ಬಗರ್ಹುಕುಂ ಅರ್ಜಿಗಳು ವಿಲೇವಾರಿಯಾಗದ ವಿಚಾರವನ್ನು ಪ್ರಸ್ತಾಪಿಸಿದ ಸಚಿವರು, ಅರ್ಜಿ ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಸಕ್ರಮಕ್ಕೆ ಕೋರಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಈ ಅರ್ಜಿಗಳು ವಿಲೇವಾರಿ ಆಗದ ಕಾರಣ ರೈತರು ದಿನವೂ ಸರ್ಕಾರಿ ಕಚೇರಿಗಳಿಗೆ ಅಲೆಯುವಂತಾಗಿದೆ. ಆದ್ದರಿಂದ ಎಲ್ಲಾ ಅರ್ಜಿಗಳನ್ನು ಆರು ತಿಂಗಳೊಳಗೆ ವಿಲೇವಾರಿ ಮಾಡಬೇಕು ಎಂದು ತಾಕೀತು ಮಾಡಿದರು.