ಕರ್ನಾಟಕ, ಆಂಧ್ರದಾದ್ಯಂತ ಭಕ್ತರನ್ನು ಹೊಂದಿರುವ ಬಳ್ಳಾರಿ ನಗರದ ಅಧಿದೇವತೆ ಕನಕ ದುರ್ಗಮ್ಮ ದೇವಿ ಸಿಡಿಬಂಡಿ ರಥೋತ್ಸವವು ಮಂಗಳವಾರ ಸಂಭ್ರಮ, ಶ್ರದ್ಧಾ, ಭಕ್ತಿಯಿಂದ ಜರುಗಿತು. ಒಂದು ಲಕ್ಷಕ್ಕಿಂತಲೂ ಹೆಚ್ಚು ಭಕ್ತರು ಸಿಡಿಬಂಡಿ ರಥೋತ್ಸವದ ಪ್ರದಕ್ಷಿಣೆಯ ದರ್ಶನ ಪಡೆದು ಪುನೀತರಾದರು. ವಿಜೃಂಭಣೆಯ ಈ ರಥೋತ್ಸವಕ್ಕೆ ಮಾಜಿ ಸಚಿವ ಶ್ರೀರಾಮುಲು ಅವರು ಆಗಮಿಸಿದ್ದು ವಿಶೇಷವಾಗಿತ್ತು.