<p><strong>ಬೆಂಗಳೂರು:</strong> ಬಿ. ಫಾರ್ಮಾ ಕೋರ್ಸ್ಗೆ ಪ್ರವೇಶ ಪಡೆದ ಎಂಟು ವಿದ್ಯಾರ್ಥಿಗಳಿಂದ ಕಟ್ಟಿಸಿಕೊಂಡಿದ್ದ ಹೆಚ್ಚುವರಿ ಶುಲ್ಕವನ್ನು ಎರಡು ಕಾಲೇಜುಗಳು ಹಿಂದಿರುಗಿಸಿವೆ.</p>.<p>ನಗರದ ಆಚಾರ್ಯ ಮತ್ತು ಬಿ.ಎಂ. ರೆಡ್ಡಿ ಫಾರ್ಮಸಿ ಕಾಲೇಜುಗಳು ಒಟ್ಟು ₹5.40 ಲಕ್ಷ ಹೆಚ್ಚುವರಿ ಶುಲ್ಕ ಕಟ್ಟಿಸಿಕೊಂಡಿದ್ದವು. ಈ ಕುರಿತು ಎಂಟು ವಿದ್ಯಾರ್ಥಿಗಳು ಸಮಿತಿ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ. ಶ್ರೀನಿವಾಸಗೌಡ ಅವರ ಅಧ್ಯಕ್ಷತೆಯ ಶುಲ್ಕ ನಿಯಂತ್ರಣ ಸಮಿತಿಗೆ ದೂರು ನೀಡಿದ್ದರು. ಕಾಲೇಜಿನ ಆಡಳಿತ ಮಂಡಳಿಯ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳನ್ನು ಕರೆಸಿ, ವಿಚಾರಣೆ ನಡೆಸಿದ ನಂತರ ಹೆಚ್ಚುವರಿ ಶುಲ್ಕ ವಾಪಸ್ ನೀಡಲಾಗಿದೆ.</p>.<p><strong>ವೈದ್ಯಕೀಯ ಶುಲ್ಕ 8 ಲಕ್ಷ ವರ್ಗಾವಣೆ:</strong> ಮಂಗಳೂರಿನ ಜಿ.ಆರ್. ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಾದ ಪೂಜಿತಾ ಜೆ. ಅಂಗಡಿ ಅವರಿಗೆ ₹7 ಲಕ್ಷ, ತುಷಾರ್ ಬಿ.ಭಾಸ್ಮೆ ಅವರಿಗೆ ₹1 ಲಕ್ಷ ಶುಲ್ಕವನ್ನು ಸಮಿತಿ ವರ್ಗಾವಣೆ ಮಾಡಿಕೊಟ್ಟಿದೆ.</p>.<p>ಕಾಲೇಜಿನ ಮಾನ್ಯತೆ ರದ್ದಾದ ನಂತರ ಆ ಕಾಲೇಜಿನ ವಿದ್ಯಾರ್ಥಿಗಳನ್ನು ಬೇರೆ ಕಾಲೇಜುಗಳಿಗೆ ವರ್ಗಾಯಿಸಲಾಗಿತ್ತು. ಆದರೆ, ಶುಲ್ಕ ವರ್ಗಾವಣೆ ಆಗಿರಲಿಲ್ಲ. ಹಾಗಾಗಿ, ವಿದ್ಯಾರ್ಥಿಗಳು ಸಮಿತಿಗೆ ದೂರು ನೀಡಿದ್ದರು.</p>.<p>ಎಂ.ಬಿ.ಎ.ಕೋರ್ಸ್ ಪ್ರವೇಶಕ್ಕಾಗಿ ಮೂವರು ವಿದ್ಯಾರ್ಥಿಗಳಿಂದ ಆಚಾರ್ಯ ಬೆಂಗಳೂರು ಬಿ-ಸ್ಕೂಲ್ ಸಂಗ್ರಹಿಸಿದ್ದ ಹೆಚ್ಚುವರಿ ಶುಲ್ಕವನ್ನೂ ಸಮಿತಿ ವಾಪಸ್ ಕೊಡಿಸಿದೆ. ಕೆಇಎ ನಿಗದಿಪಡಿಸಿದ ಶುಲ್ಕದ ಜತೆಗೆ ₹31 ಸಾವಿರ ಕಟ್ಟಿಸಿಕೊಳ್ಳಲು ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿ. ಫಾರ್ಮಾ ಕೋರ್ಸ್ಗೆ ಪ್ರವೇಶ ಪಡೆದ ಎಂಟು ವಿದ್ಯಾರ್ಥಿಗಳಿಂದ ಕಟ್ಟಿಸಿಕೊಂಡಿದ್ದ ಹೆಚ್ಚುವರಿ ಶುಲ್ಕವನ್ನು ಎರಡು ಕಾಲೇಜುಗಳು ಹಿಂದಿರುಗಿಸಿವೆ.</p>.<p>ನಗರದ ಆಚಾರ್ಯ ಮತ್ತು ಬಿ.ಎಂ. ರೆಡ್ಡಿ ಫಾರ್ಮಸಿ ಕಾಲೇಜುಗಳು ಒಟ್ಟು ₹5.40 ಲಕ್ಷ ಹೆಚ್ಚುವರಿ ಶುಲ್ಕ ಕಟ್ಟಿಸಿಕೊಂಡಿದ್ದವು. ಈ ಕುರಿತು ಎಂಟು ವಿದ್ಯಾರ್ಥಿಗಳು ಸಮಿತಿ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ. ಶ್ರೀನಿವಾಸಗೌಡ ಅವರ ಅಧ್ಯಕ್ಷತೆಯ ಶುಲ್ಕ ನಿಯಂತ್ರಣ ಸಮಿತಿಗೆ ದೂರು ನೀಡಿದ್ದರು. ಕಾಲೇಜಿನ ಆಡಳಿತ ಮಂಡಳಿಯ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳನ್ನು ಕರೆಸಿ, ವಿಚಾರಣೆ ನಡೆಸಿದ ನಂತರ ಹೆಚ್ಚುವರಿ ಶುಲ್ಕ ವಾಪಸ್ ನೀಡಲಾಗಿದೆ.</p>.<p><strong>ವೈದ್ಯಕೀಯ ಶುಲ್ಕ 8 ಲಕ್ಷ ವರ್ಗಾವಣೆ:</strong> ಮಂಗಳೂರಿನ ಜಿ.ಆರ್. ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಾದ ಪೂಜಿತಾ ಜೆ. ಅಂಗಡಿ ಅವರಿಗೆ ₹7 ಲಕ್ಷ, ತುಷಾರ್ ಬಿ.ಭಾಸ್ಮೆ ಅವರಿಗೆ ₹1 ಲಕ್ಷ ಶುಲ್ಕವನ್ನು ಸಮಿತಿ ವರ್ಗಾವಣೆ ಮಾಡಿಕೊಟ್ಟಿದೆ.</p>.<p>ಕಾಲೇಜಿನ ಮಾನ್ಯತೆ ರದ್ದಾದ ನಂತರ ಆ ಕಾಲೇಜಿನ ವಿದ್ಯಾರ್ಥಿಗಳನ್ನು ಬೇರೆ ಕಾಲೇಜುಗಳಿಗೆ ವರ್ಗಾಯಿಸಲಾಗಿತ್ತು. ಆದರೆ, ಶುಲ್ಕ ವರ್ಗಾವಣೆ ಆಗಿರಲಿಲ್ಲ. ಹಾಗಾಗಿ, ವಿದ್ಯಾರ್ಥಿಗಳು ಸಮಿತಿಗೆ ದೂರು ನೀಡಿದ್ದರು.</p>.<p>ಎಂ.ಬಿ.ಎ.ಕೋರ್ಸ್ ಪ್ರವೇಶಕ್ಕಾಗಿ ಮೂವರು ವಿದ್ಯಾರ್ಥಿಗಳಿಂದ ಆಚಾರ್ಯ ಬೆಂಗಳೂರು ಬಿ-ಸ್ಕೂಲ್ ಸಂಗ್ರಹಿಸಿದ್ದ ಹೆಚ್ಚುವರಿ ಶುಲ್ಕವನ್ನೂ ಸಮಿತಿ ವಾಪಸ್ ಕೊಡಿಸಿದೆ. ಕೆಇಎ ನಿಗದಿಪಡಿಸಿದ ಶುಲ್ಕದ ಜತೆಗೆ ₹31 ಸಾವಿರ ಕಟ್ಟಿಸಿಕೊಳ್ಳಲು ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>