<p><strong>ಬಳ್ಳಾರಿ:</strong> ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ವೈದ್ಯ ಸುನಿಲ್ ಕುಮಾರ್ ಅವರನ್ನು ಅಪಹರಿಸಿದ್ದ ಏಳು ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಒಬ್ಬನ ಕಾಲಿಗೆ ಗುಂಡಿನೇಟು ಬಿದ್ದಿದೆ.</p><p>ಬಳ್ಳಾರಿ ನಗರ ವಾಸಿಗಳಾದ ಶ್ರೀಕಾಂತ್ (44), ರಾಕೇಶ್(44), ತರುಣ್(22), ಅರುಣ್(25), ಭೋಜರಾಜ್(25), ಸಾಯಿಕುಮಾರ್(21) ಮತ್ತು ಪುರುಷೋತ್ತಮ್ ಬಂಧಿತರು.</p><p>ಆರೋಪಿಗಳನ್ನು, ಬುಧವಾರ ಮುಂಜಾನೆ ಸ್ಥಳ ಮಹಜರು ಮತ್ತು ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲು ಕರೆದುಕೊಂಡು ಹೋಗುತ್ತಿದ್ದ ವೇಳೆ ಶ್ರೀಕಾಂತ್ ಎಂಬಾತ ಗಾಂಧಿನಗರ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಕಾಳಿಂಗ ಅವರ ಮೇಲೆ ಹಲ್ಲೆ ನಡೆಸಿದ್ದ. </p><p>ಈ ವೇಳೆ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ಸಿಂಧೂರ್ ಅವರು ಶ್ರೀಕಾಂತ್ ಕಾಲಿಗೆ ಗುಂಡು ಹೊಡೆದಿದ್ದಾರೆ. ಗಾಯಗೊಂಡ ಶ್ರೀಕಾಂತನನ್ನು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ( ವಿಮ್ಸ್)ಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹಲ್ಲೆಗೆ ಒಳಗಾದ ಕಾನ್ಸ್ಟೆಬಲ್ ಕಾಳಿಂಗ ಅವರಿಗೆ ಬೇರೆಡೆ ಪ್ರತ್ಯೇಕವಾಗಿ ಚಿಕಿತ್ಸೆ ಕೊಡಿಸಲಾಗಿದೆ. </p><p>ಜನವರಿ 25ರ ಮುಂಜಾನೆ ಆರು ಗಂಟೆ ಸುಮಾರಿನಲ್ಲಿ ನಗರದ ಸತ್ಯನಾರಾಯಣಪೇಟೆ ಬಳಿ ವೈದ್ಯ ಸುನಿಲ್ ಕುಮಾರ್ ಅವರನ್ನು ಅಪಹರಣ ಮಾಡಲಾಗಿತ್ತು. ₹2 ಕೋಟಿ ಹಣ, ₹3 ಕೋಟಿಯಷ್ಟು ಚಿನ್ನದ ಗಟ್ಟಿ ನೀಡುವಂತೆ ಅಪಹರಣಕಾರರು ಬೇಡಿಕೆ ಇಟ್ಟಿದ್ದರು. ಆದರೆ, ಅದೇ ದಿನ ರಾತ್ರಿ 8ರ ಸುಮಾರಿನಲ್ಲಿ ಕುರುಗೋಡು ಬಳಿಯ ಸೋಮಸಮುದ್ರದ ಬಳಿ ಸುನಿಲ್ ಕುಮಾರ್ ಅವರನ್ನು ಬಿಟ್ಟಿದ್ದ ದುಷ್ಕರ್ಮಿಗಳು, ₹300 ನೀಡಿ ಮನೆಗೆ ಹೋಗುವಂತೆ ಹೇಳಿ ಹೋಗಿದ್ದರು.</p>.ವೈದ್ಯ ಸುನೀಲ್ ಕುಮಾರ್ ಅಪಹರಣ ಪ್ರಕರಣ ಶೀಘ್ರ ಇತ್ಯರ್ಥ: ಎಸ್ಪಿ .ಬಳ್ಳಾರಿ ಜಿಲ್ಲಾಸ್ಪತ್ರೆ ವೈದ್ಯ ಡಾ. ಸುನೀಲ್ ಅಪಹರಣ: ₹6 ಕೋಟಿ ಹಣಕ್ಕೆ ಬೇಡಿಕೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ವೈದ್ಯ ಸುನಿಲ್ ಕುಮಾರ್ ಅವರನ್ನು ಅಪಹರಿಸಿದ್ದ ಏಳು ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಒಬ್ಬನ ಕಾಲಿಗೆ ಗುಂಡಿನೇಟು ಬಿದ್ದಿದೆ.</p><p>ಬಳ್ಳಾರಿ ನಗರ ವಾಸಿಗಳಾದ ಶ್ರೀಕಾಂತ್ (44), ರಾಕೇಶ್(44), ತರುಣ್(22), ಅರುಣ್(25), ಭೋಜರಾಜ್(25), ಸಾಯಿಕುಮಾರ್(21) ಮತ್ತು ಪುರುಷೋತ್ತಮ್ ಬಂಧಿತರು.</p><p>ಆರೋಪಿಗಳನ್ನು, ಬುಧವಾರ ಮುಂಜಾನೆ ಸ್ಥಳ ಮಹಜರು ಮತ್ತು ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲು ಕರೆದುಕೊಂಡು ಹೋಗುತ್ತಿದ್ದ ವೇಳೆ ಶ್ರೀಕಾಂತ್ ಎಂಬಾತ ಗಾಂಧಿನಗರ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಕಾಳಿಂಗ ಅವರ ಮೇಲೆ ಹಲ್ಲೆ ನಡೆಸಿದ್ದ. </p><p>ಈ ವೇಳೆ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ಸಿಂಧೂರ್ ಅವರು ಶ್ರೀಕಾಂತ್ ಕಾಲಿಗೆ ಗುಂಡು ಹೊಡೆದಿದ್ದಾರೆ. ಗಾಯಗೊಂಡ ಶ್ರೀಕಾಂತನನ್ನು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ( ವಿಮ್ಸ್)ಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹಲ್ಲೆಗೆ ಒಳಗಾದ ಕಾನ್ಸ್ಟೆಬಲ್ ಕಾಳಿಂಗ ಅವರಿಗೆ ಬೇರೆಡೆ ಪ್ರತ್ಯೇಕವಾಗಿ ಚಿಕಿತ್ಸೆ ಕೊಡಿಸಲಾಗಿದೆ. </p><p>ಜನವರಿ 25ರ ಮುಂಜಾನೆ ಆರು ಗಂಟೆ ಸುಮಾರಿನಲ್ಲಿ ನಗರದ ಸತ್ಯನಾರಾಯಣಪೇಟೆ ಬಳಿ ವೈದ್ಯ ಸುನಿಲ್ ಕುಮಾರ್ ಅವರನ್ನು ಅಪಹರಣ ಮಾಡಲಾಗಿತ್ತು. ₹2 ಕೋಟಿ ಹಣ, ₹3 ಕೋಟಿಯಷ್ಟು ಚಿನ್ನದ ಗಟ್ಟಿ ನೀಡುವಂತೆ ಅಪಹರಣಕಾರರು ಬೇಡಿಕೆ ಇಟ್ಟಿದ್ದರು. ಆದರೆ, ಅದೇ ದಿನ ರಾತ್ರಿ 8ರ ಸುಮಾರಿನಲ್ಲಿ ಕುರುಗೋಡು ಬಳಿಯ ಸೋಮಸಮುದ್ರದ ಬಳಿ ಸುನಿಲ್ ಕುಮಾರ್ ಅವರನ್ನು ಬಿಟ್ಟಿದ್ದ ದುಷ್ಕರ್ಮಿಗಳು, ₹300 ನೀಡಿ ಮನೆಗೆ ಹೋಗುವಂತೆ ಹೇಳಿ ಹೋಗಿದ್ದರು.</p>.ವೈದ್ಯ ಸುನೀಲ್ ಕುಮಾರ್ ಅಪಹರಣ ಪ್ರಕರಣ ಶೀಘ್ರ ಇತ್ಯರ್ಥ: ಎಸ್ಪಿ .ಬಳ್ಳಾರಿ ಜಿಲ್ಲಾಸ್ಪತ್ರೆ ವೈದ್ಯ ಡಾ. ಸುನೀಲ್ ಅಪಹರಣ: ₹6 ಕೋಟಿ ಹಣಕ್ಕೆ ಬೇಡಿಕೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>