<p><strong>ಬಳ್ಳಾರಿ:</strong> ‘ರಾಜ್ಯದ ಕಾಂಗ್ರೆಸ್ ಸರ್ಕಾರವು ಆಚರಿಸಿಕೊಳ್ಳುತ್ತಿರುವ ಮೂರು ವರ್ಷಗಳ ಸಾಧನಾ ಸಮಾವೇಶವು ಕೇವಲ ಸುಳ್ಳುಗಳ ಮೇಲೆ ನಿಂತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳಿನ ಮಾಲೀಕರಾಗಿದ್ದರೆ, ಡಿ.ಕೆ. ಶಿವಕುಮಾರ್ ಅವರು ಅದಕ್ಕೆ ಸಾಕ್ಷಿದಾರರಾಗಿದ್ದಾರೆ’ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಬಿ. ಶ್ರೀರಾಮುಲು ಟೀಕಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ನೀಡುತ್ತಿದ್ದ ₹4,000 ಕಿಸಾನ್ ಸಮ್ಮಾನ್ ನೆರವು ಹಾಗೂ ರೈತ ಮಕ್ಕಳ ‘ವಿದ್ಯಾನಿಧಿ’ ಯೋಜನೆಯನ್ನು ಸರ್ಕಾರ ಸ್ಥಗಿತಗೊಳಿಸಿದೆ. ಬಿತ್ತನೆ ಬೀಜಗಳ ಬೆಲೆಯನ್ನು ಶೇ.60 ರಷ್ಟು ಹೆಚ್ಚಿಸಿ ರೈತರಿಗೆ ಹೊರೆ ಹೊರಿಸಲಾಗಿದೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದು ಈ ಸರ್ಕಾರದ ‘ಆರನೇ ಗ್ಯಾರಂಟಿ’ಯಂತಿದೆ’ ಎಂದು ಲೇವಡಿ ಮಾಡಿದರು.</p>.<p>ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಆರೋಪಿಸಿದ ಅವರು, ‘ಹಾಲು ಉತ್ಪಾದಕರಿಗೆ ಪಾವತಿಸಬೇಕಾದ ₹700 ಕೋಟಿ ಬಾಕಿ ಉಳಿಸಿಕೊಳ್ಳಲಾಗಿದೆ. 'ಡಿ' ಗ್ರೂಪ್ ನೌಕರರಿಗೆ ಸಂಬಳ ನೀಡಲು ಹಣವಿಲ್ಲದ ಸರ್ಕಾರ, ಸಾಧನಾ ಸಮಾವೇಶಗಳ ಹೆಸರಿನಲ್ಲಿ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ. ಸಾರಿಗೆ ಇಲಾಖೆಯು ದುರಸ್ತಿಗೆ ಹಣವಿಲ್ಲದೆ ಸೊರಗುತ್ತಿದೆ’ ಎಂದು ವ್ಯಂಗ್ಯವಾಡಿದರು.</p>.<p>‘ವಾಲ್ಮೀಕಿ ನಿಗಮ ಮತ್ತು ಅಬಕಾರಿ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಲಾಗಿದೆ. ಈ ಹಗರಣ ಮುಚ್ಚಿಹಾಕಲು ಸರ್ಕಾರ ಸಮಾವೇಶಗಳ ನಾಟಕವಾಡುತ್ತಿದೆ. ಒಂದು ವರ್ಗದ ಓಲೈಕೆಗಾಗಿ ₹10,000 ಕೋಟಿ ಅನುದಾನ ನೀಡುವುದು ಮತ್ತು ಹಿಜಾಬ್ನಂತಹ ವಿವಾದಗಳನ್ನು ಮುನ್ನೆಲೆಗೆ ತರುವ ಮೂಲಕ ಸರ್ಕಾರ ಸಮಾಜದಲ್ಲಿ ಒಡಕು ಮೂಡಿಸುತ್ತಿದೆ’ ಎಂದು ದೂರಿದರು.</p>.<p>ಅಭಿವೃದ್ಧಿ ವಿಚಾರದಲ್ಲಿ ಈ ಸರ್ಕಾರ 'ಶೂನ್ಯ' ಸಾಧನೆ ಮಾಡಿದ್ದು, ಕೇವಲ ಪ್ರಚಾರಕ್ಕಾಗಿ ಜಾಹೀರಾತು ನೀಡುತ್ತಿದೆ ಎಂದು ಅವರು ಗುಡುಗಿದರು.</p>.<p>ಈ ಸಂದರ್ಭದಲ್ಲಿ ಪಾಲಿಕೆ ವಿರೋಧ ಪಕ್ಷದ ನಾಯಕ ಶ್ರೀನಿವಾಸ್ ಮೊತ್ಕರ್, ಪಾಲಿಕೆ ಸದಸ್ಯರಾದ ಹನುಮಂತಪ್ಪ, ಹನುಮಂತ, ಗೋವಿಂದರಾಜುಲು, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ, ಬಿಜೆಪಿ ಮುಖಂಡರಾದ ಗುರುಲಿಂಗಗೌಡ, ವೆಂಕಟರಾಮಣ, ಮಾರುತಿ ಪ್ರಸಾದ್, ಸುಗುಣ ಸೇರಿದಂತೆ ಇತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-25-903908670</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ರಾಜ್ಯದ ಕಾಂಗ್ರೆಸ್ ಸರ್ಕಾರವು ಆಚರಿಸಿಕೊಳ್ಳುತ್ತಿರುವ ಮೂರು ವರ್ಷಗಳ ಸಾಧನಾ ಸಮಾವೇಶವು ಕೇವಲ ಸುಳ್ಳುಗಳ ಮೇಲೆ ನಿಂತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳಿನ ಮಾಲೀಕರಾಗಿದ್ದರೆ, ಡಿ.ಕೆ. ಶಿವಕುಮಾರ್ ಅವರು ಅದಕ್ಕೆ ಸಾಕ್ಷಿದಾರರಾಗಿದ್ದಾರೆ’ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಬಿ. ಶ್ರೀರಾಮುಲು ಟೀಕಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ನೀಡುತ್ತಿದ್ದ ₹4,000 ಕಿಸಾನ್ ಸಮ್ಮಾನ್ ನೆರವು ಹಾಗೂ ರೈತ ಮಕ್ಕಳ ‘ವಿದ್ಯಾನಿಧಿ’ ಯೋಜನೆಯನ್ನು ಸರ್ಕಾರ ಸ್ಥಗಿತಗೊಳಿಸಿದೆ. ಬಿತ್ತನೆ ಬೀಜಗಳ ಬೆಲೆಯನ್ನು ಶೇ.60 ರಷ್ಟು ಹೆಚ್ಚಿಸಿ ರೈತರಿಗೆ ಹೊರೆ ಹೊರಿಸಲಾಗಿದೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದು ಈ ಸರ್ಕಾರದ ‘ಆರನೇ ಗ್ಯಾರಂಟಿ’ಯಂತಿದೆ’ ಎಂದು ಲೇವಡಿ ಮಾಡಿದರು.</p>.<p>ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಆರೋಪಿಸಿದ ಅವರು, ‘ಹಾಲು ಉತ್ಪಾದಕರಿಗೆ ಪಾವತಿಸಬೇಕಾದ ₹700 ಕೋಟಿ ಬಾಕಿ ಉಳಿಸಿಕೊಳ್ಳಲಾಗಿದೆ. 'ಡಿ' ಗ್ರೂಪ್ ನೌಕರರಿಗೆ ಸಂಬಳ ನೀಡಲು ಹಣವಿಲ್ಲದ ಸರ್ಕಾರ, ಸಾಧನಾ ಸಮಾವೇಶಗಳ ಹೆಸರಿನಲ್ಲಿ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ. ಸಾರಿಗೆ ಇಲಾಖೆಯು ದುರಸ್ತಿಗೆ ಹಣವಿಲ್ಲದೆ ಸೊರಗುತ್ತಿದೆ’ ಎಂದು ವ್ಯಂಗ್ಯವಾಡಿದರು.</p>.<p>‘ವಾಲ್ಮೀಕಿ ನಿಗಮ ಮತ್ತು ಅಬಕಾರಿ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಲಾಗಿದೆ. ಈ ಹಗರಣ ಮುಚ್ಚಿಹಾಕಲು ಸರ್ಕಾರ ಸಮಾವೇಶಗಳ ನಾಟಕವಾಡುತ್ತಿದೆ. ಒಂದು ವರ್ಗದ ಓಲೈಕೆಗಾಗಿ ₹10,000 ಕೋಟಿ ಅನುದಾನ ನೀಡುವುದು ಮತ್ತು ಹಿಜಾಬ್ನಂತಹ ವಿವಾದಗಳನ್ನು ಮುನ್ನೆಲೆಗೆ ತರುವ ಮೂಲಕ ಸರ್ಕಾರ ಸಮಾಜದಲ್ಲಿ ಒಡಕು ಮೂಡಿಸುತ್ತಿದೆ’ ಎಂದು ದೂರಿದರು.</p>.<p>ಅಭಿವೃದ್ಧಿ ವಿಚಾರದಲ್ಲಿ ಈ ಸರ್ಕಾರ 'ಶೂನ್ಯ' ಸಾಧನೆ ಮಾಡಿದ್ದು, ಕೇವಲ ಪ್ರಚಾರಕ್ಕಾಗಿ ಜಾಹೀರಾತು ನೀಡುತ್ತಿದೆ ಎಂದು ಅವರು ಗುಡುಗಿದರು.</p>.<p>ಈ ಸಂದರ್ಭದಲ್ಲಿ ಪಾಲಿಕೆ ವಿರೋಧ ಪಕ್ಷದ ನಾಯಕ ಶ್ರೀನಿವಾಸ್ ಮೊತ್ಕರ್, ಪಾಲಿಕೆ ಸದಸ್ಯರಾದ ಹನುಮಂತಪ್ಪ, ಹನುಮಂತ, ಗೋವಿಂದರಾಜುಲು, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ, ಬಿಜೆಪಿ ಮುಖಂಡರಾದ ಗುರುಲಿಂಗಗೌಡ, ವೆಂಕಟರಾಮಣ, ಮಾರುತಿ ಪ್ರಸಾದ್, ಸುಗುಣ ಸೇರಿದಂತೆ ಇತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-25-903908670</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>