<p><strong>ಬೆಂಗಳೂರು: ‘</strong>ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರವು ಕಾನೂನು ಕ್ರಮಕ್ಕೆ ಮುಂದಾಗಿರುವುದು ಖಂಡನೀಯ’ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.</p>.<p>ಭಾನುವಾರ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ರಾಜ್ಯ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳುವುದಕ್ಕೆ ಮತ್ತು ರಾಜಕೀಯದ ಕಾರಣಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದೆ. ಈ ವಿಚಾರದಲ್ಲಿ ರಾಜ್ಯಪಾಲರನ್ನು ಸಿಲುಕಿಸಿರುವುದು ಅವರಿಗೆ ಮಾಡುತ್ತಿರುವ ಅವಮಾನವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಸರ್ಕಾರ ಸಿದ್ಧಪಡಿಸಿಕೊಟ್ಟ ಭಾಷಣದ ಮೊದಲ ಮತ್ತು ಕೊನೆಯ ಪುಟಗಳನ್ನು ರಾಜ್ಯಪಾಲರು ಓದದೇ ಇರುವ ಹಲವು ನಿದರ್ಶನಗಳು ನಮ್ಮೆದುರು ಇವೆ. ಆದರೆ, ಆ ಕಾರಣಕ್ಕೆ ಅವರನ್ನು ಗೂಂಡಾಗಿರಿಗೆ ಗುರಿ ಮಾಡುವುದು ಸರಿಯಲ್ಲ. ಈ ಹಿಂದೆ ರಾಜ್ಯಪಾಲರಾಗಿದ್ದ ಎಚ್.ಆರ್.ಭಾರಧ್ವಾಜ್ ಅವರು ಹಲವು ಬಾರಿ ಮಿತಿಮೀರಿ ವರ್ತಿಸಿದ್ದಾರೆ. ಆಗ ರಾಜಭವನವು, ಕಾಂಗ್ರೆಸ್ ಭವನ ಆಗಿತ್ತು ಎಂಬುದನ್ನು ಸಿದ್ದರಾಮಯ್ಯ ಅವರು ಮರೆಯುತ್ತಿದ್ದಾರೆಯೇ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಸರ್ಕಾರವು ಕ್ರಮ ತೆಗೆದುಕೊಳ್ಳಲೇಬೇಕು ಎಂದಿದ್ದರೆ, ವಿಧಾನ ಪರಿಷತ್ ಸದಸ್ ಬಿ.ಕೆ.ಹರಿಪ್ರಸಾದ್ ವಿರುದ್ಧ ತೆಗೆದುಕೊಳ್ಳಬೇಕು. ಅವರನ್ನು ತಕ್ಷಣವೇ ವಜಾ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರವು ಕಾನೂನು ಕ್ರಮಕ್ಕೆ ಮುಂದಾಗಿರುವುದು ಖಂಡನೀಯ’ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.</p>.<p>ಭಾನುವಾರ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ರಾಜ್ಯ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳುವುದಕ್ಕೆ ಮತ್ತು ರಾಜಕೀಯದ ಕಾರಣಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದೆ. ಈ ವಿಚಾರದಲ್ಲಿ ರಾಜ್ಯಪಾಲರನ್ನು ಸಿಲುಕಿಸಿರುವುದು ಅವರಿಗೆ ಮಾಡುತ್ತಿರುವ ಅವಮಾನವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಸರ್ಕಾರ ಸಿದ್ಧಪಡಿಸಿಕೊಟ್ಟ ಭಾಷಣದ ಮೊದಲ ಮತ್ತು ಕೊನೆಯ ಪುಟಗಳನ್ನು ರಾಜ್ಯಪಾಲರು ಓದದೇ ಇರುವ ಹಲವು ನಿದರ್ಶನಗಳು ನಮ್ಮೆದುರು ಇವೆ. ಆದರೆ, ಆ ಕಾರಣಕ್ಕೆ ಅವರನ್ನು ಗೂಂಡಾಗಿರಿಗೆ ಗುರಿ ಮಾಡುವುದು ಸರಿಯಲ್ಲ. ಈ ಹಿಂದೆ ರಾಜ್ಯಪಾಲರಾಗಿದ್ದ ಎಚ್.ಆರ್.ಭಾರಧ್ವಾಜ್ ಅವರು ಹಲವು ಬಾರಿ ಮಿತಿಮೀರಿ ವರ್ತಿಸಿದ್ದಾರೆ. ಆಗ ರಾಜಭವನವು, ಕಾಂಗ್ರೆಸ್ ಭವನ ಆಗಿತ್ತು ಎಂಬುದನ್ನು ಸಿದ್ದರಾಮಯ್ಯ ಅವರು ಮರೆಯುತ್ತಿದ್ದಾರೆಯೇ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಸರ್ಕಾರವು ಕ್ರಮ ತೆಗೆದುಕೊಳ್ಳಲೇಬೇಕು ಎಂದಿದ್ದರೆ, ವಿಧಾನ ಪರಿಷತ್ ಸದಸ್ ಬಿ.ಕೆ.ಹರಿಪ್ರಸಾದ್ ವಿರುದ್ಧ ತೆಗೆದುಕೊಳ್ಳಬೇಕು. ಅವರನ್ನು ತಕ್ಷಣವೇ ವಜಾ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>