<p><strong>ಕನ್ಹೇರಿ (ಕೊಲ್ಹಾಪುರ ಜಿಲ್ಲೆ):</strong> ‘ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕನ್ಹೇರಿಯ ಸಿದ್ದಗಿರಿ ಮಠದ ಆವರಣದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ₹ 3 ಕೋಟಿ ನೆರವು ನೀಡುವುದಾಗಿ’ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.</p>.<p>ಮಠದ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಸಂತ ಸಮಾವೇಶ ಉದ್ಘಾಟಿಸಿ, ಕನ್ನಡ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ಈಗಾಗಲೇ<br />₹ 1 ಕೋಟಿ ನೀಡಿದ್ದು, ದೀಪಾವಳಿ ಹಬ್ಬಕ್ಕೆ ಮತ್ತೆ ₹ 2 ಕೋಟಿ ನೀಡಲಾ ಗುವುದು’ ಎಂದು ಭರವಸೆ ನೀಡಿದರು.</p>.<p>‘ಕನ್ಹೇರಿ ಮಠವು ದೇಶದ ಆದರ್ಶ ಮಠವಾಗಿದೆ. ಅದೃಶ್ಯ ಕಾಡಸಿದ್ಧೇಶ್ವರ ಶ್ರೀಗಳು ಕರ್ನಾಟಕದಲ್ಲಿಯೂ ದೊಡ್ಡ ಮಠ ತೆರೆಯಬೇಕು. ಅವರ ಆದರ್ಶ ಕೆಲಸಗಳು ನಮಗೂ ಬೇಕು. ಮಠಕ್ಕೆ ಬೇಕಾಗುವ ಜಾಗ ಹಾಗೂ ಅಗತ್ಯ ನೆರವನ್ನು ನೀಡಲಾಗುವುದು’ ಎಂದೂ ವಾಗ್ದಾನ ಮಾಡಿದರು.</p>.<p><strong>ಮತಾಂತರ ತಡೆಯಬೇಕು:</strong> ‘ಸ್ವಾಮೀಜಿಗಳು ಮತಾಂತರ ತಡೆಯಲು ಮುಂದಾಗಬೇಕು. ಇಲ್ಲವಾದರೆ ಮತಾಂತರ ರೀತಿಯಲ್ಲೇ ನಮ್ಮನ್ನು ದೇಶಾಂತರ ಮಾಡುತ್ತಾರೆ’ ಎಂದು ಕನ್ಹೇರಿ ಸಿದ್ಧಗಿರಿ ಮಠಾಧೀಶ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಎಚ್ಚರಿಕೆ ನೀಡಿದರು.</p>.<p>ಇದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಕೃಷಿ ವಿಜ್ಞಾನ ಕೇಂದ್ರವನ್ನು ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನ್ಹೇರಿ (ಕೊಲ್ಹಾಪುರ ಜಿಲ್ಲೆ):</strong> ‘ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕನ್ಹೇರಿಯ ಸಿದ್ದಗಿರಿ ಮಠದ ಆವರಣದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ₹ 3 ಕೋಟಿ ನೆರವು ನೀಡುವುದಾಗಿ’ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.</p>.<p>ಮಠದ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಸಂತ ಸಮಾವೇಶ ಉದ್ಘಾಟಿಸಿ, ಕನ್ನಡ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ಈಗಾಗಲೇ<br />₹ 1 ಕೋಟಿ ನೀಡಿದ್ದು, ದೀಪಾವಳಿ ಹಬ್ಬಕ್ಕೆ ಮತ್ತೆ ₹ 2 ಕೋಟಿ ನೀಡಲಾ ಗುವುದು’ ಎಂದು ಭರವಸೆ ನೀಡಿದರು.</p>.<p>‘ಕನ್ಹೇರಿ ಮಠವು ದೇಶದ ಆದರ್ಶ ಮಠವಾಗಿದೆ. ಅದೃಶ್ಯ ಕಾಡಸಿದ್ಧೇಶ್ವರ ಶ್ರೀಗಳು ಕರ್ನಾಟಕದಲ್ಲಿಯೂ ದೊಡ್ಡ ಮಠ ತೆರೆಯಬೇಕು. ಅವರ ಆದರ್ಶ ಕೆಲಸಗಳು ನಮಗೂ ಬೇಕು. ಮಠಕ್ಕೆ ಬೇಕಾಗುವ ಜಾಗ ಹಾಗೂ ಅಗತ್ಯ ನೆರವನ್ನು ನೀಡಲಾಗುವುದು’ ಎಂದೂ ವಾಗ್ದಾನ ಮಾಡಿದರು.</p>.<p><strong>ಮತಾಂತರ ತಡೆಯಬೇಕು:</strong> ‘ಸ್ವಾಮೀಜಿಗಳು ಮತಾಂತರ ತಡೆಯಲು ಮುಂದಾಗಬೇಕು. ಇಲ್ಲವಾದರೆ ಮತಾಂತರ ರೀತಿಯಲ್ಲೇ ನಮ್ಮನ್ನು ದೇಶಾಂತರ ಮಾಡುತ್ತಾರೆ’ ಎಂದು ಕನ್ಹೇರಿ ಸಿದ್ಧಗಿರಿ ಮಠಾಧೀಶ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಎಚ್ಚರಿಕೆ ನೀಡಿದರು.</p>.<p>ಇದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಕೃಷಿ ವಿಜ್ಞಾನ ಕೇಂದ್ರವನ್ನು ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>