<p><strong>ಕಿಕ್ಕೇರಿ (ಮಂಡ್ಯ):</strong> ಸಮೀಪದ ಐಕನಹಳ್ಳಿ ಗ್ರಾಮದ ರೈತ ಅಣ್ಣೇಗೌಡ (58), ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕ್ನಿಂದ ಬಂದಿದ್ದ ನೋಟಿಸ್ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<p>ಸಾಸಲು ಗ್ರಾಮದ ಬ್ಯಾಂಕ್ ಆಫ್ ಬರೋಡದಲ್ಲಿ (ವಿಜಯಾ ಬ್ಯಾಂಕ್) ₹ 1 ಲಕ್ಷ, ಆನೆಗೊಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹ 50 ಸಾವಿರ ಸಾಲವಿತ್ತು. ಖಾಸಗಿ ವ್ಯಕ್ತಿಗಳಿಂದಲೂ ಸಾಲ ಪಡೆದು ನಾಲ್ಕೈದು ಕೊಳವೆಬಾವಿ ತೋಡಿಸಿದ್ದರು. ಬಾವಿಯಲ್ಲಿ ನೀರು ಬಾರದ ಕಾರಣ ಬಹಳ ನೊಂದಿದ್ದರು ಎನ್ನಲಾಗಿದೆ.</p>.<p>ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಹಾಗೂ ಶುಂಠಿ ಬೆಳೆ ನೀರಿಲ್ಲದೆ ಒಣಗಿತ್ತು. ಸಾಲದ ಹೊರೆ ಜಾಸ್ತಿಯಾಗಿ ಸಾಲಗಾರರ ಕಾಟ ಹೆಚ್ಚಾಗಿತ್ತು. ಜೊತೆಗೆ, ಸಾಲ ತೀರಿಸುವಂತೆ ಬ್ಯಾಂಕ್ನಿಂದ ನೋಟಿಸ್ ಬಂದ ಕಾರಣ ಭಯದಿಂದ ಎರಡು ದಿನಗಳ ಹಿಂದೆ ಮನೆಬಿಟ್ಟು ಹೋಗಿದ್ದರು. ಪತ್ನಿ ಸುವರ್ಣಾ, ಈ ಕುರಿತು ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಆದರೆ, ಅಣ್ಣೇಗೌಡ ಅವರು ಬುಧವಾರ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಒದ್ದಾಡುತ್ತಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕಿಕ್ಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಿಕ್ಕೇರಿ (ಮಂಡ್ಯ):</strong> ಸಮೀಪದ ಐಕನಹಳ್ಳಿ ಗ್ರಾಮದ ರೈತ ಅಣ್ಣೇಗೌಡ (58), ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕ್ನಿಂದ ಬಂದಿದ್ದ ನೋಟಿಸ್ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<p>ಸಾಸಲು ಗ್ರಾಮದ ಬ್ಯಾಂಕ್ ಆಫ್ ಬರೋಡದಲ್ಲಿ (ವಿಜಯಾ ಬ್ಯಾಂಕ್) ₹ 1 ಲಕ್ಷ, ಆನೆಗೊಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹ 50 ಸಾವಿರ ಸಾಲವಿತ್ತು. ಖಾಸಗಿ ವ್ಯಕ್ತಿಗಳಿಂದಲೂ ಸಾಲ ಪಡೆದು ನಾಲ್ಕೈದು ಕೊಳವೆಬಾವಿ ತೋಡಿಸಿದ್ದರು. ಬಾವಿಯಲ್ಲಿ ನೀರು ಬಾರದ ಕಾರಣ ಬಹಳ ನೊಂದಿದ್ದರು ಎನ್ನಲಾಗಿದೆ.</p>.<p>ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಹಾಗೂ ಶುಂಠಿ ಬೆಳೆ ನೀರಿಲ್ಲದೆ ಒಣಗಿತ್ತು. ಸಾಲದ ಹೊರೆ ಜಾಸ್ತಿಯಾಗಿ ಸಾಲಗಾರರ ಕಾಟ ಹೆಚ್ಚಾಗಿತ್ತು. ಜೊತೆಗೆ, ಸಾಲ ತೀರಿಸುವಂತೆ ಬ್ಯಾಂಕ್ನಿಂದ ನೋಟಿಸ್ ಬಂದ ಕಾರಣ ಭಯದಿಂದ ಎರಡು ದಿನಗಳ ಹಿಂದೆ ಮನೆಬಿಟ್ಟು ಹೋಗಿದ್ದರು. ಪತ್ನಿ ಸುವರ್ಣಾ, ಈ ಕುರಿತು ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಆದರೆ, ಅಣ್ಣೇಗೌಡ ಅವರು ಬುಧವಾರ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಒದ್ದಾಡುತ್ತಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕಿಕ್ಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>