<p><strong>ಚನ್ನಪಟ್ಟಣ:</strong> ಮುಖ್ಯಮಂತ್ರಿ ಸ್ವಕ್ಷೇತ್ರ ಚನ್ನಪಟ್ಟಣ ತಾಲ್ಲೂಕಿನವರಾದ ಟಿ. ಶಾರದಮ್ಮ ಹಾಗೂ ಅವರ ಕುಟುಂಬದವರಿಗೆ ಕೆನರಾ ಬ್ಯಾಂಕ್ ಬೇವೂರು ಶಾಖೆಯು ನ್ಯಾಯಾಲಯದ ಮೂಲಕ ಕೃಷಿ ಸಾಲ ವಸೂಲಾತಿ ನೋಟಿಸ್ ನೀಡಿದೆ.</p>.<p>ಶಾರದಮ್ಮ 2011ರಲ್ಲಿ ಬ್ಯಾಂಕ್ನಿಂದ ₹2 ಲಕ್ಷ ಕೃಷಿ ಸಾಲ ಪಡೆದಿದ್ದರು. ಬ್ಯಾಂಕಿಗೆ ಹಣ ಮರುಪಾವತಿ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ಹಾಗೂ ಅವರ ಪುತ್ರ ಉಮಾಪತಿ ಮತ್ತು ಪುತ್ರಿ ಪಂಕಜಾ ಅವರಿಗೆ ನೋಟಿಸ್ ಜಾರಿಯಾಗಿದ್ದು, ಸಾಲ ಮರುಪಾವತಿ ಮಾಡದೇ ಹೋದಲ್ಲಿ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಿದೆ.</p>.<p><strong>ರೈತ ಸಂಘ ಖಂಡನೆ: </strong>‘ರೈತ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ. ಇದೀಗ ಅವರ ಕ್ಷೇತ್ರದಲ್ಲಿಯೇ ಅನ್ನದಾತರಿಗೆ ನೋಟಿಸ್ ನೀಡಿರುವುದು ಆತಂಕದ ಸಂಗತಿ’ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಮಲ್ಲಯ್ಯ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಸಾಲ ಮನ್ನಾ ಕುರಿತು ಬ್ಯಾಂಕಿನವರಿಗೆ ಮಾಹಿತಿ ಇಲ್ಲವೇ? ಸರ್ಕಾರದಿಂದ ಅವರಿಗೆ ಯಾವುದೇ ಸೂಚನೆ ಬಂದಿಲ್ಲವೇ’ ಎಂದು ಪ್ರಶ್ನಿಸಿದರು. ‘ಮುಖ್ಯಮಂತ್ರಿ ಕ್ಷೇತ್ರದಲ್ಲಿಯೇ ರೈತರ ಮೇಲೆ ಈ ರೀತಿಯ ದೌರ್ಜನ್ಯ ದುರದೃಷ್ಟಕರ. ಕುಮಾರಸ್ವಾಮಿ ಈ ಬಗ್ಗೆ ಕೂಡಲೇ ಗಮನ ಹರಿಸಬೇಕು. ಸಾಲ ಮನ್ನಾ ಆಗಿರುವ ಕುರಿತು ಬ್ಯಾಂಕಿನವರಿಗೆ ಸುತ್ತೋಲೆ ಹೊರಡಿಸಬೇಕು. ಶೀಘ್ರವೇ ಈ ಬಗ್ಗೆ ನಿರ್ಧಾರ ಕೈಗೊಳ್ಳದಿದ್ದರೆ ರೈತ ಸಂಘವು ಪ್ರತಿಭಟನೆ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ರೈತಸಂಘದ ಪದಾಧಿಕಾರಿಗಳಾದ ವಿಜಯ್ ಕುಮಾರ್, ಎಚ್.ನಾಗೇಶ್, ಎಚ್.ಸಿ.ಕೃಷ್ಣಯ್ಯ, ಎ.ಆರ್. ವೆಂಕಟಪ್ಪ, ತಿಮ್ಮೇಗೌಡ, ಗುರುಲಿಂಗಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಮುಖ್ಯಮಂತ್ರಿ ಸ್ವಕ್ಷೇತ್ರ ಚನ್ನಪಟ್ಟಣ ತಾಲ್ಲೂಕಿನವರಾದ ಟಿ. ಶಾರದಮ್ಮ ಹಾಗೂ ಅವರ ಕುಟುಂಬದವರಿಗೆ ಕೆನರಾ ಬ್ಯಾಂಕ್ ಬೇವೂರು ಶಾಖೆಯು ನ್ಯಾಯಾಲಯದ ಮೂಲಕ ಕೃಷಿ ಸಾಲ ವಸೂಲಾತಿ ನೋಟಿಸ್ ನೀಡಿದೆ.</p>.<p>ಶಾರದಮ್ಮ 2011ರಲ್ಲಿ ಬ್ಯಾಂಕ್ನಿಂದ ₹2 ಲಕ್ಷ ಕೃಷಿ ಸಾಲ ಪಡೆದಿದ್ದರು. ಬ್ಯಾಂಕಿಗೆ ಹಣ ಮರುಪಾವತಿ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ಹಾಗೂ ಅವರ ಪುತ್ರ ಉಮಾಪತಿ ಮತ್ತು ಪುತ್ರಿ ಪಂಕಜಾ ಅವರಿಗೆ ನೋಟಿಸ್ ಜಾರಿಯಾಗಿದ್ದು, ಸಾಲ ಮರುಪಾವತಿ ಮಾಡದೇ ಹೋದಲ್ಲಿ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಿದೆ.</p>.<p><strong>ರೈತ ಸಂಘ ಖಂಡನೆ: </strong>‘ರೈತ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ. ಇದೀಗ ಅವರ ಕ್ಷೇತ್ರದಲ್ಲಿಯೇ ಅನ್ನದಾತರಿಗೆ ನೋಟಿಸ್ ನೀಡಿರುವುದು ಆತಂಕದ ಸಂಗತಿ’ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಮಲ್ಲಯ್ಯ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಸಾಲ ಮನ್ನಾ ಕುರಿತು ಬ್ಯಾಂಕಿನವರಿಗೆ ಮಾಹಿತಿ ಇಲ್ಲವೇ? ಸರ್ಕಾರದಿಂದ ಅವರಿಗೆ ಯಾವುದೇ ಸೂಚನೆ ಬಂದಿಲ್ಲವೇ’ ಎಂದು ಪ್ರಶ್ನಿಸಿದರು. ‘ಮುಖ್ಯಮಂತ್ರಿ ಕ್ಷೇತ್ರದಲ್ಲಿಯೇ ರೈತರ ಮೇಲೆ ಈ ರೀತಿಯ ದೌರ್ಜನ್ಯ ದುರದೃಷ್ಟಕರ. ಕುಮಾರಸ್ವಾಮಿ ಈ ಬಗ್ಗೆ ಕೂಡಲೇ ಗಮನ ಹರಿಸಬೇಕು. ಸಾಲ ಮನ್ನಾ ಆಗಿರುವ ಕುರಿತು ಬ್ಯಾಂಕಿನವರಿಗೆ ಸುತ್ತೋಲೆ ಹೊರಡಿಸಬೇಕು. ಶೀಘ್ರವೇ ಈ ಬಗ್ಗೆ ನಿರ್ಧಾರ ಕೈಗೊಳ್ಳದಿದ್ದರೆ ರೈತ ಸಂಘವು ಪ್ರತಿಭಟನೆ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ರೈತಸಂಘದ ಪದಾಧಿಕಾರಿಗಳಾದ ವಿಜಯ್ ಕುಮಾರ್, ಎಚ್.ನಾಗೇಶ್, ಎಚ್.ಸಿ.ಕೃಷ್ಣಯ್ಯ, ಎ.ಆರ್. ವೆಂಕಟಪ್ಪ, ತಿಮ್ಮೇಗೌಡ, ಗುರುಲಿಂಗಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>