<p>ಬೆಂಗಳೂರು: ಪೂರ್ಣ ಪ್ರಮಾಣದಲ್ಲಿ 2‘ಎ’ ಮೀಸಲಾತಿ ವಾಪಸ್ ನೀಡಲು ಆಗ್ರಹಿಸಿ ಕರ್ನಾಟಕ ಪ್ರದೇಶ ಬಲಿಜ ಸಂಘದ ನೇತೃತ್ವದಲ್ಲಿ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ಹಾಗೂ ಬಲಿಜ ಸಂಕಲ್ಪ ಸಭೆ ನಡೆಯಿತು.</p>.<p>ವಿವಿಧ ಜಿಲ್ಲೆಗಳಿಂದ ಬಂದಿದ್ದ ಪ್ರತಿಭಟನಕಾರರು, ಸ್ವಾತಂತ್ರ್ಯ ಉದ್ಯಾನದಲ್ಲಿ ಜಮಾಯಿಸಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿದರು.</p>.<p>‘ಬಲಿಜ ಸಮುದಾಯದವರು ಹಿಂದುಳಿದಿದ್ದಾರೆ. ರಸ್ತೆ ಬದಿ, ದೇವಸ್ಥಾನಗಳ ಎದುರು ವ್ಯಾಪಾರ ನಡೆಸಿ ಬದುಕು ಸಾಗಿಸುತ್ತಿದ್ದಾರೆ. ಅವರ ಮಕ್ಕಳ ಭವಿಷ್ಯಕ್ಕೆ ಮೀಸಲಾತಿ ಅಗತ್ಯ’ ಎಂದು ಪ್ರತಿಭಟನಕಾರರು ಪ್ರತಿಪಾದಿಸಿದರು.</p>.<p>‘ಬಲಿಜರಿಗೆ ಹಲವು ದಶಕಗಳಿಂದ ಶಿಕ್ಷಣ ಹಾಗೂ ಉದ್ಯೋಗಕ್ಕೆ 2‘ಎ’ ಮೀಸಲಾತಿ ಸೌಲಭ್ಯ ನೀಡಲಾಗಿತ್ತು. ಆದರೆ, 1994ರ ಸೆ.17ರಂದು ಯಾವುದೇ ಆಯೋಗದ ಶಿಫಾರಸು ಹಾಗೂ ಕಾರಣವಿಲ್ಲದೇ 3‘ಎ’ಗೆ ವರ್ಗಾಯಿಸುವ ಮೂಲಕ ಅನ್ಯಾಯ ಎಸಗಲಾಯಿತು’ ಎಂದು ಆಕ್ರೋಶ ಹೊರಹಾಕಿದರು.</p>.<p>‘ನಿರಂತರ ಹೋರಾಟದ ಫಲವಾಗಿ 2011ರ ಜುಲೈ 16ರಂದು ಕೇವಲ ಶಿಕ್ಷಣದ ಸೌಲಭ್ಯಕ್ಕಾಗಿ 2‘ಎ’ ಮೀಸಲಾತಿ ನೀಡಲಾಗಿದೆ. ಉದ್ಯೋಗದ ವಿಷಯದಲ್ಲಿ 3‘ಎ’ ಪಟ್ಟಿಯಲ್ಲೇ ಉಳಿಸಲಾಗಿದೆ’ ಎಂದು ದೂರಿದರು.</p>.<p>‘ನಮ್ಮಿಂದ ಕಸಿದುಕೊಂಡಿರುವ ಸೌಲಭ್ಯವನ್ನಷ್ಟೇ ನಾವು ವಾಪಸ್ ಕೇಳುತ್ತಿದ್ದೇವೆ. ದೊಡ್ಡ ಸಮುದಾಯಗಳ ನಾಯಕ<br />ರಿಗೆ ಅಧಿಕಾರ ಸಿಕ್ಕಾಗ ಚಿಕ್ಕ–ಪುಟ್ಟ ಸಮುದಾಯಗಳಿಗೆ ನ್ಯಾಯ ನೀಡಿ ಸಮಾನವಾಗಿ ಕರೆದೊಯ್ಯುವುದೇ ಧರ್ಮ. ಆ ಕೆಲಸವನ್ನು ಸರ್ಕಾರ ಮಾಡಬೇಕು’ ಎಂದು ಎಂ.ಎಸ್.ರಾಮಯ್ಯ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಆರ್.ಜಯರಾಮ್ ಒತ್ತಾಯಿಸಿದರು.</p>.<p>ಚಿಕ್ಕಪೇಟೆಯಲ್ಲಿರುವ ಬಲಿಜ ಸಮಾಜದ ವಿದ್ಯಾರ್ಥಿನಿಲಯದ ವಿದ್ಯಾರ್ಥಿ ಗಳೂ ಪ್ರತಿಭಟನೆಯಲ್ಲಿ ಹಾಜರಿದ್ದು ಹೋರಾಟಕ್ಕೆ ಬೆಂಬಲ ನೀಡಿದರು. </p>.<p>ಕಾಂಗ್ರೆಸ್ ಮುಖಂಡ ಎಂ.ಆರ್.ಸೀತಾರಾಂ, ಎನ್.ಸಂಪಂಗಿ, ಮಾಜಿ ಮೇಯರ್ ಪದ್ಮಾವತಿ, ಮಂಜುಳಾ ನಾಯ್ಡು, ಸಂಘದ ಅಧ್ಯಕ್ಷ ಪೆರಿಕಲ್ ಎಂ.ಸುಂದರ್, ಪ್ರಧಾನ ಕಾರ್ಯದರ್ಶಿ ಸಿ.ಕೆ.ಜಗದೀಶ್, ಸಮಗ್ರ ಬಲಿಜ ವೇದಿಕೆ ಪ್ರಧಾನ ಕಾರ್ಯದರ್ಶಿ ರಮೇಶ್ ಹಾಜರಿದ್ದರು.</p>.<p><strong>‘15 ದಿನದಲ್ಲಿ ಸಿ.ಎಂ ಸಮ್ಮುಖದಲ್ಲಿ ಸಭೆ’</strong></p>.<p>‘2ಎ ಮೀಸಲಾತಿ ವಾಪಸ್ ಕೊಡಿಸುವ ಸಂಬಂಧ 15ರಿಂದ 20 ದಿನಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಬಲಿಜ ಸಮುದಾಯದ ಮುಖಂಡರ ಸಭೆ ಕರೆಯಲು ನಾನೇ ನೇತೃತ್ವ ವಹಿಸುತ್ತೇನೆ’ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.</p>.<p>ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಮಾತನಾಡಿದ ಅವರು, ‘ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸಮಾಜ ಕಲ್ಯಾಣ ಸಚಿವರು ಕೂಡ ಈ ವಿಷಯದಲ್ಲಿ ಮುಖಂಡರೊಂದಿಗೆ ಮಾತನಾಡಿದ್ದಾರೆ. ಮುಖ್ಯಮಂತ್ರಿ ಅವರಿಗೆ ವಿಷಯ ಮನವರಿಕೆ ಮಾಡುತ್ತೇನೆ’ ಎಂದು ಸ್ಪಷ್ಟಪಡಿಸಿದರು.</p>.<p>ಇದಕ್ಕೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದರು. ‘ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಏನೂ ಇಲ್ಲ. ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಈ ವಿಷಯ ಸೇರ್ಪಡೆ ಮಾಡಲಾಗುವುದು’ ಎಂದು ತಿಳಿಸಿದರು. ಶಾಸಕರಾದ ರಮೇಶ್ಕುಮಾರ್, ದಿನೇಶ್ ಗುಂಡೂರಾವ್ ಕೂಡ ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಆಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಪೂರ್ಣ ಪ್ರಮಾಣದಲ್ಲಿ 2‘ಎ’ ಮೀಸಲಾತಿ ವಾಪಸ್ ನೀಡಲು ಆಗ್ರಹಿಸಿ ಕರ್ನಾಟಕ ಪ್ರದೇಶ ಬಲಿಜ ಸಂಘದ ನೇತೃತ್ವದಲ್ಲಿ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ಹಾಗೂ ಬಲಿಜ ಸಂಕಲ್ಪ ಸಭೆ ನಡೆಯಿತು.</p>.<p>ವಿವಿಧ ಜಿಲ್ಲೆಗಳಿಂದ ಬಂದಿದ್ದ ಪ್ರತಿಭಟನಕಾರರು, ಸ್ವಾತಂತ್ರ್ಯ ಉದ್ಯಾನದಲ್ಲಿ ಜಮಾಯಿಸಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿದರು.</p>.<p>‘ಬಲಿಜ ಸಮುದಾಯದವರು ಹಿಂದುಳಿದಿದ್ದಾರೆ. ರಸ್ತೆ ಬದಿ, ದೇವಸ್ಥಾನಗಳ ಎದುರು ವ್ಯಾಪಾರ ನಡೆಸಿ ಬದುಕು ಸಾಗಿಸುತ್ತಿದ್ದಾರೆ. ಅವರ ಮಕ್ಕಳ ಭವಿಷ್ಯಕ್ಕೆ ಮೀಸಲಾತಿ ಅಗತ್ಯ’ ಎಂದು ಪ್ರತಿಭಟನಕಾರರು ಪ್ರತಿಪಾದಿಸಿದರು.</p>.<p>‘ಬಲಿಜರಿಗೆ ಹಲವು ದಶಕಗಳಿಂದ ಶಿಕ್ಷಣ ಹಾಗೂ ಉದ್ಯೋಗಕ್ಕೆ 2‘ಎ’ ಮೀಸಲಾತಿ ಸೌಲಭ್ಯ ನೀಡಲಾಗಿತ್ತು. ಆದರೆ, 1994ರ ಸೆ.17ರಂದು ಯಾವುದೇ ಆಯೋಗದ ಶಿಫಾರಸು ಹಾಗೂ ಕಾರಣವಿಲ್ಲದೇ 3‘ಎ’ಗೆ ವರ್ಗಾಯಿಸುವ ಮೂಲಕ ಅನ್ಯಾಯ ಎಸಗಲಾಯಿತು’ ಎಂದು ಆಕ್ರೋಶ ಹೊರಹಾಕಿದರು.</p>.<p>‘ನಿರಂತರ ಹೋರಾಟದ ಫಲವಾಗಿ 2011ರ ಜುಲೈ 16ರಂದು ಕೇವಲ ಶಿಕ್ಷಣದ ಸೌಲಭ್ಯಕ್ಕಾಗಿ 2‘ಎ’ ಮೀಸಲಾತಿ ನೀಡಲಾಗಿದೆ. ಉದ್ಯೋಗದ ವಿಷಯದಲ್ಲಿ 3‘ಎ’ ಪಟ್ಟಿಯಲ್ಲೇ ಉಳಿಸಲಾಗಿದೆ’ ಎಂದು ದೂರಿದರು.</p>.<p>‘ನಮ್ಮಿಂದ ಕಸಿದುಕೊಂಡಿರುವ ಸೌಲಭ್ಯವನ್ನಷ್ಟೇ ನಾವು ವಾಪಸ್ ಕೇಳುತ್ತಿದ್ದೇವೆ. ದೊಡ್ಡ ಸಮುದಾಯಗಳ ನಾಯಕ<br />ರಿಗೆ ಅಧಿಕಾರ ಸಿಕ್ಕಾಗ ಚಿಕ್ಕ–ಪುಟ್ಟ ಸಮುದಾಯಗಳಿಗೆ ನ್ಯಾಯ ನೀಡಿ ಸಮಾನವಾಗಿ ಕರೆದೊಯ್ಯುವುದೇ ಧರ್ಮ. ಆ ಕೆಲಸವನ್ನು ಸರ್ಕಾರ ಮಾಡಬೇಕು’ ಎಂದು ಎಂ.ಎಸ್.ರಾಮಯ್ಯ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಆರ್.ಜಯರಾಮ್ ಒತ್ತಾಯಿಸಿದರು.</p>.<p>ಚಿಕ್ಕಪೇಟೆಯಲ್ಲಿರುವ ಬಲಿಜ ಸಮಾಜದ ವಿದ್ಯಾರ್ಥಿನಿಲಯದ ವಿದ್ಯಾರ್ಥಿ ಗಳೂ ಪ್ರತಿಭಟನೆಯಲ್ಲಿ ಹಾಜರಿದ್ದು ಹೋರಾಟಕ್ಕೆ ಬೆಂಬಲ ನೀಡಿದರು. </p>.<p>ಕಾಂಗ್ರೆಸ್ ಮುಖಂಡ ಎಂ.ಆರ್.ಸೀತಾರಾಂ, ಎನ್.ಸಂಪಂಗಿ, ಮಾಜಿ ಮೇಯರ್ ಪದ್ಮಾವತಿ, ಮಂಜುಳಾ ನಾಯ್ಡು, ಸಂಘದ ಅಧ್ಯಕ್ಷ ಪೆರಿಕಲ್ ಎಂ.ಸುಂದರ್, ಪ್ರಧಾನ ಕಾರ್ಯದರ್ಶಿ ಸಿ.ಕೆ.ಜಗದೀಶ್, ಸಮಗ್ರ ಬಲಿಜ ವೇದಿಕೆ ಪ್ರಧಾನ ಕಾರ್ಯದರ್ಶಿ ರಮೇಶ್ ಹಾಜರಿದ್ದರು.</p>.<p><strong>‘15 ದಿನದಲ್ಲಿ ಸಿ.ಎಂ ಸಮ್ಮುಖದಲ್ಲಿ ಸಭೆ’</strong></p>.<p>‘2ಎ ಮೀಸಲಾತಿ ವಾಪಸ್ ಕೊಡಿಸುವ ಸಂಬಂಧ 15ರಿಂದ 20 ದಿನಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಬಲಿಜ ಸಮುದಾಯದ ಮುಖಂಡರ ಸಭೆ ಕರೆಯಲು ನಾನೇ ನೇತೃತ್ವ ವಹಿಸುತ್ತೇನೆ’ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.</p>.<p>ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಮಾತನಾಡಿದ ಅವರು, ‘ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸಮಾಜ ಕಲ್ಯಾಣ ಸಚಿವರು ಕೂಡ ಈ ವಿಷಯದಲ್ಲಿ ಮುಖಂಡರೊಂದಿಗೆ ಮಾತನಾಡಿದ್ದಾರೆ. ಮುಖ್ಯಮಂತ್ರಿ ಅವರಿಗೆ ವಿಷಯ ಮನವರಿಕೆ ಮಾಡುತ್ತೇನೆ’ ಎಂದು ಸ್ಪಷ್ಟಪಡಿಸಿದರು.</p>.<p>ಇದಕ್ಕೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದರು. ‘ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಏನೂ ಇಲ್ಲ. ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಈ ವಿಷಯ ಸೇರ್ಪಡೆ ಮಾಡಲಾಗುವುದು’ ಎಂದು ತಿಳಿಸಿದರು. ಶಾಸಕರಾದ ರಮೇಶ್ಕುಮಾರ್, ದಿನೇಶ್ ಗುಂಡೂರಾವ್ ಕೂಡ ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಆಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>