ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ ಎಂದೆಲ್ಲಾ ಕರೆಸಿಕೊಳ್ಳುವ ಬೆಂಗಳೂರು, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲೂ ವಿಶಿಷ್ಟವಾದ ಛಾಪು ಮೂಡಿಸಿದೆ.ಈ ಮಹಾನಗರಿ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ ಅವರಂತಹ ರತ್ನಗಳನ್ನು ಕ್ರೀಡಾಲೋಕಕ್ಕೆ ಕೊಡುಗೆಯಾಗಿ ನೀಡಿದೆ.ಇಂತಹ ವಿಶಿಷ್ಟ ಪರಂಪರೆಯನ್ನು ಹೊಂದಿರುವ ಬೆಂಗಳೂರಿನಲ್ಲಿ ಈಗ ಆಟದ ಮೈದಾನಗಳೇ ಮಾಯವಾಗುತ್ತಿವೆ. ಇರುವ ಕೆಲ ಮೈದಾನಗಳು ನಿರ್ವಹಣೆಯ ಕೊರತೆಯಿಂದ ಶೋಚನೀಯ ಸ್ಥಿತಿಗೆ ತಲುಪಿವೆ.