ಬೆಂಗಳೂರು:‘ಕುವೆಂಪು, ಗಾಂಧಿ, ಅಂಬೇಡ್ಕರ್, ಕಿತ್ತೂರು ರಾಣಿ ಚನ್ನಮ್ಮ ಸೇರಿದಂತೆ ವಿವಿಧ ಮಹನೀಯರ ಬಗೆಗಿನ ಪಠ್ಯವಿಷಯಗಳನ್ನು ಕೈಬಿಟ್ಟಿರಲಿಲ್ಲ. ಬೇರೆ ಬೇರೆ ತರಗತಿಯ ಪಠ್ಯಪುಸ್ತಕದಲ್ಲಿ ಅವರ ಬಗೆಗಿನ ಪಾಠಗಳಿವೆ’ ಎಂದು ಸಾಹಿತಿ ಹಾಗೂ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.