<p><strong>ಬೆಂಗಳೂರು:</strong> ಮದ್ಯ ಮಾರಾಟ ಸನ್ನದು ನೀಡಲು ₹25 ಲಕ್ಷ ಲಂಚ ಪಡೆಯುತ್ತಿದ್ದ ಬೆಂಗಳೂರು ಅಬಕಾರಿ ಜಿಲ್ಲೆ–8ರ ಅಬಕಾರಿ ಉಪ ಆಯುಕ್ತ (ಡಿಸಿ) ಜಗದೀಶ್ ನಾಯ್ಕ್ ಸೇರಿ ಮೂವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p>.<p>ಮೈಸೂರು ರಸ್ತೆಗೆ ಹೊಂದಿಕೊಂಡಂತೆ ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಲಕ್ಷ್ಮೀನಾರಾಯಣ.ಸಿ ಅವರು ಲಾಡ್ಜ್ ಅಂಡ್ ರೆಸ್ಟೋರೆಂಟ್ ತೆರೆಯಲು ಸಿದ್ಧತೆ ನಡೆಸಿದ್ದಾರೆ. ರೆಸ್ಟೋರೆಂಟ್ನಲ್ಲಿ ಮದ್ಯಪೂರೈಕೆಗೆ ಸಿಎಲ್–7 ಸನ್ನದು ಪಡೆಯಲು ಅವರು ಅರ್ಜಿ ಸಲ್ಲಿಸಿದ್ದರು ಎಂದು ಲೋಕಾಯುಕ್ತ ಸಂಸ್ಥೆಯು ತಿಳಿಸಿದೆ.</p>.<p>ಸನ್ನದು ಪಡೆಯಲು ಅಗತ್ಯವಿದ್ದ ಎಲ್ಲ ಷರತ್ತುಗಳನ್ನು ಪೂರೈಸಿದ ನಂತರ ₹21 ಲಕ್ಷ ಶುಲ್ಕವನ್ನೂ ಲಕ್ಷ್ಮೀನಾರಾಯಣ ಅವರು ಪಾವತಿಸಿದ್ದರು. ಆದರೆ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯ್ಕ್ ಅವರು ಅರ್ಜಿಯನ್ನು ತಡೆಹಿಡಿದಿದ್ದರು. ಅರ್ಜಿಗೆ ಸಹಿಯನ್ನೂ ಮಾಡಿರಲಿಲ್ಲ, ತಿರಸ್ಕರಿಸಿಯೂ ಇರಲಿಲ್ಲ. ಈ ಬಗ್ಗೆ ಲಕ್ಷ್ಮೀನಾರಾಯಣ ಪ್ರಶ್ನಿಸಿದಾಗ, ₹80 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಮಾಹಿತಿ ನೀಡಿದೆ.</p>.<p>ಲಕ್ಷ್ಮೀನಾರಾಯಣ ಅವರು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜು ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ರೂಪಿಸಲಾಗಿತ್ತು. ಅದರಂತೆ ದೂರುದಾರರು ಶನಿವಾರ ನಗರದ ಮೈಸೂರು ರಸ್ತೆಯ, ಬ್ಯಾಟರಾಯನಪುರದಲ್ಲಿ ಇರುವ ಕರ್ನಾಟಕ ರಾಜ್ಯ ಪಾನೀಯ ನಿಗಮದ ಸಂಕೀರ್ಣಕ್ಕೆ ತೆರಳಿದ್ದರು ಎಂದು ವಿವರಿಸಿದೆ.</p>.<p>ಸಂಕೀರ್ಣದಲ್ಲಿರುವ ಅಬಕಾರಿ ಉಪವಿಭಾಗದ ಕಚೇರಿಯಲ್ಲಿಯೇ ಜಗದೀಶ್ ನಾಯ್ಕ್, ಅಬಕಾರಿ ಸೂಪರಿಂಟೆಂಡೆಂಟ್ ಕೆ.ಎಂ.ತಮ್ಮಣ್ಣ ಮತ್ತು ಅಬಕಾರಿ ಕಾನ್ಸ್ಟೆಬಲ್ ಲಕ್ಕಪ್ಪ ಗನಿ ಅವರು ದೂರುದಾರರಿಂದ ₹25 ಲಕ್ಷ ಪಡೆದುಕೊಂಡಿದ್ದರು. ಇದೇ ವೇಳೆ ದಾಳಿ ನಡೆಸಿ, ಮೂವರನ್ನೂ ಬಂಧಿಸಲಾಯಿತು ಎಂದು ತಿಳಿಸಿದೆ.</p>.<p>ಮೂವರು ಆರೋಪಿಗಳು ಈ ಹಿಂದೆ ಹಲವರ ಬಳಿ ಲಂಚ ಕೇಳಿರುವ ಬಗ್ಗೆ ದೂರುಗಳು ಬಂದಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಪ್ರಕರಣ ದಾಖಲಿಸಲು ಪರಿಶೀಲನೆ ನಡೆಯುತ್ತಿದೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮದ್ಯ ಮಾರಾಟ ಸನ್ನದು ನೀಡಲು ₹25 ಲಕ್ಷ ಲಂಚ ಪಡೆಯುತ್ತಿದ್ದ ಬೆಂಗಳೂರು ಅಬಕಾರಿ ಜಿಲ್ಲೆ–8ರ ಅಬಕಾರಿ ಉಪ ಆಯುಕ್ತ (ಡಿಸಿ) ಜಗದೀಶ್ ನಾಯ್ಕ್ ಸೇರಿ ಮೂವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p>.<p>ಮೈಸೂರು ರಸ್ತೆಗೆ ಹೊಂದಿಕೊಂಡಂತೆ ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಲಕ್ಷ್ಮೀನಾರಾಯಣ.ಸಿ ಅವರು ಲಾಡ್ಜ್ ಅಂಡ್ ರೆಸ್ಟೋರೆಂಟ್ ತೆರೆಯಲು ಸಿದ್ಧತೆ ನಡೆಸಿದ್ದಾರೆ. ರೆಸ್ಟೋರೆಂಟ್ನಲ್ಲಿ ಮದ್ಯಪೂರೈಕೆಗೆ ಸಿಎಲ್–7 ಸನ್ನದು ಪಡೆಯಲು ಅವರು ಅರ್ಜಿ ಸಲ್ಲಿಸಿದ್ದರು ಎಂದು ಲೋಕಾಯುಕ್ತ ಸಂಸ್ಥೆಯು ತಿಳಿಸಿದೆ.</p>.<p>ಸನ್ನದು ಪಡೆಯಲು ಅಗತ್ಯವಿದ್ದ ಎಲ್ಲ ಷರತ್ತುಗಳನ್ನು ಪೂರೈಸಿದ ನಂತರ ₹21 ಲಕ್ಷ ಶುಲ್ಕವನ್ನೂ ಲಕ್ಷ್ಮೀನಾರಾಯಣ ಅವರು ಪಾವತಿಸಿದ್ದರು. ಆದರೆ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯ್ಕ್ ಅವರು ಅರ್ಜಿಯನ್ನು ತಡೆಹಿಡಿದಿದ್ದರು. ಅರ್ಜಿಗೆ ಸಹಿಯನ್ನೂ ಮಾಡಿರಲಿಲ್ಲ, ತಿರಸ್ಕರಿಸಿಯೂ ಇರಲಿಲ್ಲ. ಈ ಬಗ್ಗೆ ಲಕ್ಷ್ಮೀನಾರಾಯಣ ಪ್ರಶ್ನಿಸಿದಾಗ, ₹80 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಮಾಹಿತಿ ನೀಡಿದೆ.</p>.<p>ಲಕ್ಷ್ಮೀನಾರಾಯಣ ಅವರು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜು ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ರೂಪಿಸಲಾಗಿತ್ತು. ಅದರಂತೆ ದೂರುದಾರರು ಶನಿವಾರ ನಗರದ ಮೈಸೂರು ರಸ್ತೆಯ, ಬ್ಯಾಟರಾಯನಪುರದಲ್ಲಿ ಇರುವ ಕರ್ನಾಟಕ ರಾಜ್ಯ ಪಾನೀಯ ನಿಗಮದ ಸಂಕೀರ್ಣಕ್ಕೆ ತೆರಳಿದ್ದರು ಎಂದು ವಿವರಿಸಿದೆ.</p>.<p>ಸಂಕೀರ್ಣದಲ್ಲಿರುವ ಅಬಕಾರಿ ಉಪವಿಭಾಗದ ಕಚೇರಿಯಲ್ಲಿಯೇ ಜಗದೀಶ್ ನಾಯ್ಕ್, ಅಬಕಾರಿ ಸೂಪರಿಂಟೆಂಡೆಂಟ್ ಕೆ.ಎಂ.ತಮ್ಮಣ್ಣ ಮತ್ತು ಅಬಕಾರಿ ಕಾನ್ಸ್ಟೆಬಲ್ ಲಕ್ಕಪ್ಪ ಗನಿ ಅವರು ದೂರುದಾರರಿಂದ ₹25 ಲಕ್ಷ ಪಡೆದುಕೊಂಡಿದ್ದರು. ಇದೇ ವೇಳೆ ದಾಳಿ ನಡೆಸಿ, ಮೂವರನ್ನೂ ಬಂಧಿಸಲಾಯಿತು ಎಂದು ತಿಳಿಸಿದೆ.</p>.<p>ಮೂವರು ಆರೋಪಿಗಳು ಈ ಹಿಂದೆ ಹಲವರ ಬಳಿ ಲಂಚ ಕೇಳಿರುವ ಬಗ್ಗೆ ದೂರುಗಳು ಬಂದಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಪ್ರಕರಣ ದಾಖಲಿಸಲು ಪರಿಶೀಲನೆ ನಡೆಯುತ್ತಿದೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>