‘ರಾಜ್ಯದ ಹಲವು ಪ್ರದೇಶಗಳಲ್ಲಿ ಗಾಂಜಾ ಬೆಳೆಯುತ್ತಿರುವ ಮಾಹಿತಿ ಇದೆ. ನಮ್ಮ ಸರ್ಕಾರ ಬಂದ ಮೇಲೆ ಅದಕ್ಕೆ ಕಡಿವಾಣ ಹಾಕಿದ್ದೇವೆ. ದುರ್ಗಮ ಪ್ರದೇಶಗಳು, ಕಾಡು ಮತ್ತು ಬೆಟ್ಟ ಗುಡ್ಡಗಳಲ್ಲಿ ಬೆಳೆಯುತ್ತಿರುವುದನ್ನು ಗುರುತಿಸಲಾಗಿದೆ. ಅವುಗಳನ್ನು ನಾಶಪಡಿಸಲಾಗುವುದು. ಆಂಧ್ರಪ್ರದೇಶ, ತೆಲಂಗಾಣ ಮತ್ತು ಗೋವಾ ರಾಜ್ಯಗಳಿಂದ ಬರುವ ಮಾದಕ ದ್ರವ್ಯಗಳನ್ನು ಕಟ್ಟುನಿಟ್ಟಾಗಿ ತಡೆಯಲಾಗುವುದು’ ಎಂದರು.