ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Eid Ul Adha | ರಾಜ್ಯದಾದ್ಯಂತ ಮುಸ್ಲಿಮರಿಂದ ಶ್ರದ್ಧೆ, ಭಕ್ತಿಯಿಂದ ಬಕ್ರೀದ್‌ ಆಚರಣೆ

Published 29 ಜೂನ್ 2023, 5:34 IST
Last Updated 29 ಜೂನ್ 2023, 5:34 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಾದ್ಯಂತ ಮುಸ್ಲಿಮರು ಶ್ರದ್ಧೆ, ಭಕ್ತಿಯಿಂದ ಗುರುವಾರ ಈದ್‌ ಉಲ್‌ ಅಧಾ ಆಚರಿಸಿದರು.

ತಮ್ಮ ಅನುಕೂಲಕ್ಕೆ ತಕ್ಕಂತೆ ಸಮಯ ನಿಗದಿ ಮಾಡಿಕೊಂಡು ಮೈದಾನ ಹಾಗೂ ಮಸೀದಿಗಳಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಬಳಿಕ, ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಮಕ್ಕಳು, ಹಿರಿಯರು ಸಾಂಪ್ರದಾಯಿಕ ಹೊಸ ಬಟ್ಟೆ ಧರಿಸಿ ಬಂದಿದ್ದರು. ತಲೆ ಮೇಲೆ ವಿವಿಧ ವಿನ್ಯಾಸಗಳ ಟೊಪ್ಪಿಗೆ ಧರಿಸಿ ಗಮನ ಸೆಳೆದರು.

ಮುಸ್ಲಿಂ ಬಾಂಧವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಮುಖಂಡರು, ಸೆಲೆಬ್ರಿಟಿಗಳು ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ. 

ರಾಜ್ಯದ ಬಹುತೇಕ ಭಾಗಗಳಲ್ಲಿ ಪ್ರಾರ್ಥನೆ ಮೈದಾನ ಹಾಗೂ ಮಸೀದಿಗಳಲ್ಲಿ ತ್ಯಾಗ ಬಲಿದಾನದ ಸಂಕೇತವಾಗಿ ಕುರ್ಬಾನಿ ಸೇವೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT