<p><strong>ಬೆಂಗಳೂರು</strong>: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿನ ಅಧ್ಯಯನ ಪೀಠಗಳ ಸ್ಥಿತಿಗತಿ ಕುರಿತು ತುಮಕೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಓ.ಅನಂತರಾಮಯ್ಯ ಅವರು ಸಲ್ಲಿಸಿದ ವರದಿಯನ್ನು ಪರಿಶೀಲಿಸಲು ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ತ್ರಿಸದಸ್ಯ ಸಮಿತಿ ರಚಿಸಿ, ಸರ್ಕಾರ ಆದೇಶ ಹೊರಡಿಸಿದೆ.</p>.<p>ಸಾಹಿತಿಗಳಾದ ನಟರಾಜ ಹುಳಿಯಾರ್, ವಸುಂಧರಾ ಭೂಪತಿ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. </p>.<p>ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಸ್ಥಾಪಿಸಲಾಗಿರುವ ವಿವಿಧ ಅಧ್ಯಯನ ಪೀಠಗಳು ನಾಮಕಾವಾಸ್ತೆಗೆ ಎನ್ನುವಂತಾಗಿವೆ. ಅನುದಾನ ಕೊರತೆ, ವಿಶ್ವವಿದ್ಯಾಲಯಗಳ ನಿರಾಸಕ್ತಿ ಮತ್ತಿತರ ಕಾರಣಗಳಿಂದ ಬಹಳಷ್ಟು ಪೀಠಗಳು ನಿಷ್ಕ್ರಿಯಾಗಿವೆ. ಅವುಗಳ ಚಟುವಟಿಕೆ, ಸ್ಥಿತಿಗತಿ ಕುರಿತು ವರದಿ ನೀಡಲು ಅನಂತರಾಮಯ್ಯ ಅವರನ್ನು ನೇಮಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿನ ಅಧ್ಯಯನ ಪೀಠಗಳ ಸ್ಥಿತಿಗತಿ ಕುರಿತು ತುಮಕೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಓ.ಅನಂತರಾಮಯ್ಯ ಅವರು ಸಲ್ಲಿಸಿದ ವರದಿಯನ್ನು ಪರಿಶೀಲಿಸಲು ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ತ್ರಿಸದಸ್ಯ ಸಮಿತಿ ರಚಿಸಿ, ಸರ್ಕಾರ ಆದೇಶ ಹೊರಡಿಸಿದೆ.</p>.<p>ಸಾಹಿತಿಗಳಾದ ನಟರಾಜ ಹುಳಿಯಾರ್, ವಸುಂಧರಾ ಭೂಪತಿ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. </p>.<p>ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಸ್ಥಾಪಿಸಲಾಗಿರುವ ವಿವಿಧ ಅಧ್ಯಯನ ಪೀಠಗಳು ನಾಮಕಾವಾಸ್ತೆಗೆ ಎನ್ನುವಂತಾಗಿವೆ. ಅನುದಾನ ಕೊರತೆ, ವಿಶ್ವವಿದ್ಯಾಲಯಗಳ ನಿರಾಸಕ್ತಿ ಮತ್ತಿತರ ಕಾರಣಗಳಿಂದ ಬಹಳಷ್ಟು ಪೀಠಗಳು ನಿಷ್ಕ್ರಿಯಾಗಿವೆ. ಅವುಗಳ ಚಟುವಟಿಕೆ, ಸ್ಥಿತಿಗತಿ ಕುರಿತು ವರದಿ ನೀಡಲು ಅನಂತರಾಮಯ್ಯ ಅವರನ್ನು ನೇಮಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>