ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ವೇಳೆ ಕಾಂಗ್ರೆಸ್ ಸದಸ್ಯರು, ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕಾಲೆಳೆದ ಪ್ರಸಂಗ ನಡೆಯಿತು. ನಿಮ್ಮನ್ನ ನೋಡಿದರೆ ಅಯ್ಯೋ ಅನಿಸುತ್ತೆ. ಎಷ್ಟೇ ಹೋರಾಟ ಮಾಡಿದರೂ ನಿಮಗೆ ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಸದಸ್ಯರು ತಮಾಷೆ ಮಾಡಿದರು.