<p><strong>ಬೆಂಗಳೂರು:</strong> ಯುವತಿ ಜೊತೆ ಮೃಗೀಯವಾಗಿ ವರ್ತಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.</p>.<p>ಬಾಂಗ್ಲಾದೇಶದ 23 ವರ್ಷದ ಯುವತಿಯನ್ನು ರಾಮಮೂರ್ತಿನಗರದ ಮನೆಯೊಂದರಲ್ಲಿ ಕೆಲ ದಿನ ಹಿಂದೆ ಆರೋಪಿಗಳು ಅತ್ಯಾಚಾರ ಎಸಗಿದ್ದರು. ಅದರ ವಿಡಿಯೊವನ್ನು ಆರೋಪಿಗಳೇ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.</p>.<p>ವಿಡಿಯೊ ಆಧರಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ನಗರದ ಪೊಲೀಸರು, ನಾಲ್ವರು ಆರೋಪಗಳನ್ನು ಗುರುವಾರ ಸಂಜೆ ಬಂಧಿಸಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/bangladesh-girl-gang-rape-in-bengaluru-833937.html" itemprop="url">ಬೆಂಗಳೂರಲ್ಲೂ 'ನಿರ್ಭಯ' ಅತ್ಯಾಚಾರ; ಬಾಂಗ್ಲಾ ಅಕ್ರಮ ವಲಸಿಗರಿಂದ ಪೈಶಾಚಿಕ ಕ್ರೌರ್ಯ </a></p>.<p>ಸ್ಥಳ ಮಹಜರು ಮಾಡಲು ಆರೋಪಿಗಳನ್ನು ಶುಕ್ರವಾರ ಬೆಳಿಗ್ಗೆ ಕರೆದೊಯ್ಯಲಾಗಿತ್ತು. ಆಗ ಕೆ. ಚನ್ನಸಂದ್ರದ ಕನಕ ನಗರದಲ್ಲಿ ಪರಾರಿಯಾಗಲು ಯತ್ನಿಸಿದ್ದ ಆರೋಪಿಗಳು, ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದರು.</p>.<p>ಅದೇ ವೇಳೆಯೇ ಪೊಲೀಸರು, ಆರೋಪಿಗಳಾದ ರಿದಾಯ್ ಹಾಗೂ ಸಾಗರ್ ಕಾಲಿಗೆ ಗುಂಡು ಹಾರಿಸಿದ್ದಾರೆ.<br />ಗಾಯಗೊಂಡ ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಯುವತಿ ಜೊತೆ ಮೃಗೀಯವಾಗಿ ವರ್ತಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.</p>.<p>ಬಾಂಗ್ಲಾದೇಶದ 23 ವರ್ಷದ ಯುವತಿಯನ್ನು ರಾಮಮೂರ್ತಿನಗರದ ಮನೆಯೊಂದರಲ್ಲಿ ಕೆಲ ದಿನ ಹಿಂದೆ ಆರೋಪಿಗಳು ಅತ್ಯಾಚಾರ ಎಸಗಿದ್ದರು. ಅದರ ವಿಡಿಯೊವನ್ನು ಆರೋಪಿಗಳೇ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.</p>.<p>ವಿಡಿಯೊ ಆಧರಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ನಗರದ ಪೊಲೀಸರು, ನಾಲ್ವರು ಆರೋಪಗಳನ್ನು ಗುರುವಾರ ಸಂಜೆ ಬಂಧಿಸಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/bangladesh-girl-gang-rape-in-bengaluru-833937.html" itemprop="url">ಬೆಂಗಳೂರಲ್ಲೂ 'ನಿರ್ಭಯ' ಅತ್ಯಾಚಾರ; ಬಾಂಗ್ಲಾ ಅಕ್ರಮ ವಲಸಿಗರಿಂದ ಪೈಶಾಚಿಕ ಕ್ರೌರ್ಯ </a></p>.<p>ಸ್ಥಳ ಮಹಜರು ಮಾಡಲು ಆರೋಪಿಗಳನ್ನು ಶುಕ್ರವಾರ ಬೆಳಿಗ್ಗೆ ಕರೆದೊಯ್ಯಲಾಗಿತ್ತು. ಆಗ ಕೆ. ಚನ್ನಸಂದ್ರದ ಕನಕ ನಗರದಲ್ಲಿ ಪರಾರಿಯಾಗಲು ಯತ್ನಿಸಿದ್ದ ಆರೋಪಿಗಳು, ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದರು.</p>.<p>ಅದೇ ವೇಳೆಯೇ ಪೊಲೀಸರು, ಆರೋಪಿಗಳಾದ ರಿದಾಯ್ ಹಾಗೂ ಸಾಗರ್ ಕಾಲಿಗೆ ಗುಂಡು ಹಾರಿಸಿದ್ದಾರೆ.<br />ಗಾಯಗೊಂಡ ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>