ಇದೇ ವೇಳೆ ಸಚಿವ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಹೇಳಿಕೆ ಪ್ರಸ್ತಾಪಿಸಿ, ‘ನಮ್ಮದು ಸೂಟ್ಕೇಸ್ ಸಂಸ್ಕೃತಿಯ ಪಕ್ಷ, ಸೂಟ್ಕೇಸ್ ಇಲ್ಲದೆ ಏನು ಕೆಲಸ ನಡೆಯುವುದಿಲ್ಲ’ ಎಂದು ಹೇಳಿರುವ ವಿಡಿಯೊ ನನ್ನ ಬಳಿ ಇದೆ ಅದನ್ನು ಬಿಡುಗಡೆ ಮಾಡುವುದಾಗಿ' ಹೇಳಿದರು.
ಮೈತ್ರಿ ಸರ್ಕಾರ ನಾಲ್ಕು ದಿನದಲ್ಲಿ ಪತನ
ಯಡಿಯೂರಪ್ಪ ವಿರುದ್ಧ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ಮುಂದಿನ ನಾಲ್ಕು ದಿನಗಳಲ್ಲಿ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.