<p><strong>ಬೆಳಗಾವಿ:</strong> ‘ಕಾಂಗ್ರೆಸ್ಸಿಗೆ ಎರಡೇ ದಿನದಲ್ಲಿ ಅಧಿಕಾರದ ಅಮಲು ಹೆಚ್ಚಾಗಿದೆ. ಜನರ ವಾಕ್ ಸ್ವಾತಂತ್ರ್ಯ ಕಿತ್ತುಕೊಂಡ ರೀತಿಯಲ್ಲಿ ಮಂತ್ರಿಗಳು ಮಾತನಾಡುತ್ತಿದ್ದಾರೆ. ಅತಿ ಶೀಘ್ರದಲ್ಲೇ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ತಲೆದೋರಬಹುದು’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.</p><p>ನಗರದಲ್ಲಿ ಸೋಮವಾರ ಬಿಜೆಪಿ ಮುಖಂಡರ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಅವರು ತುರ್ತುಪರಿಸ್ಥಿತಿ ಹೇರಿದರೂ ಬಿಜೆಪಿ ಅದಕ್ಕೆ ಅವಕಾಶ ನೀಡುವುದಿಲ್ಲ. ಜನರ ಪರವಾಗಿ ನಿಂತು ಹೋರಾಡುತ್ತದೆ’ ಎಂದರು.</p><p>‘ಗೋಹತ್ಯೆ ನಿಷೇಧ, ಪಠ್ಯಪುಸ್ತಕ ಪರಿಷ್ಕೃರಣೆ ಮುಂತಾದ ವಿಷಯಗಳ ಕುರಿತು ಮಂತ್ರಿಗಳು ಬೇಕಾಬಿಟ್ಟಿ ಮಾತನಾಡುತ್ತಿದ್ದಾರೆ. ಯಾರಾದರೂ ಸರ್ಕಾರನ್ನು ಪ್ರಶ್ನಿಸಿದರೆ ಜೈಲಿಗೆ ಹಾಕುತ್ತೇವೆ ಎಂದು ಹೆದರಿಸುತ್ತಿದ್ದಾರೆ. ಅಧಿಕಾರದ ಅಮಲು ಇಷ್ಟು ಬೇಗೆ ನೆತ್ತಿಗೇರಿದೆ’ ಎಂದು ದೂರಿದರು.</p><p>‘ಗೋ ಹತ್ಯೆ ನಿಷೇಧ ಕಾಯ್ದೆ 1965ರಿಂದಲೂ ಇದೆ. ನಾವು ತಿದ್ದುಪಡಿ ಮಾಡಿ ಶಿಕ್ಷೆ ಕಠಿಣಗೊಳಿಸಿದ್ದೇವೆ ಅಷ್ಟೇ. ಗೋವಿನ ವಿಷಯಕ್ಕೆ ಬಂದರೆ ಕಾಂಗ್ರೆಸ್ಗೆ ಆಪತ್ತು ಕಾದಿದೆ’ ಎಂದೂ ಎಚ್ಚರಿಸಿದರು.</p><p>ಇದೇನು ಇಸ್ಲಾಂ ರಾಷ್ಟ್ರವಲ್ಲ: </p><p>‘ಅಧಿಕಾರಿಗಳು ಕೆಲಸ ಮಾಡದಿದ್ದರೆ ಚಾಕುವಿನಿಂದ ಹೊಡೆಯುತ್ತೇವೆ, ಜೈಲಿಗೆ ಹಾಕುತ್ತೇವೆ ಎಂದು ಸ್ವತಃ ಸಚಿವರೇ ಹೇಳುತ್ತಿದ್ದಾರೆ. ಜನ ಕೊಟ್ಟ ಅಧಿಕಾರವನ್ನು ಈ ರೀತಿ ದುರುಪಯೋಗ ಮಾಡಿಕೊಳ್ಳಬಾರದು. ಯಾರ್ಯಾರನ್ನು ಜೈಲಿಗೆ ಹಾಕುತ್ತೀರೋ ಹಾಕಿ. ಜನರು ತಿರುಗಿಬಿದ್ದರೆ ನಿಮಗೆ ಜೈಲುಗಳು ಸಾಲುವುದಿಲ್ಲ. ತಾಕತ್ತು ಬಳಸಿ ಜನರನ್ನೇ ಮಣಿಸುತ್ತೇವೆ ಎನ್ನಲು ಇದೇನು ಇಸ್ಲಾಂ ರಾಷ್ಟ್ರವಲ್ಲ’ ಎಂದೂ ಬೊಮ್ಮಾಯಿ ಕಿಡಿ ಕಾರಿದರು.</p><p>‘ಗ್ಯಾರಂಟಿ’ಗಳನ್ನು ಜಾರಿ ಮಾಡಲು ಅಭಿವೃದ್ಧಿ ಕೆಲಸಗಳನ್ನು ತಡೆಯಬಾರದು. ‘ವಿವೇಕ’ ಯೋಜನೆ ನಿಲ್ಲಿಸದಂತೆ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಮನವಿ ಮಾಡುತ್ತೇನೆ’ ಎಂದರು.</p><p>‘ಇದಕ್ಕೂ ಮುಂಚೆ ಕಾಂಗ್ರೆಸ್ ಸರ್ಕಾರ ಇದ್ದಾಗ ‘ಹೆಸ್ಕಾಂ’ ಮೇಲೆ ದೊಡ್ಡ ಹೊರೆ ಹಾಕಿದ್ದರು. ನಾನು ₹13 ಸಾವಿರ ಕೋಟಿ ನೀಡಿ ಹೆಸ್ಕಾಂ ಹಾಗೂ ಕೆಪಿಸಿಟಿಸಿಎಲ್ ಪುನಶ್ಚೇತನ ಮಾಡಿದ್ದೆ. ಈಗ ಏಕಾಏಕಿ ವಿದ್ಯುತ್ ಬಿಲ್ ಹೆಚ್ಚಳ ಮಾಡಿ, ಜನರಿಗೆ ದ್ರೋಹ ಮಾಡಿದ್ದಾರೆ’ ಎಂದೂ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಕಾಂಗ್ರೆಸ್ಸಿಗೆ ಎರಡೇ ದಿನದಲ್ಲಿ ಅಧಿಕಾರದ ಅಮಲು ಹೆಚ್ಚಾಗಿದೆ. ಜನರ ವಾಕ್ ಸ್ವಾತಂತ್ರ್ಯ ಕಿತ್ತುಕೊಂಡ ರೀತಿಯಲ್ಲಿ ಮಂತ್ರಿಗಳು ಮಾತನಾಡುತ್ತಿದ್ದಾರೆ. ಅತಿ ಶೀಘ್ರದಲ್ಲೇ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ತಲೆದೋರಬಹುದು’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.</p><p>ನಗರದಲ್ಲಿ ಸೋಮವಾರ ಬಿಜೆಪಿ ಮುಖಂಡರ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಅವರು ತುರ್ತುಪರಿಸ್ಥಿತಿ ಹೇರಿದರೂ ಬಿಜೆಪಿ ಅದಕ್ಕೆ ಅವಕಾಶ ನೀಡುವುದಿಲ್ಲ. ಜನರ ಪರವಾಗಿ ನಿಂತು ಹೋರಾಡುತ್ತದೆ’ ಎಂದರು.</p><p>‘ಗೋಹತ್ಯೆ ನಿಷೇಧ, ಪಠ್ಯಪುಸ್ತಕ ಪರಿಷ್ಕೃರಣೆ ಮುಂತಾದ ವಿಷಯಗಳ ಕುರಿತು ಮಂತ್ರಿಗಳು ಬೇಕಾಬಿಟ್ಟಿ ಮಾತನಾಡುತ್ತಿದ್ದಾರೆ. ಯಾರಾದರೂ ಸರ್ಕಾರನ್ನು ಪ್ರಶ್ನಿಸಿದರೆ ಜೈಲಿಗೆ ಹಾಕುತ್ತೇವೆ ಎಂದು ಹೆದರಿಸುತ್ತಿದ್ದಾರೆ. ಅಧಿಕಾರದ ಅಮಲು ಇಷ್ಟು ಬೇಗೆ ನೆತ್ತಿಗೇರಿದೆ’ ಎಂದು ದೂರಿದರು.</p><p>‘ಗೋ ಹತ್ಯೆ ನಿಷೇಧ ಕಾಯ್ದೆ 1965ರಿಂದಲೂ ಇದೆ. ನಾವು ತಿದ್ದುಪಡಿ ಮಾಡಿ ಶಿಕ್ಷೆ ಕಠಿಣಗೊಳಿಸಿದ್ದೇವೆ ಅಷ್ಟೇ. ಗೋವಿನ ವಿಷಯಕ್ಕೆ ಬಂದರೆ ಕಾಂಗ್ರೆಸ್ಗೆ ಆಪತ್ತು ಕಾದಿದೆ’ ಎಂದೂ ಎಚ್ಚರಿಸಿದರು.</p><p>ಇದೇನು ಇಸ್ಲಾಂ ರಾಷ್ಟ್ರವಲ್ಲ: </p><p>‘ಅಧಿಕಾರಿಗಳು ಕೆಲಸ ಮಾಡದಿದ್ದರೆ ಚಾಕುವಿನಿಂದ ಹೊಡೆಯುತ್ತೇವೆ, ಜೈಲಿಗೆ ಹಾಕುತ್ತೇವೆ ಎಂದು ಸ್ವತಃ ಸಚಿವರೇ ಹೇಳುತ್ತಿದ್ದಾರೆ. ಜನ ಕೊಟ್ಟ ಅಧಿಕಾರವನ್ನು ಈ ರೀತಿ ದುರುಪಯೋಗ ಮಾಡಿಕೊಳ್ಳಬಾರದು. ಯಾರ್ಯಾರನ್ನು ಜೈಲಿಗೆ ಹಾಕುತ್ತೀರೋ ಹಾಕಿ. ಜನರು ತಿರುಗಿಬಿದ್ದರೆ ನಿಮಗೆ ಜೈಲುಗಳು ಸಾಲುವುದಿಲ್ಲ. ತಾಕತ್ತು ಬಳಸಿ ಜನರನ್ನೇ ಮಣಿಸುತ್ತೇವೆ ಎನ್ನಲು ಇದೇನು ಇಸ್ಲಾಂ ರಾಷ್ಟ್ರವಲ್ಲ’ ಎಂದೂ ಬೊಮ್ಮಾಯಿ ಕಿಡಿ ಕಾರಿದರು.</p><p>‘ಗ್ಯಾರಂಟಿ’ಗಳನ್ನು ಜಾರಿ ಮಾಡಲು ಅಭಿವೃದ್ಧಿ ಕೆಲಸಗಳನ್ನು ತಡೆಯಬಾರದು. ‘ವಿವೇಕ’ ಯೋಜನೆ ನಿಲ್ಲಿಸದಂತೆ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಮನವಿ ಮಾಡುತ್ತೇನೆ’ ಎಂದರು.</p><p>‘ಇದಕ್ಕೂ ಮುಂಚೆ ಕಾಂಗ್ರೆಸ್ ಸರ್ಕಾರ ಇದ್ದಾಗ ‘ಹೆಸ್ಕಾಂ’ ಮೇಲೆ ದೊಡ್ಡ ಹೊರೆ ಹಾಕಿದ್ದರು. ನಾನು ₹13 ಸಾವಿರ ಕೋಟಿ ನೀಡಿ ಹೆಸ್ಕಾಂ ಹಾಗೂ ಕೆಪಿಸಿಟಿಸಿಎಲ್ ಪುನಶ್ಚೇತನ ಮಾಡಿದ್ದೆ. ಈಗ ಏಕಾಏಕಿ ವಿದ್ಯುತ್ ಬಿಲ್ ಹೆಚ್ಚಳ ಮಾಡಿ, ಜನರಿಗೆ ದ್ರೋಹ ಮಾಡಿದ್ದಾರೆ’ ಎಂದೂ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>