<p><strong>ಬೆಂಗಳೂರು</strong>: ಮೀಟರ್ ಬಡ್ಡಿ ವಿಷ ವರ್ತುಲದಿಂದಬೀದಿ ಬದಿ ವ್ಯಾಪಾರಿಗಳನ್ನು ರಕ್ಷಿಸುವ ಉದ್ದೇಶದಿಂದ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ರೂಪಿಸಿದ್ದ ‘ಬಡವರ ಬಂಧು’ ಕಿರುಸಾಲ ಯೋಜನೆ ತೆವಳುತ್ತಿದೆ.</p>.<p>ಯೋಜನೆ ಮುಂದುವರಿಸಬೇಕೇ ಬೇಡವೇ ಎಂಬ ಬಗ್ಗೆ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿಲ್ಲ ಎಂದು ಸಹಕಾರಿ ಬ್ಯಾಂಕುಗಳು ಸುಮ್ಮನಾಗಿದ್ದರೆ, ಇಂಥದ್ದೊಂದು ಯೋಜನೆ ಇದೆ ಎಂಬುದೇ ಗೊತ್ತಿಲ್ಲ ಎನ್ನುತ್ತಾರೆ ಹಲವು ವ್ಯಾಪಾರಿಗಳು.</p>.<p>ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕುಗಳು, ಮಹಿಳಾ ಹಾಗೂ ಪಟ್ಟಣ ಸಹಕಾರ ಬ್ಯಾಂಕುಗಳ ಮೂಲಕ ಅರ್ಹ ಫಲಾನುಭವಿಗಳಿಗೆ ಶೂನ್ಯ ಬಡ್ಡಿದರದಲ್ಲಿ ₹2 ಸಾವಿರದಿಂದ ₹10 ಸಾವಿರದವರೆಗೆ ಮೂರು ತಿಂಗಳ ಅವಧಿಗೆ ಈ ಯೋಜನೆಯಡಿ ಸಾಲ ನೀಡಲಾಗುತ್ತದೆ.</p>.<p>‘ಸರ್ಕಾರ ಬದಲಾವಣೆಯಾದ ಬಳಿಕ ನಮಗೆ ಯಾವುದೇ ಸೂಚನೆ ಬಂದಿಲ್ಲ. ಸದ್ಯಕ್ಕೆ ಯೋಜನೆಯಡಿ ಸಾಲ ವಿತರಿಸುತ್ತಿಲ್ಲ’ ಎಂದು ಹೆಸರು ಬಹಿರಂಗಕ್ಕೆ ಒಪ್ಪದ ಸಹಕಾರಿ ಬ್ಯಾಂಕ್ವೊಂದರ ವ್ಯವಸ್ಥಾಪಕ ನಿರ್ದೇಶಕರುಹೇಳುತ್ತಾರೆ.</p>.<p>‘ನಾವು ನೀಡುವ ಸಾಲದ ಮೊತ್ತಕ್ಕೆ ಸರ್ಕಾರವು ಶೇ 10ರಷ್ಟು ಬಡ್ಡಿ ಮತ್ತು ಶೇ 1ರಷ್ಟು ಪ್ರೋತ್ಸಾಹ ಧನ ನೀಡುತ್ತದೆ. ಆದರೆ, ಅಸಲಿನ ಬಗ್ಗೆ ಯಾವುದೇ ಖಾತ್ರಿ ನೀಡುವುದಿಲ್ಲ. ಸುಮ್ಮನೆ ‘ರಿಸ್ಕ್’ ಏಕೆ ಎಂದು ಸಾಲ ವಿತರಿಸುತ್ತಿಲ್ಲ’ ಎಂದೂ ಅವರು ಹೇಳಿದರು.</p>.<p>‘ಮೂರು ತಿಂಗಳಿನಿಂದ ಸಾಲ ನೀಡುತ್ತಿಲ್ಲ. ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ಯೋಜನೆಯನ್ನು ಮತ್ತೆ ಜಾರಿಗೊಳಿಸುವಂತೆ ಮನವಿ ಮಾಡಲು ನಿರ್ಧರಿಸಿದ್ದೇವೆ’ ಎಂದುಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಇ.ಸಿ. ರಂಗಸ್ವಾಮಿ ಹೇಳಿದರು.</p>.<p>‘ಬ್ಯಾಂಕ್ನವರು ಹಲವು ಬಾರಿ ಓಡಾಡಿಸುತ್ತಾರೆ. ದಿನದ ದುಡಿಮೆ ಕೈತಪ್ಪುತ್ತದೆ ಎಂಬ ಕಾರಣಕ್ಕೆ ಹಲವರಿಗೆ ಬ್ಯಾಂಕ್ಗೆ ಹೋಗಲು ಸಾಧ್ಯವಾಗುವುದಿಲ್ಲ. ಇಂದಿಗೂ ವ್ಯಾಪಾರಿಗಳು ಮೀಟರ್ ಬಡ್ಡಿ ದಂಧೆಗೆ ತುತ್ತಾಗುತ್ತಿದ್ದಾರೆ’ ಎಂದು ಫುಟ್ಪಾತ್ ವ್ಯಾಪಾರಿಗಳ ಸಂಘದ ರಾಜ್ಯ ಪ್ರಧಾನಕಾರ್ಯದರ್ಶಿ ಸೈಯದ್ ಮುಜೀಬ್ ಹೇಳಿದರು.</p>.<p class="Subhead">ಸ್ಥಗಿತಕ್ಕೆ ಸೂಚಿಸಿಲ್ಲ: ‘ಯೋಜನೆ ಯಡಿಸಾಲ ನೀಡುವುದನ್ನು ಸ್ಥಗಿತಗೊಳಿಸಿ ಎಂದು ಸರ್ಕಾರ ಯಾರಿಗೂ ಹೇಳಿಲ್ಲ. ಆದ್ಯತೆ ಮೇರೆಗೆ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ’ ಎಂದು ಸಹಕಾರ ಸೊಸೈಟಿಗಳ ಹೆಚ್ಚುವರಿ ರಿಜಿಸ್ಟ್ರಾರ್ (ಸಾಲ) ಆರ್. ಶಿವಪ್ರಕಾಶ್ ಹೇಳಿದರು.</p>.<p class="Subhead">***</p>.<p class="Subhead">ಯೋಜನೆಯ ಪ್ರಗತಿ ಮತ್ತು ಸಾಧಕ–ಬಾಧಕಗಳ ಕುರಿತು ಸೆ. 27ರಂದು ರಾಜ್ಯಮಟ್ಟದ ಸಭೆ ಕರೆಯಲಾಗಿದೆ. ಇಲಾಖೆಯ ಉನ್ನತ ಅಧಿಕಾರಿಗಳು, ಬ್ಯಾಂಕ್ಗಳ ಎಂ.ಡಿ ಪಾಲ್ಗೊಳ್ಳುವರು<br />ಆರ್. ಶಿವಪ್ರಕಾಶ್, ಸಹಕಾರ ಸೊಸೈಟಿಗಳ ಹೆಚ್ಚುವರಿ ರಿಜಿಸ್ಟ್ರಾರ್ (ಸಾಲ)</p>.<p class="Subhead">***</p>.<p class="Subhead">ಯೋಜನೆಯ ಪ್ರಗತಿ ಕುರಿತು ಸೆ. 27ರಂದು ರಾಜ್ಯಮಟ್ಟದ ಸಭೆ ಕರೆಯಲಾಗಿದೆ. ಉನ್ನತ ಅಧಿಕಾರಿಗಳು, ಬ್ಯಾಂಕ್ಗಳ ಎಂ.ಡಿ ಪಾಲ್ಗೊಳ್ಳುವರು</p>.<p class="Subhead"><strong>-ಆರ್. ಶಿವಪ್ರಕಾಶ್, ಸಹಕಾರ ಸೊಸೈಟಿಗಳ ಹೆಚ್ಚುವರಿ ರಿಜಿಸ್ಟ್ರಾರ್ (ಸಾಲ)</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮೀಟರ್ ಬಡ್ಡಿ ವಿಷ ವರ್ತುಲದಿಂದಬೀದಿ ಬದಿ ವ್ಯಾಪಾರಿಗಳನ್ನು ರಕ್ಷಿಸುವ ಉದ್ದೇಶದಿಂದ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ರೂಪಿಸಿದ್ದ ‘ಬಡವರ ಬಂಧು’ ಕಿರುಸಾಲ ಯೋಜನೆ ತೆವಳುತ್ತಿದೆ.</p>.<p>ಯೋಜನೆ ಮುಂದುವರಿಸಬೇಕೇ ಬೇಡವೇ ಎಂಬ ಬಗ್ಗೆ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿಲ್ಲ ಎಂದು ಸಹಕಾರಿ ಬ್ಯಾಂಕುಗಳು ಸುಮ್ಮನಾಗಿದ್ದರೆ, ಇಂಥದ್ದೊಂದು ಯೋಜನೆ ಇದೆ ಎಂಬುದೇ ಗೊತ್ತಿಲ್ಲ ಎನ್ನುತ್ತಾರೆ ಹಲವು ವ್ಯಾಪಾರಿಗಳು.</p>.<p>ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕುಗಳು, ಮಹಿಳಾ ಹಾಗೂ ಪಟ್ಟಣ ಸಹಕಾರ ಬ್ಯಾಂಕುಗಳ ಮೂಲಕ ಅರ್ಹ ಫಲಾನುಭವಿಗಳಿಗೆ ಶೂನ್ಯ ಬಡ್ಡಿದರದಲ್ಲಿ ₹2 ಸಾವಿರದಿಂದ ₹10 ಸಾವಿರದವರೆಗೆ ಮೂರು ತಿಂಗಳ ಅವಧಿಗೆ ಈ ಯೋಜನೆಯಡಿ ಸಾಲ ನೀಡಲಾಗುತ್ತದೆ.</p>.<p>‘ಸರ್ಕಾರ ಬದಲಾವಣೆಯಾದ ಬಳಿಕ ನಮಗೆ ಯಾವುದೇ ಸೂಚನೆ ಬಂದಿಲ್ಲ. ಸದ್ಯಕ್ಕೆ ಯೋಜನೆಯಡಿ ಸಾಲ ವಿತರಿಸುತ್ತಿಲ್ಲ’ ಎಂದು ಹೆಸರು ಬಹಿರಂಗಕ್ಕೆ ಒಪ್ಪದ ಸಹಕಾರಿ ಬ್ಯಾಂಕ್ವೊಂದರ ವ್ಯವಸ್ಥಾಪಕ ನಿರ್ದೇಶಕರುಹೇಳುತ್ತಾರೆ.</p>.<p>‘ನಾವು ನೀಡುವ ಸಾಲದ ಮೊತ್ತಕ್ಕೆ ಸರ್ಕಾರವು ಶೇ 10ರಷ್ಟು ಬಡ್ಡಿ ಮತ್ತು ಶೇ 1ರಷ್ಟು ಪ್ರೋತ್ಸಾಹ ಧನ ನೀಡುತ್ತದೆ. ಆದರೆ, ಅಸಲಿನ ಬಗ್ಗೆ ಯಾವುದೇ ಖಾತ್ರಿ ನೀಡುವುದಿಲ್ಲ. ಸುಮ್ಮನೆ ‘ರಿಸ್ಕ್’ ಏಕೆ ಎಂದು ಸಾಲ ವಿತರಿಸುತ್ತಿಲ್ಲ’ ಎಂದೂ ಅವರು ಹೇಳಿದರು.</p>.<p>‘ಮೂರು ತಿಂಗಳಿನಿಂದ ಸಾಲ ನೀಡುತ್ತಿಲ್ಲ. ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ಯೋಜನೆಯನ್ನು ಮತ್ತೆ ಜಾರಿಗೊಳಿಸುವಂತೆ ಮನವಿ ಮಾಡಲು ನಿರ್ಧರಿಸಿದ್ದೇವೆ’ ಎಂದುಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಇ.ಸಿ. ರಂಗಸ್ವಾಮಿ ಹೇಳಿದರು.</p>.<p>‘ಬ್ಯಾಂಕ್ನವರು ಹಲವು ಬಾರಿ ಓಡಾಡಿಸುತ್ತಾರೆ. ದಿನದ ದುಡಿಮೆ ಕೈತಪ್ಪುತ್ತದೆ ಎಂಬ ಕಾರಣಕ್ಕೆ ಹಲವರಿಗೆ ಬ್ಯಾಂಕ್ಗೆ ಹೋಗಲು ಸಾಧ್ಯವಾಗುವುದಿಲ್ಲ. ಇಂದಿಗೂ ವ್ಯಾಪಾರಿಗಳು ಮೀಟರ್ ಬಡ್ಡಿ ದಂಧೆಗೆ ತುತ್ತಾಗುತ್ತಿದ್ದಾರೆ’ ಎಂದು ಫುಟ್ಪಾತ್ ವ್ಯಾಪಾರಿಗಳ ಸಂಘದ ರಾಜ್ಯ ಪ್ರಧಾನಕಾರ್ಯದರ್ಶಿ ಸೈಯದ್ ಮುಜೀಬ್ ಹೇಳಿದರು.</p>.<p class="Subhead">ಸ್ಥಗಿತಕ್ಕೆ ಸೂಚಿಸಿಲ್ಲ: ‘ಯೋಜನೆ ಯಡಿಸಾಲ ನೀಡುವುದನ್ನು ಸ್ಥಗಿತಗೊಳಿಸಿ ಎಂದು ಸರ್ಕಾರ ಯಾರಿಗೂ ಹೇಳಿಲ್ಲ. ಆದ್ಯತೆ ಮೇರೆಗೆ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ’ ಎಂದು ಸಹಕಾರ ಸೊಸೈಟಿಗಳ ಹೆಚ್ಚುವರಿ ರಿಜಿಸ್ಟ್ರಾರ್ (ಸಾಲ) ಆರ್. ಶಿವಪ್ರಕಾಶ್ ಹೇಳಿದರು.</p>.<p class="Subhead">***</p>.<p class="Subhead">ಯೋಜನೆಯ ಪ್ರಗತಿ ಮತ್ತು ಸಾಧಕ–ಬಾಧಕಗಳ ಕುರಿತು ಸೆ. 27ರಂದು ರಾಜ್ಯಮಟ್ಟದ ಸಭೆ ಕರೆಯಲಾಗಿದೆ. ಇಲಾಖೆಯ ಉನ್ನತ ಅಧಿಕಾರಿಗಳು, ಬ್ಯಾಂಕ್ಗಳ ಎಂ.ಡಿ ಪಾಲ್ಗೊಳ್ಳುವರು<br />ಆರ್. ಶಿವಪ್ರಕಾಶ್, ಸಹಕಾರ ಸೊಸೈಟಿಗಳ ಹೆಚ್ಚುವರಿ ರಿಜಿಸ್ಟ್ರಾರ್ (ಸಾಲ)</p>.<p class="Subhead">***</p>.<p class="Subhead">ಯೋಜನೆಯ ಪ್ರಗತಿ ಕುರಿತು ಸೆ. 27ರಂದು ರಾಜ್ಯಮಟ್ಟದ ಸಭೆ ಕರೆಯಲಾಗಿದೆ. ಉನ್ನತ ಅಧಿಕಾರಿಗಳು, ಬ್ಯಾಂಕ್ಗಳ ಎಂ.ಡಿ ಪಾಲ್ಗೊಳ್ಳುವರು</p>.<p class="Subhead"><strong>-ಆರ್. ಶಿವಪ್ರಕಾಶ್, ಸಹಕಾರ ಸೊಸೈಟಿಗಳ ಹೆಚ್ಚುವರಿ ರಿಜಿಸ್ಟ್ರಾರ್ (ಸಾಲ)</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>