<p><strong>ಬೆಂಗಳೂರು:</strong> ಕಳೆದ ಏಪ್ರಿಲ್ 18 ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ತಂದ 4 ಚೀತಾಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್ 4 ರಿಂದ ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗಲಿವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.</p>.<p>ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್ ಅವರೊಂದಿಗೆ ಸಭೆ ನಡೆಸಿದ ಅವರು, ಚೀತಾಗಳಿಗಾಗಿಯೇ ಬನ್ನೇರುಘಟ್ಟ ಮೃಗಾಲಯದಲ್ಲಿ ಪ್ರತ್ಯೇಕವಾಗಿ ಸಿದ್ಧಪಡಿಸಿರುವ ಆವರಣದಲ್ಲಿ ಅವುಗಳನ್ನು ಬಿಡಲಾಗುವುದು ಎಂದು ಹೇಳಿದರು.</p>.<p>ವನ್ಯಜೀವಿ ವಿನಿಮಯ ಕಾರ್ಯಕ್ರಮದ ಭಾಗವಾಗಿ ಏ.18 ರ ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಈ ಚೀತಾಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಚಿವ ಖಂಡ್ರೆ ಬರ ಮಾಡಿಕೊಂಡರು.</p>.<p>ಬನ್ನೇರುಘಟ್ಟ ಪರಿಸರ, ವಾತಾವರಣ, ಹವಾಮಾನಕ್ಕೆ ಹೊಂದಿಕೊಳ್ಳಲು ಈ ಚೀತಾಗಳನ್ನು ಪ್ರತ್ಯೇಕವಾಗಿ ಇಡಲಾಗಿತ್ತು. ಇವುಗಳ ಆರೋಗ್ಯದ ಬಗ್ಗೆ ಸತತ ನಿಗಾ ಇಡಲಾಗಿತ್ತು. ಪ್ರಸ್ತುತ ಚೀತಾಗಳು ಸಂಪೂರ್ಣವಾಗಿ ಆರೋಗ್ಯವಾಗಿದೆ ಎಂಬ ಮಾಹಿತಿ ಪಡೆದ ಸಚಿವರು, ಜೂನ್ ಮೊದಲ ವಾರದಲ್ಲಿ ಪ್ರವಾಸಿಗರಿಗೆ ಚೀತಾ ನೋಡಲು ಅವಕಾಶ ಕಲ್ಪಿಸುವಂತೆ ನಿರ್ದೇಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಳೆದ ಏಪ್ರಿಲ್ 18 ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ತಂದ 4 ಚೀತಾಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್ 4 ರಿಂದ ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗಲಿವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.</p>.<p>ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್ ಅವರೊಂದಿಗೆ ಸಭೆ ನಡೆಸಿದ ಅವರು, ಚೀತಾಗಳಿಗಾಗಿಯೇ ಬನ್ನೇರುಘಟ್ಟ ಮೃಗಾಲಯದಲ್ಲಿ ಪ್ರತ್ಯೇಕವಾಗಿ ಸಿದ್ಧಪಡಿಸಿರುವ ಆವರಣದಲ್ಲಿ ಅವುಗಳನ್ನು ಬಿಡಲಾಗುವುದು ಎಂದು ಹೇಳಿದರು.</p>.<p>ವನ್ಯಜೀವಿ ವಿನಿಮಯ ಕಾರ್ಯಕ್ರಮದ ಭಾಗವಾಗಿ ಏ.18 ರ ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಈ ಚೀತಾಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಚಿವ ಖಂಡ್ರೆ ಬರ ಮಾಡಿಕೊಂಡರು.</p>.<p>ಬನ್ನೇರುಘಟ್ಟ ಪರಿಸರ, ವಾತಾವರಣ, ಹವಾಮಾನಕ್ಕೆ ಹೊಂದಿಕೊಳ್ಳಲು ಈ ಚೀತಾಗಳನ್ನು ಪ್ರತ್ಯೇಕವಾಗಿ ಇಡಲಾಗಿತ್ತು. ಇವುಗಳ ಆರೋಗ್ಯದ ಬಗ್ಗೆ ಸತತ ನಿಗಾ ಇಡಲಾಗಿತ್ತು. ಪ್ರಸ್ತುತ ಚೀತಾಗಳು ಸಂಪೂರ್ಣವಾಗಿ ಆರೋಗ್ಯವಾಗಿದೆ ಎಂಬ ಮಾಹಿತಿ ಪಡೆದ ಸಚಿವರು, ಜೂನ್ ಮೊದಲ ವಾರದಲ್ಲಿ ಪ್ರವಾಸಿಗರಿಗೆ ಚೀತಾ ನೋಡಲು ಅವಕಾಶ ಕಲ್ಪಿಸುವಂತೆ ನಿರ್ದೇಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>