<p><strong>ಚಾಮರಾಜನಗರ:</strong> ಆರು ತಿಂಗಳ ಹೆಣ್ಣು ಮಗುವನ್ನು ₹ 50 ಸಾವಿರಕ್ಕೆ ಮಾರಾಟ ಮಾಡಿದ ಆರೋಪದ ಮೇರೆಗೆ ಪೋಷಕರು ಸೇರಿ ಐವರನ್ನು ಬಂಧಿಸಿ, ಮಗುವನ್ನು ರಕ್ಷಿಸಲಾಗಿದೆ.</p>.<p>ಮಗುವನ್ನು ಮಾರಾಟ ಮಾಡಿದ್ದ ಇಲ್ಲಿನ ರಾಮಸಮುದ್ರದ ದಂಪತಿ, ಮಗುವನ್ನು ಪಡೆದಿದ್ದ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೊಣನೂರಿನ ದಂಪತಿ ಹಾಗೂ ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಡಿ ಗ್ರೂಪ್ ನೌಕರರಾದ ಮಧ್ಯವರ್ತಿ ಶಾಂತಾ ಬಂಧಿತರು.</p>.<p>‘ಜುಲೈ 26ರಂದು ಜಿಲ್ಲಾಸ್ಪತ್ರೆಯಲ್ಲಿ ಜನಿಸಿದ ಬಳಿಕ ದಂಪತಿ ಬಳಿ ಮಗು ಕಾಣದ ಬಗ್ಗೆ ದೂರು ಬಂದ ಮೇರೆಗೆ ವಿಚಾರಣೆ ನಡೆಸಲಾಯಿತು. ಆಗ ಪ್ರಕರಣ ಬೆಳಕಿಗೆ ಬಂತು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್ ತಿಳಿಸಿದರು.</p>.<p>‘ಮಗು ಆರೋಗ್ಯದಿಂದಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ. ಹೆಚ್ಚುವರಿ ಎಸ್ಪಿ ಎಂ.ಎನ್.ಶಶಿಧರ್, ಡಿವೈಎಸ್ಪಿ ಸ್ನೇಹ ರಾಜ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಎಂ.ಜಗದೀಶ್, ಪಿಎಸ್ಐ ಆರ್.ಮಂಜುನಾಥ್ ಪಾಲ್ಗೊಂಡಿದ್ದರು. ತಂಡಕ್ಕೆ ಬಹುಮಾನ ನೀಡಲಾಗುವುದು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಆರು ತಿಂಗಳ ಹೆಣ್ಣು ಮಗುವನ್ನು ₹ 50 ಸಾವಿರಕ್ಕೆ ಮಾರಾಟ ಮಾಡಿದ ಆರೋಪದ ಮೇರೆಗೆ ಪೋಷಕರು ಸೇರಿ ಐವರನ್ನು ಬಂಧಿಸಿ, ಮಗುವನ್ನು ರಕ್ಷಿಸಲಾಗಿದೆ.</p>.<p>ಮಗುವನ್ನು ಮಾರಾಟ ಮಾಡಿದ್ದ ಇಲ್ಲಿನ ರಾಮಸಮುದ್ರದ ದಂಪತಿ, ಮಗುವನ್ನು ಪಡೆದಿದ್ದ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೊಣನೂರಿನ ದಂಪತಿ ಹಾಗೂ ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಡಿ ಗ್ರೂಪ್ ನೌಕರರಾದ ಮಧ್ಯವರ್ತಿ ಶಾಂತಾ ಬಂಧಿತರು.</p>.<p>‘ಜುಲೈ 26ರಂದು ಜಿಲ್ಲಾಸ್ಪತ್ರೆಯಲ್ಲಿ ಜನಿಸಿದ ಬಳಿಕ ದಂಪತಿ ಬಳಿ ಮಗು ಕಾಣದ ಬಗ್ಗೆ ದೂರು ಬಂದ ಮೇರೆಗೆ ವಿಚಾರಣೆ ನಡೆಸಲಾಯಿತು. ಆಗ ಪ್ರಕರಣ ಬೆಳಕಿಗೆ ಬಂತು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್ ತಿಳಿಸಿದರು.</p>.<p>‘ಮಗು ಆರೋಗ್ಯದಿಂದಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ. ಹೆಚ್ಚುವರಿ ಎಸ್ಪಿ ಎಂ.ಎನ್.ಶಶಿಧರ್, ಡಿವೈಎಸ್ಪಿ ಸ್ನೇಹ ರಾಜ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಎಂ.ಜಗದೀಶ್, ಪಿಎಸ್ಐ ಆರ್.ಮಂಜುನಾಥ್ ಪಾಲ್ಗೊಂಡಿದ್ದರು. ತಂಡಕ್ಕೆ ಬಹುಮಾನ ನೀಡಲಾಗುವುದು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>