹೋಯಿತು ಎಂದು ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ. ಹೇಡಿತನದ ಪಟ್ಟ ಕಟ್ಟಿಕೊಳ್ಳಲು ಅಲ್ಲ. ಕೃಷಿ ಸಚಿವರ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅವಮಾನ. ರೈತರ ಕುರಿತು ಕೃಷಿ ಸಚಿವರೇ ನಾಲಿಗೆ ಹರಿಯಬಿಟ್ಟಿರುವುದು ಖಂಡನೀಯ’ ಎಂದು ಟೀಕಿಸಿದ್ದಾರೆ.