<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಲು ಸಾಮಾಜಿಕ ಜಾಲತಾಣಗಳಲ್ಲಿ ಲಂಗೂ ಲಗಾಮು ಇಲ್ಲದೇ ಪ್ರಸಾರವಾಗುವ ಅಶ್ಲೀಲ, ಲೈಂಗಿಕ ಕಾರ್ಯಕ್ರಮಗಳೇ ಕಾರಣ. ಇವುಗಳಿಗೆ ಕಡಿವಾಣ ಹಾಕಬೇಕು’ ಎಂದು ಜೆಡಿಎಸ್ನ ಸುರೇಶ್ ಬಾಬು ಒತ್ತಾಯಿಸಿದರು.</p>.<p>ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಕಳೆದ 20 ತಿಂಗಳಲ್ಲಿ 26,463 ಬಾಲಕಿಯರು ಗರ್ಭ ಧರಿಸಿದ್ದಾರೆ. ಇದು ಆತಂಕದ ವಿಚಾರ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಇನ್ನೂ ಪ್ರಪಂಚದ ಅರಿವೇ ಇಲ್ಲದ ಸಮಯದಲ್ಲಿ ಪ್ರೀತಿ–ಪ್ರೇಮ ಎಂದು ಬಾಲಕಿಯರು ಮೋಸ ಹೋಗುತ್ತಿದ್ದಾರೆ. ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಲೈಂಗಿಕತೆಗೆ ಉತ್ತೇಜನ ನೀಡುವ ಜಾಹೀರಾತುಗಳು ಪ್ರಭಾವ ಬೀರುತ್ತಿವೆ. ಇವುಗಳ ಮೇಲೆ ನಿಗಾ ಇಡುವುದರ ಜತೆಗೆ ಕಡಿವಾಣ ಹಾಕಬೇಕು’ ಎಂದು ಆಗ್ರಹಿಸಿದರು.</p>.<p>‘ಹೀಗೆ ಮೋಸ ಹೋಗುವ ಬಾಲಕಿಯರನ್ನು ಅವರ ಕುಟುಂಬಗಳೂ ದೂರ ಮಾಡುತ್ತಿವೆ. ಅವರು ಕಣ್ಣೀರಿನ ಜೀವನ ಸಾಗಿಸಬೇಕಾಗುತ್ತದೆ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು. ಇದನ್ನು ತಡೆಯಲು ಅಗತ್ಯ ಶಿಕ್ಷಣ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಅತ್ಯಾಚಾರ ಎಸಗುವವರನ್ನು ಶಿಕ್ಷಿಸಬೇಕು’ ಎಂದು ಸುರೇಶ್ ಬಾಬು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಲು ಸಾಮಾಜಿಕ ಜಾಲತಾಣಗಳಲ್ಲಿ ಲಂಗೂ ಲಗಾಮು ಇಲ್ಲದೇ ಪ್ರಸಾರವಾಗುವ ಅಶ್ಲೀಲ, ಲೈಂಗಿಕ ಕಾರ್ಯಕ್ರಮಗಳೇ ಕಾರಣ. ಇವುಗಳಿಗೆ ಕಡಿವಾಣ ಹಾಕಬೇಕು’ ಎಂದು ಜೆಡಿಎಸ್ನ ಸುರೇಶ್ ಬಾಬು ಒತ್ತಾಯಿಸಿದರು.</p>.<p>ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಕಳೆದ 20 ತಿಂಗಳಲ್ಲಿ 26,463 ಬಾಲಕಿಯರು ಗರ್ಭ ಧರಿಸಿದ್ದಾರೆ. ಇದು ಆತಂಕದ ವಿಚಾರ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಇನ್ನೂ ಪ್ರಪಂಚದ ಅರಿವೇ ಇಲ್ಲದ ಸಮಯದಲ್ಲಿ ಪ್ರೀತಿ–ಪ್ರೇಮ ಎಂದು ಬಾಲಕಿಯರು ಮೋಸ ಹೋಗುತ್ತಿದ್ದಾರೆ. ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಲೈಂಗಿಕತೆಗೆ ಉತ್ತೇಜನ ನೀಡುವ ಜಾಹೀರಾತುಗಳು ಪ್ರಭಾವ ಬೀರುತ್ತಿವೆ. ಇವುಗಳ ಮೇಲೆ ನಿಗಾ ಇಡುವುದರ ಜತೆಗೆ ಕಡಿವಾಣ ಹಾಕಬೇಕು’ ಎಂದು ಆಗ್ರಹಿಸಿದರು.</p>.<p>‘ಹೀಗೆ ಮೋಸ ಹೋಗುವ ಬಾಲಕಿಯರನ್ನು ಅವರ ಕುಟುಂಬಗಳೂ ದೂರ ಮಾಡುತ್ತಿವೆ. ಅವರು ಕಣ್ಣೀರಿನ ಜೀವನ ಸಾಗಿಸಬೇಕಾಗುತ್ತದೆ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು. ಇದನ್ನು ತಡೆಯಲು ಅಗತ್ಯ ಶಿಕ್ಷಣ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಅತ್ಯಾಚಾರ ಎಸಗುವವರನ್ನು ಶಿಕ್ಷಿಸಬೇಕು’ ಎಂದು ಸುರೇಶ್ ಬಾಬು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>