ಬಸವಣ್ಣ ಇದೇ ಸ್ಥಳದಲ್ಲಿ ಲಿಂಗೈಕ್ಯರಾದರು. ಮೊದಲಿಗೆ ಈ ಸ್ಥಳದಲ್ಲಿ ಎರಡು ನದಿಗಳು ಹಳ್ಳದ ಮಾದರಿಯಲ್ಲಿ ಹರಿಯುತ್ತಿದ್ದವು. ಸರ್ಕಾರ ನಾರಾಯಣಪುರ ಜಲಾಶಯ (ಬಸವ ಸಾಗರ) ನಿರ್ಮಿಸಲು 1963ರಲ್ಲಿ ಅಡಿಗಲ್ಲು ಹಾಕಿತು. ಜಲಾಶಯದ ಹಿನ್ನಿರಿನಲ್ಲಿ ಬಸವಣ್ಣನವರ ಐಕ್ಯ ಸ್ಥಳ ಮುಳುಗಿ ಹೋಗಲಿದ್ದ ಕಾರಣ ಅಂದಿನ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಸಂರಕ್ಷಣೆಗೆ ಮುಂದಾಗಿದ್ದರು.