<p><strong>ಬೆಂಗಳೂರು:</strong> ಬಳ್ಳಾರಿಯ ಅವ್ವಂಬಾವಿಯಲ್ಲಿ ಇದೇ ತಿಂಗಳ ಆರಂಭದಲ್ಲಿ ನಡೆದಿದ್ದ ಘರ್ಷಣೆ, ಸಾವು ಪ್ರಕರಣ ಕುರಿತ ಚರ್ಚೆ ಕಾಂಗ್ರೆಸ್ನ ಬಿ.ನಾಗೇಂದ್ರ ಹಾಗೂ ಬಿಜೆಪಿ ಸಹ ಸದಸ್ಯ ಜಿ. ಜನಾರ್ದನ ರೆಡ್ಡಿ ನಡುವೆ ವಾಗ್ವಾದಕ್ಕೆ ತಿರುಗಿತು. </p>.<p>ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತು ಮಾತನಾಡಿದ ನಾಗೇಂದ್ರ, ಬಳ್ಳಾರಿಯಲ್ಲಿ ಜ.17ರಂದು ನಡೆದ ಬಿಜೆಪಿ ಪ್ರತಿಭಟನಾ ಸಮಾವೇಶದಲ್ಲಿ ಶ್ರೀರಾಮುಲು ಕಾಂಗ್ರೆಸ್ ಶಾಸಕ, ಕಾರ್ಯಕರ್ತರನ್ನು ನಾಶ ಮಾಡುವ ಮಾತನಾಡಿದ್ದಾರೆ. ‘ಅಧಿಕಾರ ಇದೆ ಎಂದು ಪೊಲೀಸರು ಈಗ ಭರತ್ ರೆಡ್ಡಿಯನ್ನು ರಕ್ಷಿಸಿರಬಹುದು. ಮುಂದೆ ನಮಗೆ ಅಧಿಕಾರ ಸಿಗುತ್ತದೆ. ಆಗ ಪಾತಾಳದಲ್ಲಿದ್ದರೂ ಭರತ್ ರೆಡ್ಡಿಯನ್ನು ಬಿಡುವುದಿಲ್ಲ. 2028ಕ್ಕೆ ನಾವು ಗೆಲ್ಲುವುದು ಶತಃಸಿದ್ಧ. ಆಗ ನಿನ್ನ ರಕ್ಷಣೆಗೆ ಯಾರು ಬರುತ್ತಾರೆ ನೋಡೋಣ’ ಎಂದು ಸವಾಲು ಎಸೆದಿದ್ದಾರೆ. ಬಿಜೆಪಿ ನಾಯಕರ ವರ್ತನೆ ಬಳ್ಳಾರಿಯ ಶಾಂತಿ ಸುವ್ಯವಸ್ಥೆಗೆ ಮಾರಕ’ ಎಂದು ಟೀಕಿಸಿದರು.</p>.<p>‘ಜನಾರ್ದನ ರೆಡ್ಡಿ ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರ ವಿರುದ್ಧ ಸಲ್ಲದ ಟೀಕೆ ಮಾಡಿದ್ದಾರೆ. ಪ್ರಕರಣವನ್ನು ಸರ್ಕಾರ ಉತ್ತಮವಾಗಿ ನಿಭಾಯಿಸಿದೆ. ತನಿಖೆ ನಡೆಯುತ್ತಿದೆ. ಮಹರ್ಷಿ ವಾಲ್ಮೀಕಿ ಅವರ ಬ್ಯಾನರ್ ಹರಿದುಹಾಕಿದ್ದಲ್ಲದೆ, ಭಾವಚಿತ್ರವನ್ನು ಕಾಲಿನಿಂದ ತುಳಿದಿದ್ದಾರೆ. ಘರ್ಷಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಪ್ರಾಣ ಕಳೆದುಕೊಂಡಿದ್ದಾನೆ. ಜನಾರ್ದನ ರೆಡ್ಡಿ ನೂರು ಸುಳ್ಳು ಹೇಳಿ ಸತ್ಯವೆಂದು ನಂಬಿಸುತ್ತಿದ್ದಾರೆ. ಸರ್ಕಾರವನ್ನು ಸಮರ್ಥಿಸಿಕೊಳ್ಳುವುದು ನಮ್ಮ ಕೆಲಸ. ಮತ್ತೆ ಬಳ್ಳಾರಿ ರಿಪಬ್ಲಿಕ್ ಮಾಡಲು ಹೊರಟ ಅವರ ಪ್ರಯತ್ನ ತಡೆಯುವ ಶಕ್ತಿ ಕಾಂಗ್ರೆಸ್ಗೆ ಇದೆ. ಅವರ ಸವಾಲು ಸ್ವೀಕರಿಸುತ್ತೇವೆ’ ಎಂದರು.</p>.<p>ಅವರ ಮಾತಿಗೆ ಕೆರಳಿದ ಜನಾರ್ದನ ರೆಡ್ಡಿ, ‘ಘಟನೆಯ ಎಲ್ಲ ವಿಡಿಯೊ ನನ್ನ ಬಳಿ ಇವೆ. ಶಾಸಕ ಭರತ್ ರೆಡ್ಡಿ ಬೆಂಬಲಿಗರ ವರ್ತನೆ, ಅವರ ಗನ್ಮ್ಯಾನ್ಗಳ ಕೃತ್ಯ, ಕೆಲ ಪೊಲೀಸರ ವರ್ತನೆ ಖಂಡಿಸಿದ್ದೇವೆ. ಆರೋಪಿ ಭರತ್ ಬಂಧನಕ್ಕೆ ಆಗ್ರಹಿಸಿದ್ದೇವೆ. ಸತ್ಯವನ್ನು ಹೇಳಿದರೆ ಕಾಂಗ್ರೆಸ್ ನಾಯಕರು, ಸರ್ಕಾರ ಸಹಿಸುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು. </p>.<p>ನಾಗೇಂದ್ರ ಬೆಂಬಲಕ್ಕೆ ಕಾಂಗ್ರೆಸ್ ಸದಸ್ಯರು, ರೆಡ್ಡಿ ಬೆಂಬಲಕ್ಕೆ ಬಿಜೆಪಿ–ಜೆಡಿಎಸ್ ಸದಸ್ಯರು ನಿಂತರು. ಕೊನೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ವಿಷಯಾಂತರದ ಮೂಲಕ ಗದ್ದಲ ಶಮನಗೊಳಿಸಿದರು.</p>.<p><strong>‘ಎರಡೂವರೆ ವರ್ಷ ನೀವೇ ಇರಿ, ಡಿಕೆಶಿ ಬೇಡ’</strong></p><p>ಬೆಂಗಳೂರು: ‘ನೀವೇ ಇನ್ನೂ ಎರಡೂವರೆ ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಿರಿ. ಡಿ.ಕೆ.ಶಿವಕುಮಾರ್ ಆ ಸ್ಥಾನಕ್ಕೆ ಬರುವುದು ಬೇಡ. ಬಳ್ಳಾರಿ ಜಿಲ್ಲೆಯ ಒಳಿತಿಗಾಗಿ ಉತ್ತಮ ಅಧಿಕಾರಿಗಳನ್ನು ನಿಯೋಜಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿಯ ಜಿ.ಜನಾರ್ದನ ರೆಡ್ಡಿ ಮನವಿ ಮಾಡಿದರು. </p><p>‘ಗಣಿ ವಿಚಾರವಾಗಿ ನೀವು ನನ್ನ ವಿರುದ್ಧ ಪಾದಯಾತ್ರೆ ನಡೆಸಿ ಹೋರಾಟ ಮಾಡಿದ್ದೀರಿ. ವಿರೋಧಪಕ್ಷದ ನಾಯಕರಾಗಿ ನಿಮ್ಮ ಕೆಲಸ ಮಾಡಿದ್ದೀರಿ. ನಾನು ಜೈಲಿಗೆ ಹೋದೆ. ಆ ಬಳಿಕ ಆಯ್ಕೆ ಆಗಿ ಬಂದೆ. ಎಲ್ಲವೂ ನನ್ನ ಹಣೆ ಬರಹ’ ಎಂದರು.</p><p>‘ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಂಡ ರೀತಿ ನೋಡಿದರೆ, ಮುಖ್ಯಮಂತ್ರಿ ಸ್ಥಾನಕ್ಕೆ ಏರಲು ಭಗವಂತ ಅವರಿಗೆ ಅವಕಾಶ ಮಾಡಿಕೊಡಬಾರದು’ ಎಂದು ಕಿಡಿಕಾರಿದರು.</p><p>‘ನನ್ನ ಮನೆ ಸುಟ್ಟು ಹಾಕುತ್ತೇನೆ, ನನ್ನನ್ನು ಕೊಂದು ಹಾಕುತ್ತೇನೆ ಎಂದು ಹೇಳಿದ ಶಾಸಕ ಭರತ್ ರೆಡ್ಡಿಯನ್ನು ಶಿವಕುಮಾರ್ ಸಮರ್ಥಿಸಿಕೊಂಡರು. ಅವರ ಜತೆ ನಿಲ್ಲುವುದಾಗಿ ಹೇಳಿದರು. ಅಲ್ಲದೇ, ನಿಮಗೆ ರಕ್ಷಣೆಗೆ ಬೇಕಿದ್ದರೆ ಟ್ರಂಪ್ ಬಳಿ ಹೋಗಿ, ಇರಾನ್ನಿಂದ ರಕ್ಷಣೆ ಪಡೆಯಿರಿ, ಬಿಜೆಪಿಯ 1500 ಕಾರ್ಯಕರ್ತರನ್ನು ರಕ್ಷಣೆ ಇಟ್ಟುಕೊಳ್ಳಿ ಎಂದು ಹೇಳಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ವ್ಯಕ್ತಿ ಆಡುವ ಮಾತಾ ಇದು’ ಎಂದು ರೆಡ್ಡಿ ಪ್ರಶ್ನಿಸಿದರು.</p><p>‘ನನ್ನ ಮೇಲೆ ಗುಂಡು ಹಾರಿಸಿದ ಪ್ರಕರಣದ ಬಗ್ಗೆ ಸಿಬಿಐ ತನಿಖೆ ಅಥವಾ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಸಾಧ್ಯವಿಲ್ಲ ಎಂದಾದರೆ ನಾನೇ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಳ್ಳಾರಿಯ ಅವ್ವಂಬಾವಿಯಲ್ಲಿ ಇದೇ ತಿಂಗಳ ಆರಂಭದಲ್ಲಿ ನಡೆದಿದ್ದ ಘರ್ಷಣೆ, ಸಾವು ಪ್ರಕರಣ ಕುರಿತ ಚರ್ಚೆ ಕಾಂಗ್ರೆಸ್ನ ಬಿ.ನಾಗೇಂದ್ರ ಹಾಗೂ ಬಿಜೆಪಿ ಸಹ ಸದಸ್ಯ ಜಿ. ಜನಾರ್ದನ ರೆಡ್ಡಿ ನಡುವೆ ವಾಗ್ವಾದಕ್ಕೆ ತಿರುಗಿತು. </p>.<p>ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತು ಮಾತನಾಡಿದ ನಾಗೇಂದ್ರ, ಬಳ್ಳಾರಿಯಲ್ಲಿ ಜ.17ರಂದು ನಡೆದ ಬಿಜೆಪಿ ಪ್ರತಿಭಟನಾ ಸಮಾವೇಶದಲ್ಲಿ ಶ್ರೀರಾಮುಲು ಕಾಂಗ್ರೆಸ್ ಶಾಸಕ, ಕಾರ್ಯಕರ್ತರನ್ನು ನಾಶ ಮಾಡುವ ಮಾತನಾಡಿದ್ದಾರೆ. ‘ಅಧಿಕಾರ ಇದೆ ಎಂದು ಪೊಲೀಸರು ಈಗ ಭರತ್ ರೆಡ್ಡಿಯನ್ನು ರಕ್ಷಿಸಿರಬಹುದು. ಮುಂದೆ ನಮಗೆ ಅಧಿಕಾರ ಸಿಗುತ್ತದೆ. ಆಗ ಪಾತಾಳದಲ್ಲಿದ್ದರೂ ಭರತ್ ರೆಡ್ಡಿಯನ್ನು ಬಿಡುವುದಿಲ್ಲ. 2028ಕ್ಕೆ ನಾವು ಗೆಲ್ಲುವುದು ಶತಃಸಿದ್ಧ. ಆಗ ನಿನ್ನ ರಕ್ಷಣೆಗೆ ಯಾರು ಬರುತ್ತಾರೆ ನೋಡೋಣ’ ಎಂದು ಸವಾಲು ಎಸೆದಿದ್ದಾರೆ. ಬಿಜೆಪಿ ನಾಯಕರ ವರ್ತನೆ ಬಳ್ಳಾರಿಯ ಶಾಂತಿ ಸುವ್ಯವಸ್ಥೆಗೆ ಮಾರಕ’ ಎಂದು ಟೀಕಿಸಿದರು.</p>.<p>‘ಜನಾರ್ದನ ರೆಡ್ಡಿ ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರ ವಿರುದ್ಧ ಸಲ್ಲದ ಟೀಕೆ ಮಾಡಿದ್ದಾರೆ. ಪ್ರಕರಣವನ್ನು ಸರ್ಕಾರ ಉತ್ತಮವಾಗಿ ನಿಭಾಯಿಸಿದೆ. ತನಿಖೆ ನಡೆಯುತ್ತಿದೆ. ಮಹರ್ಷಿ ವಾಲ್ಮೀಕಿ ಅವರ ಬ್ಯಾನರ್ ಹರಿದುಹಾಕಿದ್ದಲ್ಲದೆ, ಭಾವಚಿತ್ರವನ್ನು ಕಾಲಿನಿಂದ ತುಳಿದಿದ್ದಾರೆ. ಘರ್ಷಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಪ್ರಾಣ ಕಳೆದುಕೊಂಡಿದ್ದಾನೆ. ಜನಾರ್ದನ ರೆಡ್ಡಿ ನೂರು ಸುಳ್ಳು ಹೇಳಿ ಸತ್ಯವೆಂದು ನಂಬಿಸುತ್ತಿದ್ದಾರೆ. ಸರ್ಕಾರವನ್ನು ಸಮರ್ಥಿಸಿಕೊಳ್ಳುವುದು ನಮ್ಮ ಕೆಲಸ. ಮತ್ತೆ ಬಳ್ಳಾರಿ ರಿಪಬ್ಲಿಕ್ ಮಾಡಲು ಹೊರಟ ಅವರ ಪ್ರಯತ್ನ ತಡೆಯುವ ಶಕ್ತಿ ಕಾಂಗ್ರೆಸ್ಗೆ ಇದೆ. ಅವರ ಸವಾಲು ಸ್ವೀಕರಿಸುತ್ತೇವೆ’ ಎಂದರು.</p>.<p>ಅವರ ಮಾತಿಗೆ ಕೆರಳಿದ ಜನಾರ್ದನ ರೆಡ್ಡಿ, ‘ಘಟನೆಯ ಎಲ್ಲ ವಿಡಿಯೊ ನನ್ನ ಬಳಿ ಇವೆ. ಶಾಸಕ ಭರತ್ ರೆಡ್ಡಿ ಬೆಂಬಲಿಗರ ವರ್ತನೆ, ಅವರ ಗನ್ಮ್ಯಾನ್ಗಳ ಕೃತ್ಯ, ಕೆಲ ಪೊಲೀಸರ ವರ್ತನೆ ಖಂಡಿಸಿದ್ದೇವೆ. ಆರೋಪಿ ಭರತ್ ಬಂಧನಕ್ಕೆ ಆಗ್ರಹಿಸಿದ್ದೇವೆ. ಸತ್ಯವನ್ನು ಹೇಳಿದರೆ ಕಾಂಗ್ರೆಸ್ ನಾಯಕರು, ಸರ್ಕಾರ ಸಹಿಸುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು. </p>.<p>ನಾಗೇಂದ್ರ ಬೆಂಬಲಕ್ಕೆ ಕಾಂಗ್ರೆಸ್ ಸದಸ್ಯರು, ರೆಡ್ಡಿ ಬೆಂಬಲಕ್ಕೆ ಬಿಜೆಪಿ–ಜೆಡಿಎಸ್ ಸದಸ್ಯರು ನಿಂತರು. ಕೊನೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ವಿಷಯಾಂತರದ ಮೂಲಕ ಗದ್ದಲ ಶಮನಗೊಳಿಸಿದರು.</p>.<p><strong>‘ಎರಡೂವರೆ ವರ್ಷ ನೀವೇ ಇರಿ, ಡಿಕೆಶಿ ಬೇಡ’</strong></p><p>ಬೆಂಗಳೂರು: ‘ನೀವೇ ಇನ್ನೂ ಎರಡೂವರೆ ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಿರಿ. ಡಿ.ಕೆ.ಶಿವಕುಮಾರ್ ಆ ಸ್ಥಾನಕ್ಕೆ ಬರುವುದು ಬೇಡ. ಬಳ್ಳಾರಿ ಜಿಲ್ಲೆಯ ಒಳಿತಿಗಾಗಿ ಉತ್ತಮ ಅಧಿಕಾರಿಗಳನ್ನು ನಿಯೋಜಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿಯ ಜಿ.ಜನಾರ್ದನ ರೆಡ್ಡಿ ಮನವಿ ಮಾಡಿದರು. </p><p>‘ಗಣಿ ವಿಚಾರವಾಗಿ ನೀವು ನನ್ನ ವಿರುದ್ಧ ಪಾದಯಾತ್ರೆ ನಡೆಸಿ ಹೋರಾಟ ಮಾಡಿದ್ದೀರಿ. ವಿರೋಧಪಕ್ಷದ ನಾಯಕರಾಗಿ ನಿಮ್ಮ ಕೆಲಸ ಮಾಡಿದ್ದೀರಿ. ನಾನು ಜೈಲಿಗೆ ಹೋದೆ. ಆ ಬಳಿಕ ಆಯ್ಕೆ ಆಗಿ ಬಂದೆ. ಎಲ್ಲವೂ ನನ್ನ ಹಣೆ ಬರಹ’ ಎಂದರು.</p><p>‘ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಂಡ ರೀತಿ ನೋಡಿದರೆ, ಮುಖ್ಯಮಂತ್ರಿ ಸ್ಥಾನಕ್ಕೆ ಏರಲು ಭಗವಂತ ಅವರಿಗೆ ಅವಕಾಶ ಮಾಡಿಕೊಡಬಾರದು’ ಎಂದು ಕಿಡಿಕಾರಿದರು.</p><p>‘ನನ್ನ ಮನೆ ಸುಟ್ಟು ಹಾಕುತ್ತೇನೆ, ನನ್ನನ್ನು ಕೊಂದು ಹಾಕುತ್ತೇನೆ ಎಂದು ಹೇಳಿದ ಶಾಸಕ ಭರತ್ ರೆಡ್ಡಿಯನ್ನು ಶಿವಕುಮಾರ್ ಸಮರ್ಥಿಸಿಕೊಂಡರು. ಅವರ ಜತೆ ನಿಲ್ಲುವುದಾಗಿ ಹೇಳಿದರು. ಅಲ್ಲದೇ, ನಿಮಗೆ ರಕ್ಷಣೆಗೆ ಬೇಕಿದ್ದರೆ ಟ್ರಂಪ್ ಬಳಿ ಹೋಗಿ, ಇರಾನ್ನಿಂದ ರಕ್ಷಣೆ ಪಡೆಯಿರಿ, ಬಿಜೆಪಿಯ 1500 ಕಾರ್ಯಕರ್ತರನ್ನು ರಕ್ಷಣೆ ಇಟ್ಟುಕೊಳ್ಳಿ ಎಂದು ಹೇಳಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ವ್ಯಕ್ತಿ ಆಡುವ ಮಾತಾ ಇದು’ ಎಂದು ರೆಡ್ಡಿ ಪ್ರಶ್ನಿಸಿದರು.</p><p>‘ನನ್ನ ಮೇಲೆ ಗುಂಡು ಹಾರಿಸಿದ ಪ್ರಕರಣದ ಬಗ್ಗೆ ಸಿಬಿಐ ತನಿಖೆ ಅಥವಾ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಸಾಧ್ಯವಿಲ್ಲ ಎಂದಾದರೆ ನಾನೇ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>