<p><strong>ಮಧುರೆ (ಚಿತ್ರದುರ್ಗ)</strong>: ‘ಉಪ್ಪಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಮೀಸಲಾತಿ ಸೌಲಭ್ಯ ಕಲ್ಪಿಸಲು ಕುಲಶಾಸ್ತ್ರೀಯ ಅಧ್ಯಯನ ವರದಿ ಅಂಗೀಕರಿಸಿ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಯತ್ನಿಸುವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಹೊಸದುರ್ಗ ತಾಲ್ಲೂಕಿನ ಬ್ರಹ್ಮ ವಿದ್ಯಾನಗರದಲ್ಲಿ ಭಗೀರಥ ಗುರುಪೀಠ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ರಾಜ್ಯ ಮಟ್ಟದ ಭಗೀರಥ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>‘ಮೀಸಲಾತಿ ಕುರಿತ ಕುಲಶಾಸ್ತ್ರೀಯ ಅಧ್ಯಯನದ ವರದಿಯನ್ನು ಸಂಬಂಧಿ ಸಿದ ಇಲಾಖೆಗೆ ಕಳುಹಿಸಲಾಗುವುದು. ಮೀಸಲಾತಿ ಕುರಿತ ತೀರ್ಪುಗಳನ್ನು ಪರಿಶೀಲಿಸಿ ನ್ಯಾಯಕೊಡುತ್ತೇವೆ. ಬೇರೆ ವರ್ಗಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳುವೆ’ ಎಂದರು.</p>.<p>‘ಭದ್ರಾ ನಾಲೆಗೆ ಭಗೀರಥ ಮಹರ್ಷಿ ಹೆಸರಿಡಲಾಗುವುದು. ಭಗೀರಥ ಏಕಶಿಲಾ ಮೂರ್ತಿ, ಥೀಮ್ ಪಾರ್ಕ್ ಹಾಗೂ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಅನುದಾನ ಒದಗಿಸಲಾಗುವುದು’ ಎಂದು ತಿಳಿಸಿದರು.</p>.<p>ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ‘ಉಪ್ಪಾರ ಸಮುದಾಯ ಶೈಕ್ಷಣಿಕ, ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕಿದ್ದು, ಪರಿಶಿಷ್ಟ ಪಂಗಡದ ಮೀಸಲಾತಿ ಕಲ್ಪಿಸಬೇಕಿದೆ. ಕೆ.ಮೇತ್ರಿ ಅವರು ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಇದನ್ನು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಮಾಡಬೇಕು’ ಎಂದು ಮನವಿ ಮಾಡಿದರು.</p>.<p>‘ಎಸ್. ನಿಜಲಿಂಗಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಮಠಕ್ಕೆ 500 ಎಕರೆ ಜಮೀನು ಮಂಜೂರು ಮಾಡಿದ್ದರು. ಈ ಜಮೀನಿನ ಗುತ್ತಿಗೆ ಅವಧಿ 2011ಕ್ಕೆ ಮುಕ್ತಾಯವಾಗಿದೆ. ಇದನ್ನು ಗುರುಪೀಠಕ್ಕೆ ಶಾಶ್ವತವಾಗಿ ಮಂಜೂರು ಮಾಡಬೇಕು’ ಎಂದರು.</p>.<p class="Subhead">ಪ್ರಶಸ್ತಿ ಪ್ರದಾನ: ಬಿಹಾರದ ಉಪಮುಖ್ಯಮಂತ್ರಿ ರೇಣುದೇವಿ, ಕೇಂದ್ರ ಸಚಿವ ಕಪಿಲ್ ಮೋರೇಶ್ವರ್ ಪಾಟೀಲ್ ಅವರಿಗೆ ‘ಭಗೀರಥ ಶ್ರೀ’, ಜಯದೇವ ಹೃದ್ರೋಗ ಆಸ್ಪತ್ರೆಯ ಸಿ.ಎನ್.ಮಂಜುನಾಥ್ ಅವರಿಗೆ ‘ಭಗೀರಥ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಶಿವಮೂರ್ತಿ ಮುರುಘಾ ಶರಣರು, ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸಚಿವರಾದ ಗೋವಿಂದ ಎಂ. ಕಾರಜೋಳ, ಕೋಟ ಶ್ರೀನಿವಾಸ ಪೂಜಾರಿ, ಬೈರತಿ ಬಸವರಾಜ, ಬಿ.ಸಿ.ನಾಗೇಶ್, ಬಿ.ಸಿ.ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುರೆ (ಚಿತ್ರದುರ್ಗ)</strong>: ‘ಉಪ್ಪಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಮೀಸಲಾತಿ ಸೌಲಭ್ಯ ಕಲ್ಪಿಸಲು ಕುಲಶಾಸ್ತ್ರೀಯ ಅಧ್ಯಯನ ವರದಿ ಅಂಗೀಕರಿಸಿ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಯತ್ನಿಸುವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಹೊಸದುರ್ಗ ತಾಲ್ಲೂಕಿನ ಬ್ರಹ್ಮ ವಿದ್ಯಾನಗರದಲ್ಲಿ ಭಗೀರಥ ಗುರುಪೀಠ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ರಾಜ್ಯ ಮಟ್ಟದ ಭಗೀರಥ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>‘ಮೀಸಲಾತಿ ಕುರಿತ ಕುಲಶಾಸ್ತ್ರೀಯ ಅಧ್ಯಯನದ ವರದಿಯನ್ನು ಸಂಬಂಧಿ ಸಿದ ಇಲಾಖೆಗೆ ಕಳುಹಿಸಲಾಗುವುದು. ಮೀಸಲಾತಿ ಕುರಿತ ತೀರ್ಪುಗಳನ್ನು ಪರಿಶೀಲಿಸಿ ನ್ಯಾಯಕೊಡುತ್ತೇವೆ. ಬೇರೆ ವರ್ಗಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳುವೆ’ ಎಂದರು.</p>.<p>‘ಭದ್ರಾ ನಾಲೆಗೆ ಭಗೀರಥ ಮಹರ್ಷಿ ಹೆಸರಿಡಲಾಗುವುದು. ಭಗೀರಥ ಏಕಶಿಲಾ ಮೂರ್ತಿ, ಥೀಮ್ ಪಾರ್ಕ್ ಹಾಗೂ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಅನುದಾನ ಒದಗಿಸಲಾಗುವುದು’ ಎಂದು ತಿಳಿಸಿದರು.</p>.<p>ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ‘ಉಪ್ಪಾರ ಸಮುದಾಯ ಶೈಕ್ಷಣಿಕ, ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕಿದ್ದು, ಪರಿಶಿಷ್ಟ ಪಂಗಡದ ಮೀಸಲಾತಿ ಕಲ್ಪಿಸಬೇಕಿದೆ. ಕೆ.ಮೇತ್ರಿ ಅವರು ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಇದನ್ನು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಮಾಡಬೇಕು’ ಎಂದು ಮನವಿ ಮಾಡಿದರು.</p>.<p>‘ಎಸ್. ನಿಜಲಿಂಗಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಮಠಕ್ಕೆ 500 ಎಕರೆ ಜಮೀನು ಮಂಜೂರು ಮಾಡಿದ್ದರು. ಈ ಜಮೀನಿನ ಗುತ್ತಿಗೆ ಅವಧಿ 2011ಕ್ಕೆ ಮುಕ್ತಾಯವಾಗಿದೆ. ಇದನ್ನು ಗುರುಪೀಠಕ್ಕೆ ಶಾಶ್ವತವಾಗಿ ಮಂಜೂರು ಮಾಡಬೇಕು’ ಎಂದರು.</p>.<p class="Subhead">ಪ್ರಶಸ್ತಿ ಪ್ರದಾನ: ಬಿಹಾರದ ಉಪಮುಖ್ಯಮಂತ್ರಿ ರೇಣುದೇವಿ, ಕೇಂದ್ರ ಸಚಿವ ಕಪಿಲ್ ಮೋರೇಶ್ವರ್ ಪಾಟೀಲ್ ಅವರಿಗೆ ‘ಭಗೀರಥ ಶ್ರೀ’, ಜಯದೇವ ಹೃದ್ರೋಗ ಆಸ್ಪತ್ರೆಯ ಸಿ.ಎನ್.ಮಂಜುನಾಥ್ ಅವರಿಗೆ ‘ಭಗೀರಥ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಶಿವಮೂರ್ತಿ ಮುರುಘಾ ಶರಣರು, ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸಚಿವರಾದ ಗೋವಿಂದ ಎಂ. ಕಾರಜೋಳ, ಕೋಟ ಶ್ರೀನಿವಾಸ ಪೂಜಾರಿ, ಬೈರತಿ ಬಸವರಾಜ, ಬಿ.ಸಿ.ನಾಗೇಶ್, ಬಿ.ಸಿ.ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>