ಈ ಕುರಿತು ‘ಎಕ್ಸ್’ ಮೂಲಕ ಪ್ರತಿಕ್ರಿಯಿಸಿರುವ ಅವರು, ‘ಸದ್ಯ ನಾಗೇಂದ್ರ ರಾಜೀನಾಮೆ ಮೊದಲ ಘಟ್ಟವಾಗಿದ್ದು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಲೂಟಿಯಾದ ₹187 ಕೋಟಿ ಹಗರಣದಲ್ಲಿ ಇನ್ನಷ್ಟು ಪ್ರಭಾವಿಗಳ ಕೈವಾಡ ಅಡಗಿರುವ ಸಾಧ್ಯತೆಯನ್ನು ನಿರಾಕರಿಸಲಾಗದು. ಈ ನಿಟ್ಟಿನಲ್ಲಿ ಪಾರದರ್ಶಕ ತನಿಖೆಯನ್ನು ಬಿಗಿಗೊಳಿಸಬೇಕಾಗಿದೆ’ ಎಂದು ಒತ್ತಾಯಿಸಿದ್ದಾರೆ.