ಸರ್ಕಾರದ ವಿಶೇಷ ವಲಯದಲ್ಲಿ ಖಾಸಗಿ ಸಂಸ್ಥೆಗಳೇ ಉತ್ಪಾದನಾ ಘಟಕ ಆರಂಭಿಸುತ್ತಿವೆ. ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆಯೂ ಅಲ್ಲಿ ಉತ್ಪನ್ನ ತಯಾರಿಕೆ ಘಟಕ ಸ್ಥಾಪಿಸಿ, ಪ್ರತಿ ವರ್ಷ ₹ 10 ಸಾವಿರ ಕೋಟಿ ವಹಿವಾಟು ನಡೆಸಬೇಕು ಎಂದ ಅವರು, ’ಹೆಚ್ಚಿನ ಉದ್ಯೋಗ ಅವಕಾಶ ಕಲ್ಪಿಸಿದ ಸಂಸ್ಥೆಗಳಿಗೆ ಸಹಾಯಧನ ನೀಡಲಾಗುವುದು. ಕನ್ನಡಿಗರಿಗೆ ಹೆಚ್ಚು ಉದ್ಯೋಗಗಳು ಲಭಿಸಬೇಕು’ ಎಂದರು.