<p><strong>ಬೆಂಗಳೂರು</strong>: ಕಾಂಗ್ರೆಸ್ ನಾಯಕರಲ್ಲಿ ರಾಷ್ಟ್ರಪ್ರೇಮ ಕ್ಷೀಣಿಸಿದೆ. ಭಯೋತ್ಪಾದಕ ದಾಳಿಗಳು ನಡೆದಾಗ ಅವರ ಪ್ರತಿಕ್ರಿಯೆಗಳು ಸಂಶಯ ಮೂಡಿಸುತ್ತವೆ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.</p>.<p>ಭಾರತ–ಪಾಕಿಸ್ತಾನದ ಮಧ್ಯೆ ಯುದ್ದದ ಕಾರ್ಮೋಡ ದಟ್ಟವಾಗಿರುವಾಗ ಕಾಂಗ್ರೆಸ್ ಹಿರಿಯ ನಾಯಕರ ಹೇಳಿಕೆ ಗಮನಿಸಿದರೆ 55 ವರ್ಷ ಈ ದೇಶದಲ್ಲಿ ಆಡಳಿತ ನಡೆಸಿದ್ದು ಇವರಾ ಎನ್ನುವ ಸಂಶಯ ಮೂಡುತ್ತದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರಪ್ರೇಮ ಪತನವಾಗಿರುವುದು ಸ್ಪಷ್ಟವಾಗಿದೆ ಎಂದು ದೂರಿದ್ದಾರೆ.</p>.<p>ಪ್ರಧಾನಮಂತ್ರಿ ನರೇಂದ್ರ ಮೋದಿ ಯುದ್ದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳುವಂತೆ ಈಗಾಗಲೇ ಮೂರು ಸೇನಾಪಡೆಗಳಿಗೆ ಅಧಿಕಾರ ಕೊಟ್ಡಿದ್ದಾರೆ. ಇಂತಹ ಸಮಯದಲ್ಲಿ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ಗೆ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದಿದ್ದಾರೆ.</p>.<p>ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ದೆಹಲಿ, ಬೆಂಗಳೂರು, ಹೈದರಾಬಾದ್ ಸೇರಿದಂತೆ ಹಲವಾರು ಕಡೆ ಭಯೋತ್ಪಾದಕ ದಾಳಿಗಳು ನಡೆದಾಗ ಕ್ರಮ ತೆಗೆದುಕೊಳ್ಳದಿರುವುದು, ಮುಂಬೈ ಮೇಲೆ 2008ರಲ್ಲಿ ನಡೆದ ದಾಳಿಯಲ್ಲಿ 130 ಅಮಾಯಕರ ಸಾವು ಘಟಿಸಿದಾಗ, ಗುಪ್ತಚರ ವೈಫಲ್ಯ ಆಗಿತ್ತು. ಆ ಬಳಿಕ, ಉಗ್ರರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎನ್ನುವ ತೀರ್ಮಾನ ತೆಗೆದುಕೊಂಡಿದ್ದನ್ನು ಆ ಪಕ್ಷದ ನಾಯಕರು ಮರೆತಂತಿದೆ. ಇಂದಿರಾ ಗಾಂಧಿಯವರು ಯುದ್ದ ಮಾಡುವಾಗ ಅಂದಿನ ಸೇನೆಯ ಮುಖ್ಯಸ್ಥ ಮಾಣೆಕ್ ಷಾ ಅವರ ಮಾತು ಕೇಳಿದ್ದರು. ಆ ಸಂದರ್ಭದಲ್ಲಿ ಎಲ್ಲ ವಿರೋದ ಪಕ್ಷಗಳು ಸರ್ಕಾರದ ಪರವಾಗಿ ನಿಂತಿದ್ದವು. ಅದರ ನೆನಪೇ ಇಲ್ಲದಂತೆ, ಅತ್ಯಂತ ಬೇಜವಾಬ್ದಾರಿ ವಿರೋಧ ಪಕ್ಷವಾಗಿ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ ಎಂದು ಬೊಮ್ಮಾಯಿ ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಾಂಗ್ರೆಸ್ ನಾಯಕರಲ್ಲಿ ರಾಷ್ಟ್ರಪ್ರೇಮ ಕ್ಷೀಣಿಸಿದೆ. ಭಯೋತ್ಪಾದಕ ದಾಳಿಗಳು ನಡೆದಾಗ ಅವರ ಪ್ರತಿಕ್ರಿಯೆಗಳು ಸಂಶಯ ಮೂಡಿಸುತ್ತವೆ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.</p>.<p>ಭಾರತ–ಪಾಕಿಸ್ತಾನದ ಮಧ್ಯೆ ಯುದ್ದದ ಕಾರ್ಮೋಡ ದಟ್ಟವಾಗಿರುವಾಗ ಕಾಂಗ್ರೆಸ್ ಹಿರಿಯ ನಾಯಕರ ಹೇಳಿಕೆ ಗಮನಿಸಿದರೆ 55 ವರ್ಷ ಈ ದೇಶದಲ್ಲಿ ಆಡಳಿತ ನಡೆಸಿದ್ದು ಇವರಾ ಎನ್ನುವ ಸಂಶಯ ಮೂಡುತ್ತದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರಪ್ರೇಮ ಪತನವಾಗಿರುವುದು ಸ್ಪಷ್ಟವಾಗಿದೆ ಎಂದು ದೂರಿದ್ದಾರೆ.</p>.<p>ಪ್ರಧಾನಮಂತ್ರಿ ನರೇಂದ್ರ ಮೋದಿ ಯುದ್ದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳುವಂತೆ ಈಗಾಗಲೇ ಮೂರು ಸೇನಾಪಡೆಗಳಿಗೆ ಅಧಿಕಾರ ಕೊಟ್ಡಿದ್ದಾರೆ. ಇಂತಹ ಸಮಯದಲ್ಲಿ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ಗೆ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದಿದ್ದಾರೆ.</p>.<p>ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ದೆಹಲಿ, ಬೆಂಗಳೂರು, ಹೈದರಾಬಾದ್ ಸೇರಿದಂತೆ ಹಲವಾರು ಕಡೆ ಭಯೋತ್ಪಾದಕ ದಾಳಿಗಳು ನಡೆದಾಗ ಕ್ರಮ ತೆಗೆದುಕೊಳ್ಳದಿರುವುದು, ಮುಂಬೈ ಮೇಲೆ 2008ರಲ್ಲಿ ನಡೆದ ದಾಳಿಯಲ್ಲಿ 130 ಅಮಾಯಕರ ಸಾವು ಘಟಿಸಿದಾಗ, ಗುಪ್ತಚರ ವೈಫಲ್ಯ ಆಗಿತ್ತು. ಆ ಬಳಿಕ, ಉಗ್ರರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎನ್ನುವ ತೀರ್ಮಾನ ತೆಗೆದುಕೊಂಡಿದ್ದನ್ನು ಆ ಪಕ್ಷದ ನಾಯಕರು ಮರೆತಂತಿದೆ. ಇಂದಿರಾ ಗಾಂಧಿಯವರು ಯುದ್ದ ಮಾಡುವಾಗ ಅಂದಿನ ಸೇನೆಯ ಮುಖ್ಯಸ್ಥ ಮಾಣೆಕ್ ಷಾ ಅವರ ಮಾತು ಕೇಳಿದ್ದರು. ಆ ಸಂದರ್ಭದಲ್ಲಿ ಎಲ್ಲ ವಿರೋದ ಪಕ್ಷಗಳು ಸರ್ಕಾರದ ಪರವಾಗಿ ನಿಂತಿದ್ದವು. ಅದರ ನೆನಪೇ ಇಲ್ಲದಂತೆ, ಅತ್ಯಂತ ಬೇಜವಾಬ್ದಾರಿ ವಿರೋಧ ಪಕ್ಷವಾಗಿ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ ಎಂದು ಬೊಮ್ಮಾಯಿ ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>