‘ಈ ಪ್ರಕರಣದಲ್ಲಿ ಹೈಕೋರ್ಟ್ 2023ರ ಮಾರ್ಚ್ 6ರಂದು ನೀಡಿರುವ ತೀರ್ಪನ್ನು ಪ್ರಶ್ನಿಸಿ ಶಾಖಾದ್ರಿ ಅವರು ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ಗೆ ಲಿಖಿತ ಹೇಳಿಕೆಗಳನ್ನು ಸಲ್ಲಿಸಿ, ಪ್ರಮಾಣಪತ್ರದ ಮೂಲಕ ಸರ್ಕಾರ ನಿಲುವು ತಿಳಿಸಬೇಕಾಗಿದೆ. ಪ್ರಕರಣದಲ್ಲಿನ ಎಲ್ಲ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಶೀಘ್ರದಲ್ಲಿ ಶಿಫಾರಸುಗಳನ್ನು ಸಲ್ಲಿಸಲು ಗೃಹ ಸಚಿವರ ಅಧ್ಯಕ್ಷತೆಯಲ್ಲಿ, ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರನ್ನು ಒಳಗೊಂಡ ಸಚಿವ ಸಂಪುಟ ಉಪ ಸಮಿತಿ ರಚಿಸುವಂತೆ ಸೂಚಿಸಿದ್ದಾರೆ’ ಎಂದು ಮುಜರಾಯಿ ಇಲಾಖೆಯ ಮೂಲಗಳು ತಿಳಿಸಿವೆ.