ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರಿ ಲಂಕೇಶ್ ಹತ್ಯೆ ಆರೋಪಿಗೆ ಜಾಮೀನು ನಿರಾಕರಣೆ

Last Updated 10 ಜನವರಿ 2020, 19:29 IST
ಅಕ್ಷರ ಗಾತ್ರ

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 17ನೇ ಆರೋಪಿ ಕೆ.ಟಿ. ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

ಈ ಕುರಿತ ತೀರ್ಪನ್ನು ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು, ಶುಕ್ರವಾರ ಕಲಬುರ್ಗಿ ಪೀಠದಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಕಟಿಸಿದರು.

‘ನವೀನ್ ಕುಮಾರ್, ಪ್ರೊ.ಭಗವಾನ್ ಅವರನ್ನೂ ಹತ್ಯೆ ಮಾಡಲು ಪಿತೂರಿ ನಡೆಸಿದ್ದರು. ಇದಕ್ಕೆ ಅಗತ್ಯ ಸಾಕ್ಷ್ಯಾಧಾರಗಳಿವೆ. ಅಂತೆಯೇ ಅರ್ಜಿದಾರರ ವಿರುದ್ಧ ಈಗಾಗಲೇ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆದ್ದರಿಂದ ಜಾಮೀನು ನೀಡಬಾರದು’ ಎಂಬ ಪ್ರಾಸಿಕ್ಯೂಟರ್‌ ವಾದವನ್ನು ನ್ಯಾಯಪೀಠ ಪುರಸ್ಕರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT