<p><strong>ಬೆಂಗಳೂರು/ಕುಣಿಗಲ್</strong>: ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಲಾದ ಪ್ರಕರಣದಲ್ಲಿ, ಕುಣಿಗಲ್ ತಾಲ್ಲೂಕಿನ ಹುಲಿಯೂರು ದುರ್ಗ ಹೋಬಳಿ ಹಂಗರಹಳ್ಳಿಯ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನದ (ಶ್ರೀ ಮಠ) ಬಾಲ ಮಂಜುನಾಥ ಸ್ವಾಮೀಜಿ (36) ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.</p>.<p>ಈ ಕುರಿತಂತೆ ಬಾಲ ಮಂಜುನಾಥ ಸ್ವಾಮೀಜಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿ ಆದೇಶಿಸಿದೆ.</p> .<p>‘ಸ್ವಾಮೀಜಿ ವಿರುದ್ಧ ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಆಧಾರರಹಿತ ಮತ್ತು ಕಾನೂನುಬಾಹಿರವಾಗಿದೆ. ಮೇಲ್ನೋಟಕ್ಕೆ ಇದು ದುರುದ್ದೇಶಪೂರಿತ ಮತ್ತು ಸುಳ್ಳು ಅಂಶಗಳಿಂದ ಕೂಡಿದೆ. ಸ್ವಾಮೀಜಿಯ ವ್ಯಕ್ತಿತ್ವಕ್ಕೆ ಮತ್ತು ಕೀರ್ತಿಗೆ ಧಕ್ಕೆ ತರುವಂತಿದೆ’ ಎಂದು ಸ್ವಾಮೀಜಿ ಪರ ಹೈಕೋರ್ಟ್ ವಕೀಲೆ ಲೀಲಾ ಪಿ.ದೇವಾಡಿಗ ಅವರ ವಾದಾಂಶಗಳನ್ನು ನ್ಯಾಯಪೀಠ ಮನ್ನಿಸಿದೆ.</p>.<p><strong>ಪ್ರಕರಣವೇನು?</strong>: ಹುಲಿಯೂರು ದುರ್ಗ–ಮಾಗಡಿ ರಸ್ತೆಯಲ್ಲಿರುವ ಕಾಡು ಶನೈಶ್ಚರ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ಮಂಜುನಾಥ ಸ್ವಾಮೀಜಿ 2016ರಲ್ಲಿ ಹಂಗರಹಳ್ಳಿಯಲ್ಲಿ ಶನೈಶ್ಚರ ಪೂಜೆ ಮುಖಾಂತರವೇ ವಿದ್ಯಾ ಚೌಡೇಶ್ವರಿ ದೇವಸ್ಥಾನ ಮತ್ತು ಮಠ ನಿರ್ಮಿಸಿದ್ದಾರೆ. ಇವರ ವಿರುದ್ಧ ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ 2024ರ ಮಾರ್ಚ್ 7ರಂದು ನೀಡಲಾದ ದೂರಿನ ಅನುಸಾರ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಪ್ರಕರಣ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು/ಕುಣಿಗಲ್</strong>: ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಲಾದ ಪ್ರಕರಣದಲ್ಲಿ, ಕುಣಿಗಲ್ ತಾಲ್ಲೂಕಿನ ಹುಲಿಯೂರು ದುರ್ಗ ಹೋಬಳಿ ಹಂಗರಹಳ್ಳಿಯ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನದ (ಶ್ರೀ ಮಠ) ಬಾಲ ಮಂಜುನಾಥ ಸ್ವಾಮೀಜಿ (36) ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.</p>.<p>ಈ ಕುರಿತಂತೆ ಬಾಲ ಮಂಜುನಾಥ ಸ್ವಾಮೀಜಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿ ಆದೇಶಿಸಿದೆ.</p> .<p>‘ಸ್ವಾಮೀಜಿ ವಿರುದ್ಧ ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಆಧಾರರಹಿತ ಮತ್ತು ಕಾನೂನುಬಾಹಿರವಾಗಿದೆ. ಮೇಲ್ನೋಟಕ್ಕೆ ಇದು ದುರುದ್ದೇಶಪೂರಿತ ಮತ್ತು ಸುಳ್ಳು ಅಂಶಗಳಿಂದ ಕೂಡಿದೆ. ಸ್ವಾಮೀಜಿಯ ವ್ಯಕ್ತಿತ್ವಕ್ಕೆ ಮತ್ತು ಕೀರ್ತಿಗೆ ಧಕ್ಕೆ ತರುವಂತಿದೆ’ ಎಂದು ಸ್ವಾಮೀಜಿ ಪರ ಹೈಕೋರ್ಟ್ ವಕೀಲೆ ಲೀಲಾ ಪಿ.ದೇವಾಡಿಗ ಅವರ ವಾದಾಂಶಗಳನ್ನು ನ್ಯಾಯಪೀಠ ಮನ್ನಿಸಿದೆ.</p>.<p><strong>ಪ್ರಕರಣವೇನು?</strong>: ಹುಲಿಯೂರು ದುರ್ಗ–ಮಾಗಡಿ ರಸ್ತೆಯಲ್ಲಿರುವ ಕಾಡು ಶನೈಶ್ಚರ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ಮಂಜುನಾಥ ಸ್ವಾಮೀಜಿ 2016ರಲ್ಲಿ ಹಂಗರಹಳ್ಳಿಯಲ್ಲಿ ಶನೈಶ್ಚರ ಪೂಜೆ ಮುಖಾಂತರವೇ ವಿದ್ಯಾ ಚೌಡೇಶ್ವರಿ ದೇವಸ್ಥಾನ ಮತ್ತು ಮಠ ನಿರ್ಮಿಸಿದ್ದಾರೆ. ಇವರ ವಿರುದ್ಧ ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ 2024ರ ಮಾರ್ಚ್ 7ರಂದು ನೀಡಲಾದ ದೂರಿನ ಅನುಸಾರ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಪ್ರಕರಣ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>