‘ನುಡಿದಂತೆ ನಡೆದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ವರ್ಗರಹಿತ, ಜಾತಿರಹಿತ, ಮೌಢ್ಯಗಳಿಲ್ಲದ ವೈಚಾರಿಕ ಸಮಾಜ ಸ್ಥಾಪನೆಯ ಆಶಯದಿಂದ ಅವರು ವಚನಗಳನ್ನು ರಚಿಸಿದರು. ಕಾಯಕ, ದಾಸೋಹವನ್ನು ಬೋಧಿಸಿದ ಬಸವಣ್ಣನವರು ಯಾರೂ ಕುಳಿತು ತಿನ್ನದೇ ಕಾಯಕದಲ್ಲಿ ತೊಡಗಬೇಕೆಂದು ಪ್ರತಿಪಾದಿಸಿದರು. ಬಡವರು ಬಡವರಾಗಿಯೇ ಉಳಿಯುವ ಹಾಗೂ ಶ್ರೀಮಂತರ ಕುಳಿತು ತಿನ್ನುವ ವ್ಯವಸ್ಥೆ ಹೋಗಬೇಕು’ ಎಂದರು.