<p><strong>ಬೆಂಗಳೂರು: </strong>ನಗರದ ಪುರಭವನದ ಎದುರು ಕನ್ನಡ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಆರ್ದ್ರಾ ಎಂಬಯುವತಿ, ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ.</p>.<p>ಯುವತಿಯನ್ನು ವಶಕ್ಕೆ ಪಡೆದಿರುವ ಎಸ್ಜೆ ಪಾರ್ಕ್ ಪೊಲೀಸರು, ಠಾಣೆಗೆ ಕರೆದೊಯ್ದಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಸಹ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/karnataka-cm-bs-yediyurappa-says-woman-arrested-for-shouting-pakistan-zindabad-has-naxal-links-706930.html" itemprop="url" target="_blank">ಅಮೂಲ್ಯಗೆ ನಕ್ಸಲರ ಜತೆ ಸಂಬಂಧವಿತ್ತು: ಸಿಎಂ ಬಿ.ಎಸ್. ಯಡಿಯೂರಪ್ಪ</a></p>.<p>‘ಪ್ರತಿಭಟನೆ ವೇಳೆ ಯುವತಿ ಕರಪತ್ರ ಹಿಡಿದುಕೊಂಡು ಕುಳಿತಿದ್ದರು. ಏಕಾಏಕಿ ಘೋಷಣೆ ಕೂಗಿದ್ದಾರೆ. ಆಕೆ ಮಲ್ಲೇಶ್ವರ ನಿವಾಸಿ. ಖಾಸಗಿ ಕಂಪನಿ ಉದ್ಯೋಗಿ ಎಂಬುದು ತಿಳಿದುಬಂದಿದೆ’ ಎಂದು ಡಿಸಿಪಿ ಚೇತನ್ಸಿಂಗ್ ಹೇಳಿದರು.</p>.<p><strong>ಪಾಕ್ ಪರ ಘೋಷಣೆ ಕೂಗಿದ್ದಕ್ಕೆ ಪುರಾವೆ ಇಲ್ಲ</strong><br />ಪಾಕ್ ಪರ ಯುವತಿ ಘೋಷಣೆ ಕೂಗಿದ್ದಾಳೆಂದು ಎಂಬುದಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ಡಿಸಿಪಿ ಚೇತನ್ಸಿಂಗ್ ರಾಥೋಡ್ ಹೇಳಿದರು.</p>.<p>‘ಯುವತಿ ಭಿತ್ತಿಪತ್ರ ಮಾತ್ರ ಪ್ರದರ್ಶಿಸಿದ್ದಾರೆ. ಘೋಷಣೆ ಕೂಗಿದ ಬಗ್ಗೆ ಕೆಲವರು ಆರೋಪ ಮಾಡುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾ ಸ್ಥಳದಿಂದ ಯುವತಿಯನ್ನು ಠಾಣೆಗೆ ಕರೆತರಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಪುರಭವನದ ಎದುರು ಕನ್ನಡ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಆರ್ದ್ರಾ ಎಂಬಯುವತಿ, ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ.</p>.<p>ಯುವತಿಯನ್ನು ವಶಕ್ಕೆ ಪಡೆದಿರುವ ಎಸ್ಜೆ ಪಾರ್ಕ್ ಪೊಲೀಸರು, ಠಾಣೆಗೆ ಕರೆದೊಯ್ದಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಸಹ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/karnataka-cm-bs-yediyurappa-says-woman-arrested-for-shouting-pakistan-zindabad-has-naxal-links-706930.html" itemprop="url" target="_blank">ಅಮೂಲ್ಯಗೆ ನಕ್ಸಲರ ಜತೆ ಸಂಬಂಧವಿತ್ತು: ಸಿಎಂ ಬಿ.ಎಸ್. ಯಡಿಯೂರಪ್ಪ</a></p>.<p>‘ಪ್ರತಿಭಟನೆ ವೇಳೆ ಯುವತಿ ಕರಪತ್ರ ಹಿಡಿದುಕೊಂಡು ಕುಳಿತಿದ್ದರು. ಏಕಾಏಕಿ ಘೋಷಣೆ ಕೂಗಿದ್ದಾರೆ. ಆಕೆ ಮಲ್ಲೇಶ್ವರ ನಿವಾಸಿ. ಖಾಸಗಿ ಕಂಪನಿ ಉದ್ಯೋಗಿ ಎಂಬುದು ತಿಳಿದುಬಂದಿದೆ’ ಎಂದು ಡಿಸಿಪಿ ಚೇತನ್ಸಿಂಗ್ ಹೇಳಿದರು.</p>.<p><strong>ಪಾಕ್ ಪರ ಘೋಷಣೆ ಕೂಗಿದ್ದಕ್ಕೆ ಪುರಾವೆ ಇಲ್ಲ</strong><br />ಪಾಕ್ ಪರ ಯುವತಿ ಘೋಷಣೆ ಕೂಗಿದ್ದಾಳೆಂದು ಎಂಬುದಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ಡಿಸಿಪಿ ಚೇತನ್ಸಿಂಗ್ ರಾಥೋಡ್ ಹೇಳಿದರು.</p>.<p>‘ಯುವತಿ ಭಿತ್ತಿಪತ್ರ ಮಾತ್ರ ಪ್ರದರ್ಶಿಸಿದ್ದಾರೆ. ಘೋಷಣೆ ಕೂಗಿದ ಬಗ್ಗೆ ಕೆಲವರು ಆರೋಪ ಮಾಡುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾ ಸ್ಥಳದಿಂದ ಯುವತಿಯನ್ನು ಠಾಣೆಗೆ ಕರೆತರಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>