ಕೆಲವರು ದೆಹಲಿಗೆ ಹೋಗುತ್ತಾರೆ. ಅವರಿಗೆ ಬೇಕಾದ ಕೆಲಸಗಳನ್ನು ಮಾಡಿಸಿಕೊಳ್ಳುತ್ತಾರೆ ಅದ್ಯಾವುದು ನನಗೆ ಬರುವುದಿಲ್ಲ. ಹಾಗಾಗಿ ನಾನು ಮಂತ್ರಿಯಾಗಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಎಷ್ಟು ಹೋರಾಟ ಮಾಡಿದರೂ ಮಂತ್ರಿ ಸ್ಥಾನ ಸಿಗಲಿಲ್ಲ ಎನ್ನುವ ಕಾಂಗ್ರೆಸ್ ಶಾಸಕರ ತಮಾಷೆಗೆ ಯತ್ನಾಳ ಹೀಗೆ ಉತ್ತರಿಸಿದರು.