<p><strong>ಬೆಂಗಳೂರು:</strong> ‘ಬಂಜಾರ ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇಧಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯು ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂತ ಸೇವಾಲಾಲ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮುಂದಿನ ವಿಧಾನ ಮಂಡಲದ ಅಧಿವೇಶನದಲ್ಲಿ ಈ ಸಂಬಂಧ ನಿರ್ಣಯ ಅಂಗೀಕರಿಸಲಾಗುತ್ತದೆ. ಬಂಜಾರ ವಿಶ್ವಕೋಶವನ್ನು ರಚಿಸುವ ಅಗತ್ಯವಿದ್ದು, ಇದಕ್ಕಾಗಿ ರಾಜ್ಯ ಸರ್ಕಾರದಿಂದ ಅನುದಾನ ಒದಗಿಸಲಾಗುತ್ತದೆ ಮತ್ತು ತಜ್ಞರ ಸಮಿತಿ ರಚಿಸಲಾಗುತ್ತದೆ. ಸಮುದಾಯದ ಎಲ್ಲರೂ ಸಾಧ್ಯವಿರುವ ಎಲ್ಲೆಡೆ ಬಂಜಾರ ಭಾಷೆಯನ್ನೇ ಬಳಸಬೇಕು’ ಎಂದು ಕರೆ ನೀಡಿದರು. </p>.<p>2025ನೇ ಸಾಲಿನ ‘ಸಂತ ಸೇವಾಲಾಲ್ ಪ್ರಶಸ್ತಿ’ಗೆ ರೂಪ್ಲಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ, ಅವರ ಮನೆಗೆ ತೆರಳಿ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಪ್ರಶಸ್ತಿಯ ಬಿನ್ನವತ್ತಳೆಯನ್ನು ಕಾರ್ಯಕ್ರಮದಲ್ಲಿ ಓದಲಾಯಿತು.</p>.<p>ಕಲೆ ಮತ್ತು ಸಾಮಾಜಿಕ ಸೇವೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಐವರಿಗೆ ಕಾರ್ಯಕ್ರಮದಲ್ಲಿ ಅಕಾಡೆಮಿಯ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪ್ರಶಸ್ತಿಯು ಫಲಕ ಮತ್ತು ತಲಾ ₹50,000 ನಗದು ಒಳಗೊಂಡಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹತ್ತು ಮಂದಿಗೆ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ಫಲಕ ಮತ್ತು ತಲಾ ₹25,000 ನಗದು ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬಂಜಾರ ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇಧಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯು ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂತ ಸೇವಾಲಾಲ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮುಂದಿನ ವಿಧಾನ ಮಂಡಲದ ಅಧಿವೇಶನದಲ್ಲಿ ಈ ಸಂಬಂಧ ನಿರ್ಣಯ ಅಂಗೀಕರಿಸಲಾಗುತ್ತದೆ. ಬಂಜಾರ ವಿಶ್ವಕೋಶವನ್ನು ರಚಿಸುವ ಅಗತ್ಯವಿದ್ದು, ಇದಕ್ಕಾಗಿ ರಾಜ್ಯ ಸರ್ಕಾರದಿಂದ ಅನುದಾನ ಒದಗಿಸಲಾಗುತ್ತದೆ ಮತ್ತು ತಜ್ಞರ ಸಮಿತಿ ರಚಿಸಲಾಗುತ್ತದೆ. ಸಮುದಾಯದ ಎಲ್ಲರೂ ಸಾಧ್ಯವಿರುವ ಎಲ್ಲೆಡೆ ಬಂಜಾರ ಭಾಷೆಯನ್ನೇ ಬಳಸಬೇಕು’ ಎಂದು ಕರೆ ನೀಡಿದರು. </p>.<p>2025ನೇ ಸಾಲಿನ ‘ಸಂತ ಸೇವಾಲಾಲ್ ಪ್ರಶಸ್ತಿ’ಗೆ ರೂಪ್ಲಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ, ಅವರ ಮನೆಗೆ ತೆರಳಿ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಪ್ರಶಸ್ತಿಯ ಬಿನ್ನವತ್ತಳೆಯನ್ನು ಕಾರ್ಯಕ್ರಮದಲ್ಲಿ ಓದಲಾಯಿತು.</p>.<p>ಕಲೆ ಮತ್ತು ಸಾಮಾಜಿಕ ಸೇವೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಐವರಿಗೆ ಕಾರ್ಯಕ್ರಮದಲ್ಲಿ ಅಕಾಡೆಮಿಯ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪ್ರಶಸ್ತಿಯು ಫಲಕ ಮತ್ತು ತಲಾ ₹50,000 ನಗದು ಒಳಗೊಂಡಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹತ್ತು ಮಂದಿಗೆ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ಫಲಕ ಮತ್ತು ತಲಾ ₹25,000 ನಗದು ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>