<p><strong>ಬೆಂಗಳೂರು</strong>: ‘200ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರನ್ನು ರಾಜ್ಯದಿಂದ ಗಡಿಪಾರು ಮಾಡಲಾಗಿದೆ. ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ವಿದೇಶಿಯರ ಪ್ರಾದೇಶಿಕ ನೋಂದಣಿ ಅಧಿಕಾರಿಗಳು (ಎಫ್ಆರ್ಆರ್ಒ) ಅಕ್ರಮ ವಲಸಿಗರನ್ನು ಗುರುತಿಸಿ ಮಾಹಿತಿ ನೀಡುತ್ತಾರೆ. ಗುಜರಾತ್ ರೀತಿಯಲ್ಲಿ ಅಕ್ರಮ ನುಸುಳುಕೋರರನ್ನು ನಾವೂ ವಾಪಸ್ ಕಳುಹಿಸುತ್ತೇವೆ’ ಎಂದರು. </p>.<p>ಗುಜರಾತ್ನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ದೇಶಿಯರನ್ನು ಪತ್ತೆ ಮಾಡಿ ಭಾರತದಿಂದ ಹೊರಗೆ ಕಳುಹಿಸುವ ಬೃಹತ್ ಕಾರ್ಯಾಚರಣೆಯನ್ನು ಕಳೆದ ಏಪ್ರಿಲ್ ತಿಂಗಳಿನಲ್ಲಿ ಅಲ್ಲಿನ ಪೊಲೀಸರು ಮಾಡಿದ್ದರು. </p>.<p>‘ಅಕ್ರಮ ವಲಸಿಗರು ಕಟ್ಟಡ ಕಾರ್ಮಿಕರಾಗಿ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆಂಬ ಮಾಹಿತಿಯಿದೆ. ಅದನ್ನು ಪರಿಶೀಲಿಸಿ, ಅಂಥವರು ಕಂಡುಬಂದರೆ ವಶಕ್ಕೆ ತೆಗೆದುಕೊಂಡು ಗಡಿಪಾರು ಮಾಡಲಾಗುವುದು’ ಎಂದು ಪರಮೇಶ್ವರ ಹೇಳಿದರು.</p>.<p>ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ‘ಅಕ್ರಮ ನುಸುಳುಕೋರರ ಬಗ್ಗೆ ಮೃದುಧೋರಣೆ ತೋರಿ ಏನು ಪ್ರಯೋಜನವಿದೆ. ಬಾಂಗ್ಲಾ ದೇಶದವರನ್ನು ಕರೆಸಿಕೊಂಡು ಮತ ಹಾಕಿಸಿಕೊಳ್ಳುವಂಥ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿಲ್ಲ’ ಎಂದರು.</p>.<p>‘ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕಳೆದ ವಾರ ನನ್ನನ್ನು ಭೇಟಿಗೆ ಕರೆದಿದ್ದರು. ಆಗ ನಾನು ಊರಲ್ಲಿದ್ದೆ. ಹೀಗಾಗಿ ಭೇಟಿ ಸಾಧ್ಯವಾಗಿರಲಿಲ್ಲ. ಮತ್ತೆ ಕರೆದರೆ ಭೇಟಿಯಾಗುತ್ತೇನೆ’ ಎಂದರು.</p>.<p>‘ಡಿ.ಕೆ. ಶಿವಕುಮಾರ್ ಅವರಿಗೆ ಉನ್ನತ ಸ್ಥಾನ ಸಿಗಬೇಕು’ ಎಂಬ ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ, ‘ತಮ್ಮ ಅಭಿಪ್ರಾಯವನ್ನು ಶ್ರೀಗಳು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘200ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರನ್ನು ರಾಜ್ಯದಿಂದ ಗಡಿಪಾರು ಮಾಡಲಾಗಿದೆ. ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ವಿದೇಶಿಯರ ಪ್ರಾದೇಶಿಕ ನೋಂದಣಿ ಅಧಿಕಾರಿಗಳು (ಎಫ್ಆರ್ಆರ್ಒ) ಅಕ್ರಮ ವಲಸಿಗರನ್ನು ಗುರುತಿಸಿ ಮಾಹಿತಿ ನೀಡುತ್ತಾರೆ. ಗುಜರಾತ್ ರೀತಿಯಲ್ಲಿ ಅಕ್ರಮ ನುಸುಳುಕೋರರನ್ನು ನಾವೂ ವಾಪಸ್ ಕಳುಹಿಸುತ್ತೇವೆ’ ಎಂದರು. </p>.<p>ಗುಜರಾತ್ನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ದೇಶಿಯರನ್ನು ಪತ್ತೆ ಮಾಡಿ ಭಾರತದಿಂದ ಹೊರಗೆ ಕಳುಹಿಸುವ ಬೃಹತ್ ಕಾರ್ಯಾಚರಣೆಯನ್ನು ಕಳೆದ ಏಪ್ರಿಲ್ ತಿಂಗಳಿನಲ್ಲಿ ಅಲ್ಲಿನ ಪೊಲೀಸರು ಮಾಡಿದ್ದರು. </p>.<p>‘ಅಕ್ರಮ ವಲಸಿಗರು ಕಟ್ಟಡ ಕಾರ್ಮಿಕರಾಗಿ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆಂಬ ಮಾಹಿತಿಯಿದೆ. ಅದನ್ನು ಪರಿಶೀಲಿಸಿ, ಅಂಥವರು ಕಂಡುಬಂದರೆ ವಶಕ್ಕೆ ತೆಗೆದುಕೊಂಡು ಗಡಿಪಾರು ಮಾಡಲಾಗುವುದು’ ಎಂದು ಪರಮೇಶ್ವರ ಹೇಳಿದರು.</p>.<p>ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ‘ಅಕ್ರಮ ನುಸುಳುಕೋರರ ಬಗ್ಗೆ ಮೃದುಧೋರಣೆ ತೋರಿ ಏನು ಪ್ರಯೋಜನವಿದೆ. ಬಾಂಗ್ಲಾ ದೇಶದವರನ್ನು ಕರೆಸಿಕೊಂಡು ಮತ ಹಾಕಿಸಿಕೊಳ್ಳುವಂಥ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿಲ್ಲ’ ಎಂದರು.</p>.<p>‘ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕಳೆದ ವಾರ ನನ್ನನ್ನು ಭೇಟಿಗೆ ಕರೆದಿದ್ದರು. ಆಗ ನಾನು ಊರಲ್ಲಿದ್ದೆ. ಹೀಗಾಗಿ ಭೇಟಿ ಸಾಧ್ಯವಾಗಿರಲಿಲ್ಲ. ಮತ್ತೆ ಕರೆದರೆ ಭೇಟಿಯಾಗುತ್ತೇನೆ’ ಎಂದರು.</p>.<p>‘ಡಿ.ಕೆ. ಶಿವಕುಮಾರ್ ಅವರಿಗೆ ಉನ್ನತ ಸ್ಥಾನ ಸಿಗಬೇಕು’ ಎಂಬ ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ, ‘ತಮ್ಮ ಅಭಿಪ್ರಾಯವನ್ನು ಶ್ರೀಗಳು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>