<p><strong>ಪುತ್ತೂರು: </strong>ಪುತ್ತೂರಿನ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ಕಂಪ್ಯೂಟರ್ ವಿಜ್ಞಾನಿ ಕಿನ್ನಿಕಂಬಳ ಪದ್ಮನಾಭ ರಾವ್ (ಕೆ.ಪಿ. ರಾವ್) ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹25 ಸಾವಿರ ನಗದು, ಸ್ಮರಣಿಕೆ ಮತ್ತು ಸನ್ಮಾನ ಪತ್ರ ಒಳಗೊಂಡಿದೆ.</p>.<p>ಡಾ. ಶಿವರಾಮ ಕಾರಂತರ ಜನ್ಮದಿನವಾದ ಅ.10ರಂದು, ಪುತ್ತೂರಿನ ಕಾರಂತ ಬಾಲವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪುತ್ತೂರು ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ತಿಳಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಂಪ್ಯೂಟರ್, ಟ್ಯಾಬ್ಲೆಟ್, ಮೊಬೈಲ್ಗಳಲ್ಲಿ ಬಳಸುವ ಕನ್ನಡ ಕೀಲಿಮಣೆಯು ಕೆ.ಪಿ. ರಾವ್ ಅವರು ಅಭಿವೃದ್ಧಿಪಡಿಸಿದ ವಿನ್ಯಾಸವನ್ನು ಅವಲಂಬಿಸಿದೆ. ತಮ್ಮ ಸಂಶೋಧನೆಗಾಗಿ ಪೇಟೆಂಟ್ ಕೂಡ ಪಡೆಯದೆ ಅದನ್ನು ಕನ್ನಡಕ್ಕಾಗಿ ಸಮರ್ಪಿಸಿದ ಕೆ.ಪಿ. ರಾವ್ ಅವರಿಗೆ ಅರ್ಹವಾಗಿಯೇ ಈ ಪ್ರಶಸ್ತಿ ಸಲ್ಲುತ್ತದೆ’ ಎಂದರು.</p>.<p>‘ಅ.10ರಂದು ನಡೆಯುವ ಕಾರ್ಯಕ್ರಮದಲ್ಲಿ ‘ಬಾಲವದಲ್ಲಿ ಭಾರ್ಗವ’ ಕೃತಿ ಬಿಡುಗಡೆಗೊಳ್ಳಲಿದೆ. ಪುತ್ತೂರಿನ ಪತ್ರಕರ್ತ ಬಿ.ಟಿ. ರಂಜನ್ ಅವರಿಗೆ ಪತ್ರಿಕೋದ್ಯಮ ಜೀವಮಾನದ ಸಾಧನೆಗಾಗಿ ವಿಶೇಷ ಪ್ರಶಸ್ತಿ ನೀಡಲಾಗುವುದು’ ಎಂದರು.</p>.<p>ಶಿವರಾಮ ಕಾರಂತರ ಬಾಲವನದ ವಿಶೇಷ ಕರ್ತವ್ಯಾಧಿಕಾರಿ ಡಾ. ಸುಂದರ್ ಕೇನಾಜೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು: </strong>ಪುತ್ತೂರಿನ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ಕಂಪ್ಯೂಟರ್ ವಿಜ್ಞಾನಿ ಕಿನ್ನಿಕಂಬಳ ಪದ್ಮನಾಭ ರಾವ್ (ಕೆ.ಪಿ. ರಾವ್) ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹25 ಸಾವಿರ ನಗದು, ಸ್ಮರಣಿಕೆ ಮತ್ತು ಸನ್ಮಾನ ಪತ್ರ ಒಳಗೊಂಡಿದೆ.</p>.<p>ಡಾ. ಶಿವರಾಮ ಕಾರಂತರ ಜನ್ಮದಿನವಾದ ಅ.10ರಂದು, ಪುತ್ತೂರಿನ ಕಾರಂತ ಬಾಲವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪುತ್ತೂರು ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ತಿಳಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಂಪ್ಯೂಟರ್, ಟ್ಯಾಬ್ಲೆಟ್, ಮೊಬೈಲ್ಗಳಲ್ಲಿ ಬಳಸುವ ಕನ್ನಡ ಕೀಲಿಮಣೆಯು ಕೆ.ಪಿ. ರಾವ್ ಅವರು ಅಭಿವೃದ್ಧಿಪಡಿಸಿದ ವಿನ್ಯಾಸವನ್ನು ಅವಲಂಬಿಸಿದೆ. ತಮ್ಮ ಸಂಶೋಧನೆಗಾಗಿ ಪೇಟೆಂಟ್ ಕೂಡ ಪಡೆಯದೆ ಅದನ್ನು ಕನ್ನಡಕ್ಕಾಗಿ ಸಮರ್ಪಿಸಿದ ಕೆ.ಪಿ. ರಾವ್ ಅವರಿಗೆ ಅರ್ಹವಾಗಿಯೇ ಈ ಪ್ರಶಸ್ತಿ ಸಲ್ಲುತ್ತದೆ’ ಎಂದರು.</p>.<p>‘ಅ.10ರಂದು ನಡೆಯುವ ಕಾರ್ಯಕ್ರಮದಲ್ಲಿ ‘ಬಾಲವದಲ್ಲಿ ಭಾರ್ಗವ’ ಕೃತಿ ಬಿಡುಗಡೆಗೊಳ್ಳಲಿದೆ. ಪುತ್ತೂರಿನ ಪತ್ರಕರ್ತ ಬಿ.ಟಿ. ರಂಜನ್ ಅವರಿಗೆ ಪತ್ರಿಕೋದ್ಯಮ ಜೀವಮಾನದ ಸಾಧನೆಗಾಗಿ ವಿಶೇಷ ಪ್ರಶಸ್ತಿ ನೀಡಲಾಗುವುದು’ ಎಂದರು.</p>.<p>ಶಿವರಾಮ ಕಾರಂತರ ಬಾಲವನದ ವಿಶೇಷ ಕರ್ತವ್ಯಾಧಿಕಾರಿ ಡಾ. ಸುಂದರ್ ಕೇನಾಜೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>