ಸಜ್ಜಾದ ನಶೀನ್ ಅವರು ಕರ್ತವ್ಯ ಲೋಪ ಎಸಗಿ, ಕ್ಷೇತ್ರದ ಆದಾಯದ ದುರ್ಬಳಕೆ ಮಾಡಿಕೊಂಡಿದ್ದು ಕಂಡುಬಂದಲ್ಲಿ ಅಥವಾ ಆಡಳಿತ ನಿರ್ವಹಿಸಲು ವಿಫಲವಾದಲ್ಲಿ ಆಡಳಿತವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ನೀಡಬೇಕು ಎಂಬ ಷರತ್ತು ವಿಧಿಸಿರುವ ಕುರಿತೂ ಪ್ರತಿಕ್ರಿಯಿಸಬೇಕು ಎಂದು ನ್ಯಾಯಪೀಠ, ಸರ್ಕಾರದ ಪರ ವಕೀಲ ಬಸವಪ್ರಭು ಪಾಟೀಲ ಅವರಿಗೆ ಸೂಚಿಸಿತು. ಹಿಂದೆಯೂ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತಿತರರಿಗೆ ನೋಟಿಸ್ ಜಾರಿ ಮಾಡಿತ್ತು.