<p>ಬಾಗಲಕೋಟೆ: ‘ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದ ಭ್ರಷ್ಟಾಚಾರದ ಪರಿಣಾಮವೇ ಮುಖ್ಯ ಎಂಜಿನಿಯರ್ ಅಮಾನತಾದರು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.</p>.<p>ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಡಿಮೆ ಭೂಮಿ ಕಳೆದುಕೊಂಡು ಹೆಚ್ಚು ಭೂಮಿಯನ್ನು ವೀರಣ್ಣ ಚರಂತಿಮಠರು ಪಡೆದಿದ್ದಾರೆ. ಇದು ಭ್ರಷ್ಟಾಚಾರ ಅಲ್ಲವೇ?’ ಎಂದು ಪ್ರಶ್ನಿಸಿದರು.</p>.<p>ಗೋವಿಂದ ಕಾರಜೋಳ ಅವರು ಆಲಮಟ್ಟಿ ಹಿನ್ನೀರಿನಲ್ಲಿ ಮುಳುಗಡೆಯಾಗಲಿದೆ ಎಂದು ಗೊತ್ತಿರುವ ಭೂಮಿಯನ್ನು ಬಾಗಲಕೋಟೆಯಲ್ಲಿ ಖರೀದಿಸುತ್ತಾರೆ. ಮುಂದೆ ಅದನ್ನು ಬಿಟಿಡಿಎ ಭೂಸ್ವಾಧೀನ ಮಾಡಿಕೊಂಡು ಪರಿಹಾರ ನೀಡುತ್ತದೆ. ಪರಿಹಾರ ಕಡಿಮೆಯಾಗಿದೆ ಎಂದು ನ್ಯಾಯಾಲಯಕ್ಕೆ ಹೋಗಿದ್ದರು. ನ್ಯಾಯಾಲಯದಲ್ಲಿ ಪ್ರತಿ ಸ್ಕ್ವಾಯರ್ ಮೀಟರ್ಗೆ ₹17 ಸಾವಿರ ಆಗಿದೆ’ ಎಂದರು.</p>.<p>‘ಗೋವಿಂದ ಕಾರಜೋಳ, ವೀರಣ್ಣ ಚರಂತಿಮಠ ಬಾಗಲಕೋಟೆ ಅಭಿವೃದ್ಧಿಗೆ ಹಿನ್ನಡೆಯುಂಟು ಮಾಡಿದ್ದಾರೆ. ಜಿಲ್ಲೆಯಲ್ಲಿ ಒಂದು ಕಡೆ ಇದ್ದರೆ, ಇವರಿಬ್ಬರೇ ಒಂದು ಕಡೆ ಇದ್ದಾರೆ. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರಕ್ಕೆ ₹630 ಕೋಟಿ ಅನುದಾನ ತಂದ್ದಿದ್ದೆವು. ಗೇಟ್ ಹಾಕಿ ನೀರು ನಿಲ್ಲಿಸಿದ್ದೂ ನಾವೇ. ಅದು ಕಾಂಗ್ರೆಸ್ ಬದ್ಧತೆ’ ಎಂದು ಹೇಳಿದರು.</p>.<p>‘ಬಾಗಲಕೋಟೆಯನ್ನು ಚಂಢೀಗಡ ಮಾದರಿಯಲ್ಲಿ ಅಭಿವೃದ್ಧಿ ಪಡಿಸಿದ್ದು ನಾವು. ಆದರೆ, ಅದನ್ನು ಅವರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಭೂಮಿ ಕಳೆದುಕೊಳ್ಳುವ ರೈತರಿಗೆ ₹3 ಸಾವಿರ ಕೋಟಿ ಅನುದಾನ ತೆಗೆದಿರಿಸಲಾಗಿದೆ. ಪರಿಹಾರ ವಿತರಣೆ ಮಾಡಲಾಗುತ್ತಿದೆ’ ಎಂದರು.</p>.<p>‘ಮುಳುಗಡೆಯಾಗುವ ಭೂಮಿಗೆ ₹20 ಲಕ್ಷ ಹಾಗೂ ₹24 ನಿಗದಿ ಮಾಡಿ ರೈತರಿಗೆ ಅನ್ಯಾಯ ಮಾಡಲಾಗಿತ್ತು. ಅದನ್ನು ನಮ್ಮ ಸರ್ಕಾರ ₹30 ಲಕ್ಷ ಹಾಗೂ ₹40 ಲಕ್ಷಕ್ಕೆ ಹೆಚ್ಚು ಮಾಡಿದೆ. ನಾಟಕ ಮಾಡಿಕೊಂಡೇ ಬಂದಿದ್ದಾರೆ’ ಎಂದು ಟೀಕಿಸಿದರು.</p>.<p>‘ಕಾಲೇಜಿಗೆ ಮತ ಕೇಳಲು ಹೋದ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ. ಪ್ರಜಾಪ್ರಭುತ್ವ ಹರಣ ಮಾಡಲಾಗುತ್ತಿದೆ. ಕೋಮು ಗಲಭೆಯಿಂದಾಗ ಹೂಡಿಕೆದಾರರು ಬಾಗಲಕೋಟೆಗೆ ಬರುತ್ತಿಲ್ಲ. ವ್ಯಾಪಾರ ಕುಸಿದಿದೆ. ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧವಾಗಿದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-20-2091166097</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ‘ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದ ಭ್ರಷ್ಟಾಚಾರದ ಪರಿಣಾಮವೇ ಮುಖ್ಯ ಎಂಜಿನಿಯರ್ ಅಮಾನತಾದರು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.</p>.<p>ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಡಿಮೆ ಭೂಮಿ ಕಳೆದುಕೊಂಡು ಹೆಚ್ಚು ಭೂಮಿಯನ್ನು ವೀರಣ್ಣ ಚರಂತಿಮಠರು ಪಡೆದಿದ್ದಾರೆ. ಇದು ಭ್ರಷ್ಟಾಚಾರ ಅಲ್ಲವೇ?’ ಎಂದು ಪ್ರಶ್ನಿಸಿದರು.</p>.<p>ಗೋವಿಂದ ಕಾರಜೋಳ ಅವರು ಆಲಮಟ್ಟಿ ಹಿನ್ನೀರಿನಲ್ಲಿ ಮುಳುಗಡೆಯಾಗಲಿದೆ ಎಂದು ಗೊತ್ತಿರುವ ಭೂಮಿಯನ್ನು ಬಾಗಲಕೋಟೆಯಲ್ಲಿ ಖರೀದಿಸುತ್ತಾರೆ. ಮುಂದೆ ಅದನ್ನು ಬಿಟಿಡಿಎ ಭೂಸ್ವಾಧೀನ ಮಾಡಿಕೊಂಡು ಪರಿಹಾರ ನೀಡುತ್ತದೆ. ಪರಿಹಾರ ಕಡಿಮೆಯಾಗಿದೆ ಎಂದು ನ್ಯಾಯಾಲಯಕ್ಕೆ ಹೋಗಿದ್ದರು. ನ್ಯಾಯಾಲಯದಲ್ಲಿ ಪ್ರತಿ ಸ್ಕ್ವಾಯರ್ ಮೀಟರ್ಗೆ ₹17 ಸಾವಿರ ಆಗಿದೆ’ ಎಂದರು.</p>.<p>‘ಗೋವಿಂದ ಕಾರಜೋಳ, ವೀರಣ್ಣ ಚರಂತಿಮಠ ಬಾಗಲಕೋಟೆ ಅಭಿವೃದ್ಧಿಗೆ ಹಿನ್ನಡೆಯುಂಟು ಮಾಡಿದ್ದಾರೆ. ಜಿಲ್ಲೆಯಲ್ಲಿ ಒಂದು ಕಡೆ ಇದ್ದರೆ, ಇವರಿಬ್ಬರೇ ಒಂದು ಕಡೆ ಇದ್ದಾರೆ. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರಕ್ಕೆ ₹630 ಕೋಟಿ ಅನುದಾನ ತಂದ್ದಿದ್ದೆವು. ಗೇಟ್ ಹಾಕಿ ನೀರು ನಿಲ್ಲಿಸಿದ್ದೂ ನಾವೇ. ಅದು ಕಾಂಗ್ರೆಸ್ ಬದ್ಧತೆ’ ಎಂದು ಹೇಳಿದರು.</p>.<p>‘ಬಾಗಲಕೋಟೆಯನ್ನು ಚಂಢೀಗಡ ಮಾದರಿಯಲ್ಲಿ ಅಭಿವೃದ್ಧಿ ಪಡಿಸಿದ್ದು ನಾವು. ಆದರೆ, ಅದನ್ನು ಅವರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಭೂಮಿ ಕಳೆದುಕೊಳ್ಳುವ ರೈತರಿಗೆ ₹3 ಸಾವಿರ ಕೋಟಿ ಅನುದಾನ ತೆಗೆದಿರಿಸಲಾಗಿದೆ. ಪರಿಹಾರ ವಿತರಣೆ ಮಾಡಲಾಗುತ್ತಿದೆ’ ಎಂದರು.</p>.<p>‘ಮುಳುಗಡೆಯಾಗುವ ಭೂಮಿಗೆ ₹20 ಲಕ್ಷ ಹಾಗೂ ₹24 ನಿಗದಿ ಮಾಡಿ ರೈತರಿಗೆ ಅನ್ಯಾಯ ಮಾಡಲಾಗಿತ್ತು. ಅದನ್ನು ನಮ್ಮ ಸರ್ಕಾರ ₹30 ಲಕ್ಷ ಹಾಗೂ ₹40 ಲಕ್ಷಕ್ಕೆ ಹೆಚ್ಚು ಮಾಡಿದೆ. ನಾಟಕ ಮಾಡಿಕೊಂಡೇ ಬಂದಿದ್ದಾರೆ’ ಎಂದು ಟೀಕಿಸಿದರು.</p>.<p>‘ಕಾಲೇಜಿಗೆ ಮತ ಕೇಳಲು ಹೋದ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ. ಪ್ರಜಾಪ್ರಭುತ್ವ ಹರಣ ಮಾಡಲಾಗುತ್ತಿದೆ. ಕೋಮು ಗಲಭೆಯಿಂದಾಗ ಹೂಡಿಕೆದಾರರು ಬಾಗಲಕೋಟೆಗೆ ಬರುತ್ತಿಲ್ಲ. ವ್ಯಾಪಾರ ಕುಸಿದಿದೆ. ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧವಾಗಿದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-20-2091166097</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>