ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಂತಹ ಹೇಳಿಕೆಗಳನ್ನು ರಾಜ್ಯದ ಜನರು ಅರ್ಥ ಮಾಡಿಕೊಳ್ಳಬೇಕು. ಲೋಕಸಭಾ ಚುನಾವಣೆವರೆಗೆ ಮಾತ್ರ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು, ನಂತರ ನಿಲ್ಲಿಸಲು ಕಾಂಗ್ರೆಸ್ ಪಕ್ಷದ ಸಭೆಯಲ್ಲೇ ನಿರ್ಧಾರವಾಗಿದೆ. ಪಕ್ಷದ ರಹಸ್ಯ ಕಾರ್ಯಸೂಚಿಯನ್ನು ಬಾಲಕೃಷ್ಣ ಅವರು ಬಹಿರಂಗಪಡಿಸಿದ್ದಾರೆ. ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಅವರಿಗೆ ಭಯ ತಂದಿದೆ ಎಂದರು.