ಬೆಂಗಳೂರು: ‘ಆಡಿಯೊ ವಿಚಾರದ ಬಗ್ಗೆ ತಪ್ಪೊಪ್ಪಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಹುಶಧರ್ಮಸ್ಥಳ ಮಂಜುನಾಥ ಸ್ವಾಮಿ ಬುದ್ಧಿ ಕೊಟ್ಟಿರಬಹುದು’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
‘ಮೊನ್ನೆ ಆಡಿಯೊ ಬಗ್ಗೆ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ, ಅದರಲ್ಲಿಮಾತನಾಡಿರುವುದು ನಾನಲ್ಲ. ಅದು ಮಿಮಿಕ್ರಿ ಮಾಡಲಾಗಿದೆ ಎಂದು ಹೇಳಿದ್ದರು. ಆದರೆ ಇಂದು ನಾನೇ ಮಾತನಾಡಿದ್ದು ಎಂದು ಹೇಳುತ್ತಾರೆ. ಈ ಕುರಿತು ಸದನದಲ್ಲಿ ಚರ್ಚಿಸಲು ಸಿದ್ಧನಿದ್ದೇನೆ’ ಎಂದರು.