<p>ಬೆಂಗಳೂರು: ‘ಬಗರ್ಹುಕುಂ ಅಡಿಯಲ್ಲಿ ಅರ್ಹ ರೈತರಿಗೆ ಭೂ ಮಂಜೂರು ಮಾಡುವ ಕೆಲಸ ನಿರೀಕ್ಷೆ ಮಟ್ಟದಲ್ಲಿ ನಡೆಯುತ್ತಿಲ್ಲ. ಆರು ತಿಂಗಳಲ್ಲಿ ಎಲ್ಲ ಅರ್ಹರಿಗೂ ಜಮೀನು ಮಂಜೂರು ಮಾಡಬೇಕು’ ಎಂದು ತಹಶೀಲ್ದಾರ್ ಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದರು.</p><p>ತಹಶೀಲ್ದಾರ್ಗಳ ಜೊತೆ ಶುಕ್ರವಾರ ವಿಡಿಯೊ ಸಂವಾದ ನಡೆಸಿದ ಅವರು, ‘ಬಗರ್ ಹುಕುಂ ಬಡವರ ಕೆಲಸ. ಕೆಲ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆ. 15 ದಿನಗಳಿಗೊಮ್ಮೆ ಶಾಸಕರ ನೇತೃತ್ವ<br>ದಲ್ಲಿ ಸಭೆ ನಡೆಸಿ, ಅರ್ಹರಿಗೆ ಜಮೀನು ಮಂಜೂರು ಮಾಡಬೇಕು’ ಎಂದು ಸೂಚಿಸಿದರು.</p><p>‘ರೈತರು ತಮ್ಮ ಪಾಲಿನ ಜಮೀನು ಇದ್ದರೂ ಪೋಡಿಯಾಗದೆ ಸರ್ಕಾರಿ ಕಚೇರಿಗಳಿಗೆ ಸುತ್ತುತ್ತಿದ್ದಾರೆ. ತಹಶೀಲ್ದಾ ರರು ನಿಗದಿತ ಜಮೀನಿಗೆ ಸಂಬಂಧಿಸಿದ ನಮೂನೆ 1-5 ದಾಖಲೆಯನ್ನು ಸಿದ್ದಪಡಿಸಿ ಮುಂದಿನ ಹಂತದ ನಮೂನೆ 6-10 ಕೆಲಸಕ್ಕೆ ಭೂ ಮಾಪನ ಇಲಾಖೆಗೆ ಕಡತ ಕಳುಹಿಸಬೇಕು. ಆದರೆ, ಬಹುತೇಕ ಜಿಲ್ಲೆಗಳಲ್ಲಿ ಈ ಕಾರ್ಯ ಸಮಾಧಾನಕರ ಆಗಿಲ್ಲ’ ಎಂದು ಸಚಿವರು ಅಸಮಾಧಾನ ಹೊರಹಾಕಿದರು.</p><p>‘ಮುಂದಿನ ತಿಂಗಳು ಮಂಗಳೂರಿಗೆ ಮುಖ್ಯಮಂತ್ರಿ ಭೇಟಿ ನೀಡಲಿದ್ದು, ಅಷ್ಟರಲ್ಲಿ 10 ಸಾವಿರ ಪ್ರಕರಣಗಳು ದುರಸ್ತಿಗೊಂಡು ರೈತರಿಗೆ ದಾಖಲೆ ನೀಡಬೇಕು’ ಎಂದು ದಕ್ಷಿಣ ಕನ್ನಡ ಜಿಲ್ಲೆಯ ತಹಶೀಲ್ದಾರರಿಗೆ ಸಚಿವರು ಗುರಿ ನಿಗದಿಪಡಿಸಿದರು. ‘ತಹಶೀಲ್ದಾರ್ ಕಚೇರಿಗಳಲ್ಲಿ ಭೂ ದಾಖಲೆಗಳನ್ನು ಅಭಿಯಾನದಂತೆ ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸಲಾಗುತ್ತಿದೆ. ಈ ಕೆಲಸದಲ್ಲೂ ಕೆಲವು ತಹಶೀಲ್ದಾರರು ಅಸಡ್ಡೆ ತೋರಿಸುತ್ತಿದ್ದಾರೆ. ಅಂಥವರಿಗೆ ನೊಟೀಸ್ ನೀಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p><p>‘ಪ್ರತಿ ತಹಶೀಲ್ದಾರ್ ಕಚೇರಿಗೂ ದಿನಕ್ಕೆ 6 ಸಾವಿರ ಪುಟಗಳನ್ನು ಸ್ಕ್ಯಾನ್ ಮಾಡುವ ಗುರಿ ನೀಡಲಾಗಿತ್ತು. ಚಳ್ಳಕೆರೆ, ಮೊಳಕಾಲ್ಮೂರು, ಕೊಪ್ಪ, ಕೊಪ್ಪಳ, ಹೊನ್ನಾವರ ಕಚೇರಿಗಳಲ್ಲಿ 9 ಸಾವಿರ ಪುಟ ಸ್ಕ್ಯಾನ್ ಮಾಡಲಾಗುತ್ತಿದೆ. ಉಳಿದವರಿಗೆ ಆಗುತ್ತಿಲ್ಲ ಎಂದರೆ ಏನರ್ಥ’ ಎಂದು ಸಚಿವರು ಆಕ್ರೋಶ ಹೊರಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಬಗರ್ಹುಕುಂ ಅಡಿಯಲ್ಲಿ ಅರ್ಹ ರೈತರಿಗೆ ಭೂ ಮಂಜೂರು ಮಾಡುವ ಕೆಲಸ ನಿರೀಕ್ಷೆ ಮಟ್ಟದಲ್ಲಿ ನಡೆಯುತ್ತಿಲ್ಲ. ಆರು ತಿಂಗಳಲ್ಲಿ ಎಲ್ಲ ಅರ್ಹರಿಗೂ ಜಮೀನು ಮಂಜೂರು ಮಾಡಬೇಕು’ ಎಂದು ತಹಶೀಲ್ದಾರ್ ಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದರು.</p><p>ತಹಶೀಲ್ದಾರ್ಗಳ ಜೊತೆ ಶುಕ್ರವಾರ ವಿಡಿಯೊ ಸಂವಾದ ನಡೆಸಿದ ಅವರು, ‘ಬಗರ್ ಹುಕುಂ ಬಡವರ ಕೆಲಸ. ಕೆಲ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆ. 15 ದಿನಗಳಿಗೊಮ್ಮೆ ಶಾಸಕರ ನೇತೃತ್ವ<br>ದಲ್ಲಿ ಸಭೆ ನಡೆಸಿ, ಅರ್ಹರಿಗೆ ಜಮೀನು ಮಂಜೂರು ಮಾಡಬೇಕು’ ಎಂದು ಸೂಚಿಸಿದರು.</p><p>‘ರೈತರು ತಮ್ಮ ಪಾಲಿನ ಜಮೀನು ಇದ್ದರೂ ಪೋಡಿಯಾಗದೆ ಸರ್ಕಾರಿ ಕಚೇರಿಗಳಿಗೆ ಸುತ್ತುತ್ತಿದ್ದಾರೆ. ತಹಶೀಲ್ದಾ ರರು ನಿಗದಿತ ಜಮೀನಿಗೆ ಸಂಬಂಧಿಸಿದ ನಮೂನೆ 1-5 ದಾಖಲೆಯನ್ನು ಸಿದ್ದಪಡಿಸಿ ಮುಂದಿನ ಹಂತದ ನಮೂನೆ 6-10 ಕೆಲಸಕ್ಕೆ ಭೂ ಮಾಪನ ಇಲಾಖೆಗೆ ಕಡತ ಕಳುಹಿಸಬೇಕು. ಆದರೆ, ಬಹುತೇಕ ಜಿಲ್ಲೆಗಳಲ್ಲಿ ಈ ಕಾರ್ಯ ಸಮಾಧಾನಕರ ಆಗಿಲ್ಲ’ ಎಂದು ಸಚಿವರು ಅಸಮಾಧಾನ ಹೊರಹಾಕಿದರು.</p><p>‘ಮುಂದಿನ ತಿಂಗಳು ಮಂಗಳೂರಿಗೆ ಮುಖ್ಯಮಂತ್ರಿ ಭೇಟಿ ನೀಡಲಿದ್ದು, ಅಷ್ಟರಲ್ಲಿ 10 ಸಾವಿರ ಪ್ರಕರಣಗಳು ದುರಸ್ತಿಗೊಂಡು ರೈತರಿಗೆ ದಾಖಲೆ ನೀಡಬೇಕು’ ಎಂದು ದಕ್ಷಿಣ ಕನ್ನಡ ಜಿಲ್ಲೆಯ ತಹಶೀಲ್ದಾರರಿಗೆ ಸಚಿವರು ಗುರಿ ನಿಗದಿಪಡಿಸಿದರು. ‘ತಹಶೀಲ್ದಾರ್ ಕಚೇರಿಗಳಲ್ಲಿ ಭೂ ದಾಖಲೆಗಳನ್ನು ಅಭಿಯಾನದಂತೆ ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸಲಾಗುತ್ತಿದೆ. ಈ ಕೆಲಸದಲ್ಲೂ ಕೆಲವು ತಹಶೀಲ್ದಾರರು ಅಸಡ್ಡೆ ತೋರಿಸುತ್ತಿದ್ದಾರೆ. ಅಂಥವರಿಗೆ ನೊಟೀಸ್ ನೀಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p><p>‘ಪ್ರತಿ ತಹಶೀಲ್ದಾರ್ ಕಚೇರಿಗೂ ದಿನಕ್ಕೆ 6 ಸಾವಿರ ಪುಟಗಳನ್ನು ಸ್ಕ್ಯಾನ್ ಮಾಡುವ ಗುರಿ ನೀಡಲಾಗಿತ್ತು. ಚಳ್ಳಕೆರೆ, ಮೊಳಕಾಲ್ಮೂರು, ಕೊಪ್ಪ, ಕೊಪ್ಪಳ, ಹೊನ್ನಾವರ ಕಚೇರಿಗಳಲ್ಲಿ 9 ಸಾವಿರ ಪುಟ ಸ್ಕ್ಯಾನ್ ಮಾಡಲಾಗುತ್ತಿದೆ. ಉಳಿದವರಿಗೆ ಆಗುತ್ತಿಲ್ಲ ಎಂದರೆ ಏನರ್ಥ’ ಎಂದು ಸಚಿವರು ಆಕ್ರೋಶ ಹೊರಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>