<p><strong>ಬೆಂಗಳೂರು:</strong> ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಪರಿಹಾರ ಒದಗಿಸಲು ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಮಟ್ಟದ ಸಲಹಾ ಮಂಡಳಿಯನ್ನು ಎಐಸಿಸಿ ರಚಿಸಿದೆ.</p>.<p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಮಂಡಳಿಯ ರಚನೆಗೆ ಇತ್ತೀಚೆಗೆ ಅನುಮೋದನೆ ನೀಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮತ್ತು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಕೂಡ ಮಂಡಳಿಯಲ್ಲಿದ್ದಾರೆ. ಮಂಡಳಿಯಲ್ಲಿ ನಾಲ್ವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಒಟ್ಟು 24 ಸದಸ್ಯರಿದ್ದಾರೆ.</p>.<p>ಕೆಪಿಸಿಸಿ ಕಚೇರಿಯ ಆವರಣದಲ್ಲಿರುವ ಭಾರತ್ ಜೋಡೊ ಭವನದಲ್ಲಿ ಮಂಡಳಿಯ ಮೊದಲ ಸಭೆ ಇದೇ 15ರಂದು ನಡೆಯಲಿದೆ. ಮಂಡಳಿಯ ಸದಸ್ಯರು, ಸಂಚಾಲಕರು, ಕಾರ್ಯದರ್ಶಿಗಳು, ಕಾಂಗ್ರೆಸ್ನ ಹಿಂದುಳಿದ ವರ್ಗಗಳ ಪ್ರಮುಖ ನಾಯಕರು ಸೇರಿದಂತೆ ದೇಶದ ವಿವಿಧ ರಾಜ್ಯಗಳ 90 ನಾಯಕರಿಗೆ ಈ ಸಭೆಯ ಆಹ್ವಾನ ನೀಡಲಾಗಿದೆ. ಐವರು ಮಾಜಿ ಮುಖ್ಯಮಂತ್ರಿಗಳು, ಹತ್ತು ಮಂದಿ ಕೇಂದ್ರದ ಮಾಜಿ ಸಚಿವರು ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.</p>.<p>ಮುಂದಿನ ಕಾರ್ಯಯೋಜನೆಗಳು, ಅವುಗಳ ಅನುಷ್ಠಾನ, ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕೈಗೆತ್ತಿಕೊಳ್ಳಬೇಕಾದ ವಿಷಯಗಳ ಕುರಿತು ಎಐಸಿಸಿಯ ಹಿಂದುಳಿದ ವರ್ಗಗಳ ಘಟಕಕ್ಕೆ ಈ ಸಲಹಾ ಮಂಡಳಿಯು ಸಲಹೆಗಳನ್ನು ನೀಡಲಿದೆ. ರಾಜ್ಯದಲ್ಲಿ ಹಿಂದುಳಿದ ವರ್ಗಗಳ ನಾಯಕರಾಗಿರುವ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಬಳಸಿಕೊಂಡು ದೇಶದಾದ್ಯಂತ ಹಿಂದುಳಿದ ವರ್ಗಗಳನ್ನು ತನ್ನತ್ತ ಸೆಳೆಯಲು ಎಐಸಿಸಿ ಈ ಮಂಡಳಿ ರಚಿಸಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಈ ಮಂಡಳಿ ಸಲಹೆಗಳನ್ನು ನೀಡಲಿದೆ.</p>.<p>ಮುಖ್ಯಮಂತ್ರಿಯ ಜೊತೆ ಸಮಾಲೋಚಿಸಿದ ಬಳಿಕ ಮಂಡಳಿಯ ಸದಸ್ಯರು ಸಭೆಯ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿರುವ ಸಲಹಾ ಮಂಡಳಿಯ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಸಭೆಗೆ ಅಗತ್ಯವಿರುವ ಪೂರಕ ಸಿದ್ಧತೆಗಳ ಕುರಿತು ಚರ್ಚಿಸಿದ್ದಾರೆ.</p>.<h2>ಮಂಡಳಿಯಲ್ಲಿ ಯಾರೆಲ್ಲ ಇದ್ದಾರೆ?</h2><p>ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಅಶೋಕ್ ಗೆಹಲೋತ್, ಭೂಪೇಶ್ ಬಘೇಲ್, ವಿ. ನಾರಾಯಣಸ್ವಾಮಿ, ಸಚಿನ್ ಪೈಲಟ್, ಗುರುದೀಪ್ ಸಿಂಗ್ ಸಪ್ಪಲ್, ಅರುಣ್ ಯಾದವ್, ವಿಜಯ್ ನಾಮ್ದೇವ್ರಾವ್<br>ವಡೆಟ್ಟಿವಾರ್, ವಿ. ಹನುಮಂತರಾವ್, ಅಮಿತ್ ಚಾವ್ಡಾ, ಬಿ. ಮಹೇಶ್ ಕುಮಾರ್ ಗೌಡ್, ಪೊನ್ನಮ್ ಪ್ರಭಾಕರ್, ವೀರಪ್ಪ ಮೊಯಿಲಿ, ಎಸ್. ಜೋತಿಮಣಿ (ಸಂಸದೆ), ಶ್ರೀಕಾಂತ್ ಜೇನಾ, ಕಮಲೇಶ್ವರ್ ಪಟೇಲ್, ಅಜಯ್ ಕುಮಾರ್ ಲಲ್ಲು, ಸುಭಾಷಿಣಿ ಯಾದವ್, ಅಡೂರು ಪ್ರಕಾಶ್ (ಸಂಸದ), ಧನೇಂದ್ರ ಸಾಹು, ಹೀನಾ ಕಾವ್ರೆ, ಡಾ. ಅನಿಲ್ ಜೈಹಿಂದ್- ಸಲಹಾ ಮಂಡಳಿಯ ಸಂಚಾಲಕರು.ಜಿತೇಂದರ್ ಬಘೇಲ್- ಸಲಹಾ ಮಂಡಳಿಯ ಕಾರ್ಯದರ್ಶಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಪರಿಹಾರ ಒದಗಿಸಲು ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಮಟ್ಟದ ಸಲಹಾ ಮಂಡಳಿಯನ್ನು ಎಐಸಿಸಿ ರಚಿಸಿದೆ.</p>.<p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಮಂಡಳಿಯ ರಚನೆಗೆ ಇತ್ತೀಚೆಗೆ ಅನುಮೋದನೆ ನೀಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮತ್ತು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಕೂಡ ಮಂಡಳಿಯಲ್ಲಿದ್ದಾರೆ. ಮಂಡಳಿಯಲ್ಲಿ ನಾಲ್ವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಒಟ್ಟು 24 ಸದಸ್ಯರಿದ್ದಾರೆ.</p>.<p>ಕೆಪಿಸಿಸಿ ಕಚೇರಿಯ ಆವರಣದಲ್ಲಿರುವ ಭಾರತ್ ಜೋಡೊ ಭವನದಲ್ಲಿ ಮಂಡಳಿಯ ಮೊದಲ ಸಭೆ ಇದೇ 15ರಂದು ನಡೆಯಲಿದೆ. ಮಂಡಳಿಯ ಸದಸ್ಯರು, ಸಂಚಾಲಕರು, ಕಾರ್ಯದರ್ಶಿಗಳು, ಕಾಂಗ್ರೆಸ್ನ ಹಿಂದುಳಿದ ವರ್ಗಗಳ ಪ್ರಮುಖ ನಾಯಕರು ಸೇರಿದಂತೆ ದೇಶದ ವಿವಿಧ ರಾಜ್ಯಗಳ 90 ನಾಯಕರಿಗೆ ಈ ಸಭೆಯ ಆಹ್ವಾನ ನೀಡಲಾಗಿದೆ. ಐವರು ಮಾಜಿ ಮುಖ್ಯಮಂತ್ರಿಗಳು, ಹತ್ತು ಮಂದಿ ಕೇಂದ್ರದ ಮಾಜಿ ಸಚಿವರು ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.</p>.<p>ಮುಂದಿನ ಕಾರ್ಯಯೋಜನೆಗಳು, ಅವುಗಳ ಅನುಷ್ಠಾನ, ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕೈಗೆತ್ತಿಕೊಳ್ಳಬೇಕಾದ ವಿಷಯಗಳ ಕುರಿತು ಎಐಸಿಸಿಯ ಹಿಂದುಳಿದ ವರ್ಗಗಳ ಘಟಕಕ್ಕೆ ಈ ಸಲಹಾ ಮಂಡಳಿಯು ಸಲಹೆಗಳನ್ನು ನೀಡಲಿದೆ. ರಾಜ್ಯದಲ್ಲಿ ಹಿಂದುಳಿದ ವರ್ಗಗಳ ನಾಯಕರಾಗಿರುವ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಬಳಸಿಕೊಂಡು ದೇಶದಾದ್ಯಂತ ಹಿಂದುಳಿದ ವರ್ಗಗಳನ್ನು ತನ್ನತ್ತ ಸೆಳೆಯಲು ಎಐಸಿಸಿ ಈ ಮಂಡಳಿ ರಚಿಸಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಈ ಮಂಡಳಿ ಸಲಹೆಗಳನ್ನು ನೀಡಲಿದೆ.</p>.<p>ಮುಖ್ಯಮಂತ್ರಿಯ ಜೊತೆ ಸಮಾಲೋಚಿಸಿದ ಬಳಿಕ ಮಂಡಳಿಯ ಸದಸ್ಯರು ಸಭೆಯ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿರುವ ಸಲಹಾ ಮಂಡಳಿಯ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಸಭೆಗೆ ಅಗತ್ಯವಿರುವ ಪೂರಕ ಸಿದ್ಧತೆಗಳ ಕುರಿತು ಚರ್ಚಿಸಿದ್ದಾರೆ.</p>.<h2>ಮಂಡಳಿಯಲ್ಲಿ ಯಾರೆಲ್ಲ ಇದ್ದಾರೆ?</h2><p>ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಅಶೋಕ್ ಗೆಹಲೋತ್, ಭೂಪೇಶ್ ಬಘೇಲ್, ವಿ. ನಾರಾಯಣಸ್ವಾಮಿ, ಸಚಿನ್ ಪೈಲಟ್, ಗುರುದೀಪ್ ಸಿಂಗ್ ಸಪ್ಪಲ್, ಅರುಣ್ ಯಾದವ್, ವಿಜಯ್ ನಾಮ್ದೇವ್ರಾವ್<br>ವಡೆಟ್ಟಿವಾರ್, ವಿ. ಹನುಮಂತರಾವ್, ಅಮಿತ್ ಚಾವ್ಡಾ, ಬಿ. ಮಹೇಶ್ ಕುಮಾರ್ ಗೌಡ್, ಪೊನ್ನಮ್ ಪ್ರಭಾಕರ್, ವೀರಪ್ಪ ಮೊಯಿಲಿ, ಎಸ್. ಜೋತಿಮಣಿ (ಸಂಸದೆ), ಶ್ರೀಕಾಂತ್ ಜೇನಾ, ಕಮಲೇಶ್ವರ್ ಪಟೇಲ್, ಅಜಯ್ ಕುಮಾರ್ ಲಲ್ಲು, ಸುಭಾಷಿಣಿ ಯಾದವ್, ಅಡೂರು ಪ್ರಕಾಶ್ (ಸಂಸದ), ಧನೇಂದ್ರ ಸಾಹು, ಹೀನಾ ಕಾವ್ರೆ, ಡಾ. ಅನಿಲ್ ಜೈಹಿಂದ್- ಸಲಹಾ ಮಂಡಳಿಯ ಸಂಚಾಲಕರು.ಜಿತೇಂದರ್ ಬಘೇಲ್- ಸಲಹಾ ಮಂಡಳಿಯ ಕಾರ್ಯದರ್ಶಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>