<p><strong>ಬೆಂಗಳೂರು:</strong> ಪ್ರತಿನಿತ್ಯ ಮೀಟರ್ ಬಡ್ಡಿ ಪಡೆದು ಸಾಲದ ಸುಳಿಯಲ್ಲಿ ಸಿಲುಕುವ ಬೀದಿಬದಿ ವ್ಯಾಪಾರಿಗಳಿಗೆ ಇನ್ನು ಮುಂದೆ ರಾಜ್ಯ ಸರ್ಕಾರವೇ ಬಡ್ಡಿ ರಹಿತ ಸಾಲ ನೀಡಲಿದೆ.</p>.<p>ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರದ ಮಹತ್ವಾಕಾಂಕ್ಷೆಯ ‘ಬಡವರ ಬಂಧು’ ಯೋಜನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಚಾಲನೆ ನೀಡಿದರು.</p>.<p>ಜಿಲ್ಲಾ ಸಹಕಾರ ಕೇಂದ್ರ(ಡಿಸಿಸಿ) ಬ್ಯಾಂಕುಗಳು ಮೂಲಕ ಫಲಾನುಭವಿಗಳನ್ನು ಗುರುತಿಸಲಾಗುತ್ತದೆ. ಕನಿಷ್ಠ ₹ 2 ಸಾವಿರದಿಂದ ₹ 10 ಸಾವಿರದ ವರೆಗೆ ಮೂರು ತಿಂಗಳ ಅವಧಿಗೆ ಸಾಲ ನೀಡಲಾಗುತ್ತದೆ.</p>.<p>ಸಾಲಗಾರರು ಬಯಸಿದರೆ ಪಿಗ್ಮಿ (ಪ್ರತಿನಿತ್ಯ ನಿರ್ದಿಷ್ಟ ಮೊತ್ತ ಪಾವತಿ) ಮೂಲಕವೂ ಸಾಲದ ಮೊತ್ತವನ್ನು ಬ್ಯಾಂಕುಗಳು ಹಿಂಪಡೆಯಬಹುದು. ಸಮರ್ಪಕವಾಗಿ ಸಾಲ ಮರುಪಾವತಿಸಿದ ಫಲಾನುಭವಿಗೆ ಸಾಲ ನವೀಕರಿಸಲು ಮತ್ತು ಶೇ 10ರಷ್ಟು ಮಿತಿ ಹೆಚ್ಚಿಸಲು (₹ 15ಸಾವಿರದವರೆಗೆ) ಅವಕಾಶ ನೀಡಲಾಗಿದೆ.</p>.<p>ಪ್ರತಿ ತ್ರೈಮಾಸಿಕ ಹೊರಬಾಕಿ ಆಧರಿಸಿ, ಬಡ್ಡಿ ಸಹಾಯಧನವನ್ನು ಕ್ಲೇಮ್ ಮಾಡಿದರೆ, ಶೇ 10ರ ಬಡ್ಡಿ<br />ದರದಲ್ಲಿ ಮೊತ್ತವನ್ನು ಬ್ಯಾಂಕುಗಳಿಗೆ ಸರ್ಕಾರ ಭರಿಸಲಿದೆ.</p>.<p><strong>ಸಾಲ ಪಡೆಯುವ ವಿಧಾನ</strong></p>.<p>ಗುರುತಿನ ಚೀಟಿ ಮತ್ತು ವ್ಯಾಪಾರ ಸ್ಥಳದ ಫೋಟೊದೊಂದಿಗೆ ನಿಗದಿತ ಬ್ಯಾಂಕ್ನಲ್ಲಿ ಶೂನ್ಯ ಬ್ಯಾಲೆನ್ಸ್ ಖಾತೆ ತೆರೆಯಬೇಕು</p>.<p>ಸಾಲಕ್ಕೆ ಅರ್ಜಿ ಸಲ್ಲಿಸಬೇಕು</p>.<p>ಬ್ಯಾಂಕುಗಳು ಅರ್ಹರಿಗೆ ಸಾಲ ನೀಡಲಿವೆ</p>.<p>ಮೂರು ತಿಂಗಳ ಒಳಗೆ ಸಾಲದ ಮರುಪಾವತಿ</p>.<p><strong>ಇವರು ಫಲಾನುಭವಿಗಳು</strong></p>.<p>* ತಳ್ಳುಬಂಡಿ, ಮೋಟಾರು ವಾಹನಗಳಲ್ಲಿ ಪಾನೀಯ, ಊಟ ವಿತರಿಸುವವರು</p>.<p>* ಮನೆಮನೆಗಳಿಗೆ ತರಕಾರಿ, ಹೂ, ಹಣ್ಣು, ಕಾಯಿ ಮಾರುವವರು. ಬುಟ್ಟಿ ವ್ಯಾಪಾರಿಗಳು</p>.<p>* ಪಾದರಕ್ಷೆ ರಿಪೇರಿ, ಮಾರಾಟ ಮಾಡುವವರು</p>.<p>* ಆಟದ ಸಾಮಾನು ಗೃಹೋಪಯೋಗಿ ವಸ್ತು ಮಾರುವವರು</p>.<p><strong>ಇವರಿಗೆ ಅನ್ವಯಿಸುವುದಿಲ್ಲ?</strong></p>.<p>* ರಸ್ತೆ ಬದಿ ಸ್ವಚ್ಛತೆ ಹಾಳು ಮಾಡುವವರಿಗೆ, ಪರಿಸರ ಹಾನಿ ವಸ್ತುಗಳ ಮಾರಾಟಗಾರರಿಗೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರತಿನಿತ್ಯ ಮೀಟರ್ ಬಡ್ಡಿ ಪಡೆದು ಸಾಲದ ಸುಳಿಯಲ್ಲಿ ಸಿಲುಕುವ ಬೀದಿಬದಿ ವ್ಯಾಪಾರಿಗಳಿಗೆ ಇನ್ನು ಮುಂದೆ ರಾಜ್ಯ ಸರ್ಕಾರವೇ ಬಡ್ಡಿ ರಹಿತ ಸಾಲ ನೀಡಲಿದೆ.</p>.<p>ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರದ ಮಹತ್ವಾಕಾಂಕ್ಷೆಯ ‘ಬಡವರ ಬಂಧು’ ಯೋಜನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಚಾಲನೆ ನೀಡಿದರು.</p>.<p>ಜಿಲ್ಲಾ ಸಹಕಾರ ಕೇಂದ್ರ(ಡಿಸಿಸಿ) ಬ್ಯಾಂಕುಗಳು ಮೂಲಕ ಫಲಾನುಭವಿಗಳನ್ನು ಗುರುತಿಸಲಾಗುತ್ತದೆ. ಕನಿಷ್ಠ ₹ 2 ಸಾವಿರದಿಂದ ₹ 10 ಸಾವಿರದ ವರೆಗೆ ಮೂರು ತಿಂಗಳ ಅವಧಿಗೆ ಸಾಲ ನೀಡಲಾಗುತ್ತದೆ.</p>.<p>ಸಾಲಗಾರರು ಬಯಸಿದರೆ ಪಿಗ್ಮಿ (ಪ್ರತಿನಿತ್ಯ ನಿರ್ದಿಷ್ಟ ಮೊತ್ತ ಪಾವತಿ) ಮೂಲಕವೂ ಸಾಲದ ಮೊತ್ತವನ್ನು ಬ್ಯಾಂಕುಗಳು ಹಿಂಪಡೆಯಬಹುದು. ಸಮರ್ಪಕವಾಗಿ ಸಾಲ ಮರುಪಾವತಿಸಿದ ಫಲಾನುಭವಿಗೆ ಸಾಲ ನವೀಕರಿಸಲು ಮತ್ತು ಶೇ 10ರಷ್ಟು ಮಿತಿ ಹೆಚ್ಚಿಸಲು (₹ 15ಸಾವಿರದವರೆಗೆ) ಅವಕಾಶ ನೀಡಲಾಗಿದೆ.</p>.<p>ಪ್ರತಿ ತ್ರೈಮಾಸಿಕ ಹೊರಬಾಕಿ ಆಧರಿಸಿ, ಬಡ್ಡಿ ಸಹಾಯಧನವನ್ನು ಕ್ಲೇಮ್ ಮಾಡಿದರೆ, ಶೇ 10ರ ಬಡ್ಡಿ<br />ದರದಲ್ಲಿ ಮೊತ್ತವನ್ನು ಬ್ಯಾಂಕುಗಳಿಗೆ ಸರ್ಕಾರ ಭರಿಸಲಿದೆ.</p>.<p><strong>ಸಾಲ ಪಡೆಯುವ ವಿಧಾನ</strong></p>.<p>ಗುರುತಿನ ಚೀಟಿ ಮತ್ತು ವ್ಯಾಪಾರ ಸ್ಥಳದ ಫೋಟೊದೊಂದಿಗೆ ನಿಗದಿತ ಬ್ಯಾಂಕ್ನಲ್ಲಿ ಶೂನ್ಯ ಬ್ಯಾಲೆನ್ಸ್ ಖಾತೆ ತೆರೆಯಬೇಕು</p>.<p>ಸಾಲಕ್ಕೆ ಅರ್ಜಿ ಸಲ್ಲಿಸಬೇಕು</p>.<p>ಬ್ಯಾಂಕುಗಳು ಅರ್ಹರಿಗೆ ಸಾಲ ನೀಡಲಿವೆ</p>.<p>ಮೂರು ತಿಂಗಳ ಒಳಗೆ ಸಾಲದ ಮರುಪಾವತಿ</p>.<p><strong>ಇವರು ಫಲಾನುಭವಿಗಳು</strong></p>.<p>* ತಳ್ಳುಬಂಡಿ, ಮೋಟಾರು ವಾಹನಗಳಲ್ಲಿ ಪಾನೀಯ, ಊಟ ವಿತರಿಸುವವರು</p>.<p>* ಮನೆಮನೆಗಳಿಗೆ ತರಕಾರಿ, ಹೂ, ಹಣ್ಣು, ಕಾಯಿ ಮಾರುವವರು. ಬುಟ್ಟಿ ವ್ಯಾಪಾರಿಗಳು</p>.<p>* ಪಾದರಕ್ಷೆ ರಿಪೇರಿ, ಮಾರಾಟ ಮಾಡುವವರು</p>.<p>* ಆಟದ ಸಾಮಾನು ಗೃಹೋಪಯೋಗಿ ವಸ್ತು ಮಾರುವವರು</p>.<p><strong>ಇವರಿಗೆ ಅನ್ವಯಿಸುವುದಿಲ್ಲ?</strong></p>.<p>* ರಸ್ತೆ ಬದಿ ಸ್ವಚ್ಛತೆ ಹಾಳು ಮಾಡುವವರಿಗೆ, ಪರಿಸರ ಹಾನಿ ವಸ್ತುಗಳ ಮಾರಾಟಗಾರರಿಗೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>