<p><strong>ಬೆಂಗಳೂರು</strong>: ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದಾನೆ ಎನ್ನಲಾದ ಆರೋಪಿ ನವೀನ್ನನ್ನು ಪೊಲೀಸರು ಮಂಗಳವಾರ ತಡರಾತ್ರಿಯೇ ಬಂಧಿಸಿದ್ದಾರೆ.</p>.<p>ಬಂಧಿತ ಆರೋಪಿ ನವೀನ್, ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಹೋದರಿಯ ಮಗನೆಂದು ಗೊತ್ತಾಗಿದೆ. ಆತನನ್ನು ಸದ್ಯದಲ್ಲೇ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.<br /><br />ಮಂಗಳವಾರ ಬೆಳಿಗ್ಗೆಯೇ ಆರೋಪಿ ತನ್ನ ಫೇಸ್ಬುಕ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದ. ಅದನ್ನು ನೋಡಿದ್ದ ಜನ, ಠಾಣೆಗೆ ದೂರು ನೀಡಲು ಹೋಗಿದ್ದರು. ಕೆಲವರು, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೂ ತೆರಳಿದ್ದರು. ಎರಡು ಕಡೆಯೂ ಕೆಲ ಕಿಡಿಗೇಡಿಗಳು, ಮನೆ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಆ ಹಿನ್ನೆಲೆಯಲ್ಲಿ ಗಲಭೆ ಸೃಷ್ಟಿಯಾಗಿತ್ತು.</p>.<p><strong>ಇದನ್ನೂ ಓದಿ:<a href="https://www.prajavani.net/district/bengaluru-city/violence-breaks-out-in-bengaluru-kg-halli-congress-mla-house-attacked-over-derogatory-post-752728.html" target="_blank">ಪೈಗಂಬರ್ ಬಗ್ಗೆ ಅವಹೇಳನ | ಕೆ.ಜಿ.ಹಳ್ಳಿ ಉದ್ವಿಗ್ನ; ಗುಂಡೇಟಿಗೆ ಇಬ್ಬರು ಸಾವು</a></strong></p>.<p>ಇದರ ನಡುವೆಯೇ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ನಸುಕಿನಲ್ಲಿ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಕೊರೊನಾ ಪರೀಕ್ಷೆಯನ್ನೂ ಮಾಡಿಸಿದ್ದಾರೆ.</p>.<p><strong>ಗಲಭೆ: ಬಂಧಿತರ ಸಂಖ್ಯೆ 110ಕ್ಕೆ ಏರಿಕೆ</strong></p>.<p>ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ನಡೆದ ಗಲಭೆ ಸಂಬಂಧ ರಾತ್ರಿಯಿಡಿ ಕಾರ್ಯಾಚರಣೆ ನಡೆಸಿದ ಪೊಲೀಸರು, 110 ಮಂದಿಯನ್ನು ಬಂಧಿಸಿದ್ದಾರೆ.</p>.<p>ಗಲಭೆ ಸೃಷ್ಟಿಸಿ ವಾಹನಗಳಿಗೆ ಬೆಂಕಿ ಹಚ್ಚಿ, ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳ ಪತ್ತೆಗೆ ಸಿಸಿಬಿ ಹಾಗೂ ಸ್ಥಳೀಯ ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು.</p>.<p>ತಂಡದಲ್ಲಿದ್ದ ಪೊಲೀಸರು, ಬೆಳಿಗ್ಗೆ 10 ಗಂಟೆಯವರಗೆ ಒಟ್ಟು 110 ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>'ಗಲಭೆ ಸಂಬಂಧ 110 ಮಂದಿಯನ್ನು ಬಂಧಿಸಲಾಗಿದೆ. ಇನ್ನು ಹಲವರು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೂ ಶೋಧ ಮುಂದುವರಿದಿದೆ' ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದಾನೆ ಎನ್ನಲಾದ ಆರೋಪಿ ನವೀನ್ನನ್ನು ಪೊಲೀಸರು ಮಂಗಳವಾರ ತಡರಾತ್ರಿಯೇ ಬಂಧಿಸಿದ್ದಾರೆ.</p>.<p>ಬಂಧಿತ ಆರೋಪಿ ನವೀನ್, ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಹೋದರಿಯ ಮಗನೆಂದು ಗೊತ್ತಾಗಿದೆ. ಆತನನ್ನು ಸದ್ಯದಲ್ಲೇ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.<br /><br />ಮಂಗಳವಾರ ಬೆಳಿಗ್ಗೆಯೇ ಆರೋಪಿ ತನ್ನ ಫೇಸ್ಬುಕ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದ. ಅದನ್ನು ನೋಡಿದ್ದ ಜನ, ಠಾಣೆಗೆ ದೂರು ನೀಡಲು ಹೋಗಿದ್ದರು. ಕೆಲವರು, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೂ ತೆರಳಿದ್ದರು. ಎರಡು ಕಡೆಯೂ ಕೆಲ ಕಿಡಿಗೇಡಿಗಳು, ಮನೆ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಆ ಹಿನ್ನೆಲೆಯಲ್ಲಿ ಗಲಭೆ ಸೃಷ್ಟಿಯಾಗಿತ್ತು.</p>.<p><strong>ಇದನ್ನೂ ಓದಿ:<a href="https://www.prajavani.net/district/bengaluru-city/violence-breaks-out-in-bengaluru-kg-halli-congress-mla-house-attacked-over-derogatory-post-752728.html" target="_blank">ಪೈಗಂಬರ್ ಬಗ್ಗೆ ಅವಹೇಳನ | ಕೆ.ಜಿ.ಹಳ್ಳಿ ಉದ್ವಿಗ್ನ; ಗುಂಡೇಟಿಗೆ ಇಬ್ಬರು ಸಾವು</a></strong></p>.<p>ಇದರ ನಡುವೆಯೇ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ನಸುಕಿನಲ್ಲಿ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಕೊರೊನಾ ಪರೀಕ್ಷೆಯನ್ನೂ ಮಾಡಿಸಿದ್ದಾರೆ.</p>.<p><strong>ಗಲಭೆ: ಬಂಧಿತರ ಸಂಖ್ಯೆ 110ಕ್ಕೆ ಏರಿಕೆ</strong></p>.<p>ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ನಡೆದ ಗಲಭೆ ಸಂಬಂಧ ರಾತ್ರಿಯಿಡಿ ಕಾರ್ಯಾಚರಣೆ ನಡೆಸಿದ ಪೊಲೀಸರು, 110 ಮಂದಿಯನ್ನು ಬಂಧಿಸಿದ್ದಾರೆ.</p>.<p>ಗಲಭೆ ಸೃಷ್ಟಿಸಿ ವಾಹನಗಳಿಗೆ ಬೆಂಕಿ ಹಚ್ಚಿ, ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳ ಪತ್ತೆಗೆ ಸಿಸಿಬಿ ಹಾಗೂ ಸ್ಥಳೀಯ ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು.</p>.<p>ತಂಡದಲ್ಲಿದ್ದ ಪೊಲೀಸರು, ಬೆಳಿಗ್ಗೆ 10 ಗಂಟೆಯವರಗೆ ಒಟ್ಟು 110 ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>'ಗಲಭೆ ಸಂಬಂಧ 110 ಮಂದಿಯನ್ನು ಬಂಧಿಸಲಾಗಿದೆ. ಇನ್ನು ಹಲವರು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೂ ಶೋಧ ಮುಂದುವರಿದಿದೆ' ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>