ಬೆಂಗಳೂರು: ನಾಡಿನಾದ್ಯಂತ ಇಂದು ಬಸವ ಜಯಂತಿ ಆಚರಿಸಲಾಗುತ್ತಿದೆ. ಜನರು ತಮ್ಮ ಮನೆಗಳಲ್ಲಿಯೇ ಕುಳಿತು ವಿಶ್ವಗುರು ಬಸವಣ್ಣನವರ ಸ್ಮರಣೆಯಲ್ಲಿ ತೊಡಗಿದ್ದಾರೆ. ಇದೇ ವೇಳೆ ನಾಡಿನ ಹಲವು ಗಣ್ಯರು ಬಸವ ಜಯಂತಿ ಶುಭಾಶಯ ಕೋರಿ ಟ್ವೀಟ್ ಮಾಡುವ ಮೂಲಕ ಶರಣ ತತ್ವಗಳನ್ನು ನೆನಪಿಸಿಕೊಂಡಿದ್ದಾರೆ.
ಹನ್ನೆರಡನೆಯ ಶತಮಾನದಲ್ಲಿ ಸಾಮಾಜಿಕ ನ್ಯಾಯದ ಮಾದರಿಯನ್ನು ತೋರಿಸಿಕೊಟ್ಟವರು ಬಸವಣ್ಣ ಎಂದು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, 'ಹನ್ನೆರಡನೆಯ ಶತಮಾನದಲ್ಲಿ ಸಾಮಾಜಿಕ ನ್ಯಾಯದ ಮಾದರಿಯನ್ನು - ಸಂಸತ್ತಿನ ಪರಿಕಲ್ಪನೆಯನ್ನು ತೋರಿಸಿಕೊಟ್ಟವರು ಬಸವಣ್ಣ. ಅವರ ವಚನಗಳು ಕೇವಲ ಬೋಧನೆಯಲ್ಲ, ಅವು ಕ್ರಾಂತಿ ಗೀತೆಗಳು. ಅವರು ತೋರಿದ ದಾರಿಯಲ್ಲಿ ಸಾಗಿದರೆ ಕಲ್ಯಾಣ ರಾಜ್ಯದ ಕನಸು ನನಸಾದೀತು' ಎಂದು ಹೇಳುವ ಮೂಲಕ ಕನ್ನಡ ಜನತೆಗೆ ಬಸವ ಜಯಂತಿಯ ಶುಭಾಶಯ ಕೋರಿದ್ದಾರೆ.
ಹನ್ನೆರಡನೆಯ ಶತಮಾನದಲ್ಲಿ ಸಾಮಾಜಿಕ ನ್ಯಾಯದ ಮಾದರಿಯನ್ನು - ಸಂಸತ್ತಿನ ಪರಿಕಲ್ಪನೆಯನ್ನು ತೋರಿಸಿಕೊಟ್ಟವರು ಬಸವಣ್ಣ. ಅವರ ವಚನಗಳು ಕೇವಲ ಬೋಧನೆಯಲ್ಲ, ಅವು ಕ್ರಾಂತಿ ಗೀತೆಗಳು. ಅವರು ತೋರಿದ ದಾರಿಯಲ್ಲಿ ಸಾಗಿದರೆ ಕಲ್ಯಾಣ ರಾಜ್ಯದ ಕನಸು ನನಸಾದೀತು. ಸಮಸ್ತ ಕನ್ನಡಿಗರಿಗೂ ಬಸವ ಜಯಂತಿಯ ಶುಭಾಶಯಗಳು. pic.twitter.com/3yhnvTWIMg
— B.S. Yediyurappa (@BSYBJP) April 26, 2020
ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣನೇ ನಿನ್ನೆ-ಇಂದು-ನಾಳೆಯೂ ನನ್ನ ಕೈಹಿಡಿದು ನಡೆಸುವ ವೈಚಾರಿಕ ಗುರು ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಬಡವರು, ಶೋಷಿತರು, ಜಾತಿ ತಾರತಮ್ಯದಿಂದ ನರಳಿದವರು, ಮಹಿಳೆಯರು ಹೀಗೆ ಅನ್ಯಾಯಕ್ಕೀಡಾದ ಸಮುದಾಯದ ಪರವಾಗಿ ಹೋರಾಡಿದ ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣನೇ ನಿನ್ನೆ-ಇಂದು-ನಾಳೆಯೂ ನನ್ನ ಕೈಹಿಡಿದು ನಡೆಸುವ ವೈಚಾರಿಕ ಗುರು. ಬಸವ ಜಯಂತಿಯ ದಿನ ಆ ಚೇತನಕ್ಕೆ ಭಕ್ತಿಯ ನಮನಗಳು' ಎಂದಿದ್ದಾರೆ.
ಬಡವರು, ಶೋಷಿತರು,
— Siddaramaiah (@siddaramaiah) April 26, 2020
ಜಾತಿ ತಾರತಮ್ಯದಿಂದ ನರಳಿದವರು,
ಮಹಿಳೆಯರು ಹೀಗೆ ಅನ್ಯಾಯಕ್ಕೀಡಾದ ಸಮುದಾಯದ ಪರವಾಗಿ ಹೋರಾಡಿದ ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣನೇ ನಿನ್ನೆ-ಇಂದು-ನಾಳೆಯೂ ನನ್ನ ಕೈಹಿಡಿದು ನಡೆಸುವ ವೈಚಾರಿಕ ಗುರು.
ಬಸವ ಜಯಂತಿಯ ದಿನ ಆ ಚೇತನಕ್ಕೆ ಭಕ್ತಿಯ ನಮನಗಳು.#BasavaJayanthi pic.twitter.com/qjG1m5ZWRq
ಅಣ್ಣ ಬಸವಣ್ಣನವರ ಬದುಕು, ತತ್ವ, ವಚನ ಸಂದೇಶ ನಮ್ಮೆಲ್ಲರ ಜೀವನಕ್ಕೆ ಪ್ರೇರಣೆ ಆಗಲಿ ಎಂದಿರುವ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ್, 'ಸರ್ವರಿಗೂ ಬಸವ ಜಯಂತಿಯ ಶುಭಾಶಯಗಳು. 12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ಮಹಾ ಮಾನವತಾವಾದಿ ಅಣ್ಣ ಬಸವಣ್ಣನವರ ಬದುಕು, ತತ್ವ, ವಚನ ಸಂದೇಶ ನಮ್ಮೆಲ್ಲರ ಜೀವನಕ್ಕೆ ಪ್ರೇರಣೆ ಆಗಲಿ' ಎಂದು ಟ್ವೀಟಿಸಿದ್ದಾರೆ.
ಸರ್ವರಿಗೂ ಬಸವ ಜಯಂತಿಯ ಶುಭಾಶಯಗಳು. 12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ಮಹಾ ಮಾನವತಾವಾದಿ ಅಣ್ಣ ಬಸವಣ್ಣನವರ ಬದುಕು, ತತ್ವ, ವಚನ ಸಂದೇಶ ನಮ್ಮೆಲ್ಲರ ಜೀವನಕ್ಕೆ ಪ್ರೇರಣೆ ಆಗಲಿ.#BasavaJayanti pic.twitter.com/1sADkcNYaT
— DK Shivakumar (@DKShivakumar) April 26, 2020
12ನೇ ಶತಮಾನದಲ್ಲಿ ಕರ್ನಾಟಕದಲ್ಲಿ ನಡೆದ ಸಾಮಾಜಿಕ-ಧಾರ್ಮಿಕ ಕ್ರಾಂತಿ ವಿಶ್ವದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂಥದ್ದು ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, 'ವಿಶ್ವದ ಮೊದಲ ಪ್ರಜಾಪ್ರಭುತ್ವ "ಅನುಭವ ಮಂಟಪ" ಜಾರಿಗೆ ತಂದಂತಹ ಜಗಜ್ಯೋತಿ ಕ್ರಾಂತಿಕಾರಿ ಬಸವಣ್ಣನವರಿಗೆ ಹೃತ್ಪೂರ್ವಕ ನಮನಗಳು' ಎಂದು ಹೇಳಿದ್ದಾರೆ.
ಎಲ್ಲರಿಗೂ ಅಕ್ಷಯ ತೃತೀಯಾ ಹಬ್ಬದ ಹಾರ್ದಿಕ ಶುಭಾಶಯಗಳು.
— Nalinkumar Kateel (@nalinkateel) April 26, 2020
ಈ ಅಕ್ಷಯ ತೃತೀಯಾವನ್ನು ನಾವು ಬರಿ ಲೌಕಿಕ ಸಂಪತ್ತಿನ ವೃದ್ಧಿಗೆ ಸೀಮಿತಗೊಳಿಸದೇ ಮಾನವೀಯತೆ, ಸಮಾಜಮುಖಿ ಕಾರ್ಯ, ನಾವು ಮಾಡುವ ಪ್ರತಿ ಕೆಲಸಗಳಲ್ಲಿಯೂ ನಮಗೆ ಹಾಗೂ ಇತರರಿಗೆ ಒಳ್ಳೆಯದನ್ನು ಬಯಸುತ್ತಾ ಆಚರಿಸೋಣ. #AkshayaTritiya2020 pic.twitter.com/WYE9ujxPlw
ಬಸವ ಜಯಂತಿಗೆ ಶುಭಾಶಯ ಕೋರಿರುವ ಆರೋಗ್ಯ ಸಚಿವ ಶ್ರೀರಾಮುಲು, ಅನುಭವ ಮಂಟಪವೆಂಬ ಪ್ರಜಾತಾಂತ್ರಿಕ ಸದನದ ಸ್ಥಾಪಕನಿಗೆ ಶಿರಬಾಗಿ ಶರಣು ಎಂದು ಹೇಳಿದ್ದಾರೆ.
ಜಗಜ್ಯೋತಿ ಬಸವಣ್ಣನವರ ಜಯಂತಿಯ ಶುಭಾಶಯಗಳು.
— B Sriramulu (@sriramulubjp) April 26, 2020
ಕಾಯಕವೇ ಕೈಲಾಸವೆಂದ ಭಕ್ತಿಭಂಡಾರಿಯ ಚರಣಗಳಿಗೆ ಶಿರಬಾಗಿ ಶರಣು.
ಅನುಭವ ಮಂಟಪವೆಂಬ ಪ್ರಜಾತಾಂತ್ರಿಕ ಸದನದ ಸ್ಥಾಪಕನಿಗೆ ಶಿರಬಾಗಿ ಶರಣು.
ಇವನಾರವ, ಇವನಾರವ ಎಂದೆಣಿಸದ ವಿಶ್ವಮಾನವನಿಗೆ ಶಿರಬಾಗಿ ಶರಣು. pic.twitter.com/eRPoT6QUf2
ಬಸವ ಜಯಂತಿ ಪ್ರಯುಕ್ತ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡರಾದ ಎಂ.ಬಿ. ಪಾಟೀಲ್, ಈಶ್ವರ್ ಖಂಡ್ರೆ, ಲಕ್ಷ್ಮಿ ಹೆಬ್ಬಾಳ್ಕರ್, ನಾಡಿನ ಜನರಿಗೆ ಶುಭಾಶಯ ಕೋರಿದ್ದಾರೆ.
ಶ್ರೀ ಗುರು ಬಸವಲಿಂಗಾಯ ನಮಃ
— M B Patil (@MBPatil) April 26, 2020
ಸಮಸ್ತ ಜನತೆಗೆ ವಿಶ್ವಗುರು ಬಸವಣ್ಣನವರ ಜಯಂತಿಯ ಶುಭಾಶಯಗಳು.#ಬಸವಜಯಂತಿ #BasavaJayanti pic.twitter.com/U4fRFWTpkR
ಬಸವಣ್ಣನವರ 887ನೇ ಜಯಂತಿ ಅಂಗವಾಗಿ ಇಂದು ಭಾಲ್ಕಿ ಗ್ರಹ ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಪಟ್ಟಣದ ಬಸವೇಶ್ವರ ವೃತ್ತಕ್ಕೆ ತೆರಳಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಎಲ್ಲರೂ ಬಸವಣ್ಣನವರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬಾಳಬೇಕು ಎಂದು ಹೇಳಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.#ಬಸವಜಯಂತಿ pic.twitter.com/gG6REvwBHx
— Eshwar Khandre (@eshwar_khandre) April 26, 2020
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.