<p><strong>ಬೆಂಗಳೂರು</strong>: ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದರ ಜತೆಗೆ ಅದಕ್ಕೆ ತಾರ್ಕಿಕ ಅಂತ್ಯ ಹಾಡಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ನೂತನ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ತಿಳಿಸಿದರು.</p>.<p>ಆಯೋಗದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಆಯೋಗಕ್ಕೆ ಸದಸ್ಯರ ನೇಮಕ ಆಗಬೇಕಿದೆ. ಆ ಬಳಿಕ ವರದಿಯನ್ನು ಸಮಗ್ರವಾಗಿ ಪರಿಶೀಲಿಸಿ, ಒಂದು ನಿರ್ಣಯ ತೆಗೆದುಕೊಂಡು ಸರ್ಕಾರಕ್ಕೆ ಸಲ್ಲಿಸುವುದಾಗಿ ತಿಳಿಸಿದರು.</p>.<p>‘ಆ ವರದಿಯನ್ನು ನಾನು ಮೊದಲು ಅಧ್ಯಯನ ಮಾಡುತ್ತೇನೆ. ದೇಶದಲ್ಲೇ ಮೊದಲ ಬಾರಿಗೆ ₹160 ಕೋಟಿ ಖರ್ಚು ಮಾಡಿ ವರದಿ ತಯಾರಿಸಲಾಗಿದೆ. ಹಿಂದಿನ ಸರ್ಕಾರಗಳ ಸಂದರ್ಭದಲ್ಲಿ ಈ ವರದಿ ಏಕೆ ಸಲ್ಲಿಕೆ ಆಗಿಲ್ಲ ಎಂಬುದು ನನಗೆ ಗೊತ್ತಿಲ್ಲ. ಆಯೋಗದ ಹಿಂದಿನ ತೀರ್ಮಾನಗಳ ಬಗ್ಗೆ ಚರ್ಚೆ ಮಾಡುವುದಿಲ್ಲ’ ಎಂದು ಹೆಗ್ಡೆ ಹೇಳಿದರು.</p>.<p>ಆಯೋಗಕ್ಕೆ ನನ್ನ ನೇಮಕ ಆದೇಶ ಹೊರಬಂದ ಎರಡು ದಿನಗಳಲ್ಲಿ ಹಲವು ಸಮುದಾಯಗಳಿಂದ ಹೊಸ ಬೇಡಿಕೆಗಳು ಬಂದಿವೆ. ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷೆ ನ್ಯಾ.ರೋಹಿಣಿ ಅವರೂ ನಮ್ಮ ಆಯೋಗದಿಂದ ಹಲವು ಮಾಹಿತಿಗಳನ್ನು ಕೇಳಿದ್ದಾರೆ ಎಂದರು.</p>.<p>ಹಿಂದುಳಿದ ವರ್ಗಗಳ ಆಯೋಗದಲ್ಲಿ ಕೆಲಸ ಮಾಡಲು ಪಕ್ಷ ಒಂದು ಸದವಕಾಶ ನೀಡಿದೆ. ಇದರಿಂದ ಅನೇಕ ಸಣ್ಣಪುಟ್ಟ ಹಿಂದುಳಿದ ಸಮಾಜಗಳಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ ಎಂಬ ವಿಶ್ವಾಸವಿದೆ ಎಂದರು.</p>.<p>ನೀಟ್, ಜೆಇಇ ಪರೀಕ್ಷೆಗಳಲ್ಲಿ ಕೆಲವು ರಾಜ್ಯಗಳಲ್ಲಿ ಕೆಲವು ಸಮುದಾಯಗಳಿಗೆ ಮೀಸಲಾತಿ ಸೌಲಭ್ಯ ಇದೆ. ಅದೇ ಜಾತಿಗಳಿಗೆ ರಾಜ್ಯದಲ್ಲಿ ಮೀಸಲಾತಿ ಇಲ್ಲ. ಅದರ ಬಗ್ಗೆಯೂ ಅಧ್ಯಯನ ನಡೆಸಿ, ಅಂತಹ ಜಾತಿಗಳ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಉದ್ದೇಶಿಸಿರುವುದಾಗಿ ಜಯಪ್ರಕಾಶ್ ಹೆಗ್ಡೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದರ ಜತೆಗೆ ಅದಕ್ಕೆ ತಾರ್ಕಿಕ ಅಂತ್ಯ ಹಾಡಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ನೂತನ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ತಿಳಿಸಿದರು.</p>.<p>ಆಯೋಗದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಆಯೋಗಕ್ಕೆ ಸದಸ್ಯರ ನೇಮಕ ಆಗಬೇಕಿದೆ. ಆ ಬಳಿಕ ವರದಿಯನ್ನು ಸಮಗ್ರವಾಗಿ ಪರಿಶೀಲಿಸಿ, ಒಂದು ನಿರ್ಣಯ ತೆಗೆದುಕೊಂಡು ಸರ್ಕಾರಕ್ಕೆ ಸಲ್ಲಿಸುವುದಾಗಿ ತಿಳಿಸಿದರು.</p>.<p>‘ಆ ವರದಿಯನ್ನು ನಾನು ಮೊದಲು ಅಧ್ಯಯನ ಮಾಡುತ್ತೇನೆ. ದೇಶದಲ್ಲೇ ಮೊದಲ ಬಾರಿಗೆ ₹160 ಕೋಟಿ ಖರ್ಚು ಮಾಡಿ ವರದಿ ತಯಾರಿಸಲಾಗಿದೆ. ಹಿಂದಿನ ಸರ್ಕಾರಗಳ ಸಂದರ್ಭದಲ್ಲಿ ಈ ವರದಿ ಏಕೆ ಸಲ್ಲಿಕೆ ಆಗಿಲ್ಲ ಎಂಬುದು ನನಗೆ ಗೊತ್ತಿಲ್ಲ. ಆಯೋಗದ ಹಿಂದಿನ ತೀರ್ಮಾನಗಳ ಬಗ್ಗೆ ಚರ್ಚೆ ಮಾಡುವುದಿಲ್ಲ’ ಎಂದು ಹೆಗ್ಡೆ ಹೇಳಿದರು.</p>.<p>ಆಯೋಗಕ್ಕೆ ನನ್ನ ನೇಮಕ ಆದೇಶ ಹೊರಬಂದ ಎರಡು ದಿನಗಳಲ್ಲಿ ಹಲವು ಸಮುದಾಯಗಳಿಂದ ಹೊಸ ಬೇಡಿಕೆಗಳು ಬಂದಿವೆ. ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷೆ ನ್ಯಾ.ರೋಹಿಣಿ ಅವರೂ ನಮ್ಮ ಆಯೋಗದಿಂದ ಹಲವು ಮಾಹಿತಿಗಳನ್ನು ಕೇಳಿದ್ದಾರೆ ಎಂದರು.</p>.<p>ಹಿಂದುಳಿದ ವರ್ಗಗಳ ಆಯೋಗದಲ್ಲಿ ಕೆಲಸ ಮಾಡಲು ಪಕ್ಷ ಒಂದು ಸದವಕಾಶ ನೀಡಿದೆ. ಇದರಿಂದ ಅನೇಕ ಸಣ್ಣಪುಟ್ಟ ಹಿಂದುಳಿದ ಸಮಾಜಗಳಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ ಎಂಬ ವಿಶ್ವಾಸವಿದೆ ಎಂದರು.</p>.<p>ನೀಟ್, ಜೆಇಇ ಪರೀಕ್ಷೆಗಳಲ್ಲಿ ಕೆಲವು ರಾಜ್ಯಗಳಲ್ಲಿ ಕೆಲವು ಸಮುದಾಯಗಳಿಗೆ ಮೀಸಲಾತಿ ಸೌಲಭ್ಯ ಇದೆ. ಅದೇ ಜಾತಿಗಳಿಗೆ ರಾಜ್ಯದಲ್ಲಿ ಮೀಸಲಾತಿ ಇಲ್ಲ. ಅದರ ಬಗ್ಗೆಯೂ ಅಧ್ಯಯನ ನಡೆಸಿ, ಅಂತಹ ಜಾತಿಗಳ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಉದ್ದೇಶಿಸಿರುವುದಾಗಿ ಜಯಪ್ರಕಾಶ್ ಹೆಗ್ಡೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>